ಪತ್ನಿ,ಮಗಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಟೆಕ್ಕಿ
Team Udayavani, May 25, 2018, 3:44 PM IST
ಮೈಸೂರು: ಪತ್ನಿ ಮತ್ತು ಮಗಳನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಟೆಕ್ಕಿಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ರಾತ್ರಿ ನಗರದ ವಿಜಯನಗರ 4 ನೇ ಹಂತದಲ್ಲಿ ನಡೆದಿದೆ.
ಪ್ರಜ್ವಲ್ ಎಂಬ 42 ವರ್ಷದ ಟೆಕ್ಕಿ ಪತ್ನಿ ಸವಿತಾ (39) ಮತ್ತು ಸಿಂಚನಾ (10) ಳನ್ನು ಬುಧವಾರ ರಾತ್ರಿ ಕೊಲೆಗೈದಿದ್ದಾನೆ. ಹತ್ಯೆಯ ಒಂದು ದಿನದ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ನೆರೆ ಹೊರೆಯವರು ಸ್ಥಳಕ್ಕಾಗಮಿಸಿ ಆತನನ್ನು ತಪ್ಪಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಯಾವ ಕಾರಣಕ್ಕಾಗಿ ಕೊಲೆ ಗೈದಿದ್ದಾನೆ ಎನ್ನುವ ವಿಚಾರ ತನಿಖೆಯಿಂದ ತಿಳಿದು ಬರಬೇಕಿದೆ. ಪ್ರಜ್ವಲ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ