ಮೈಸೂರು-ಹುಣಸೂರು ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Team Udayavani, Jun 22, 2018, 12:43 PM IST
ಮೈಸೂರು: ನಗರದ ಜಲದರ್ಶಿನಿ ಅತಿಥಿಗೃಹದ ಬಳಿಯ ರಾಷ್ಟ್ರೀಯ ಹೆದ್ದಾರಿ ನೇರಗೊಳಿಸುವ ಕಾಮಗಾರಿಯಲ್ಲಿ ಕೋಟಿಗಟ್ಟಲೆ ಹಣ ಲೂಟಿಯಾಗಿದ್ದು, ಈ ಬಗ್ಗೆ ತನಿಖೆಗೆ ಒತ್ತಾಯಿಸಲಾಗುವುದು ಹಾಗೂ ಮುಂದಿನ ಒಂದು ವಾರದೊಳಗೆ ಈಗಾಗಲೇ ರೂಪಿಸಿರುವ ಯೋಜನೆ ಪ್ರಕಾರ ಕಾಮಗಾರಿಯನ್ನು ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.
ಕೇಂದ್ರ ಸರ್ಕಾರದ ಸೆಂಟ್ರಲ್ ರೋಡ್ ಫಂಡ್(ಸಿಆರ್ಎಫ್) 12.5 ಕೋಟಿ ರೂ. ವೆಚ್ಚದಲ್ಲಿ ನಡೆಸಿರುವ ಕಾಮಗಾರಿ ಕಳೆಪೆ ಗುಣಮಟ್ಟದಿಂದ ಕೂಡಿದ್ದು, ಜತೆಗೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್ಸಿಂಹ, ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿ ಆರಂಭಕ್ಕೂ ಮುನ್ನ ರೂಪಿಸಿದ್ದ ಯೋಜನೆ ಪ್ರಕಾರ ಕೆಲಸ ಮಾಡಿಲ್ಲ. ರಸ್ತೆಯನ್ನು ನೇರಗೊಳಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಜಲದರ್ಶಿನಿ ಸಮೀಪದ ರಸ್ತೆಯಲ್ಲಿ ವಾಹನದಟ್ಟಣೆ ಹೆಚ್ಚಿರುವ ಕಾರಣ ಸಾಕಷ್ಟು ಅಪಘಾತಗಳು ಸಂಭವಿಸಿದೆ. ಹೀಗಾಗಿ ರಸ್ತೆಯನ್ನು ನೇರಗೊಳಿಸುವ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಆಗಿದ್ದ ಗೋವಿಂದರಾಜು ಕಾಮಗಾರಿಯಲ್ಲಿ ಕಣ್ಣಿಗೆ ಬಣ್ಣಹಚ್ಚುವ ಕೆಲಸ ಮಾಡಿದ್ದು, ಮೂರು ತಿಂಗಳ ಕಾಲ ರಸ್ತೆ ಬಂದ್ ಮಾಡಿ,
ಯಾವುದೇ ಹೊಸ ಕಾಮಕಾರಿ ಮಾಡದೆ ಡಾಂಬರು ಕಿತ್ತು ಹೊಸ ಡಾಂಬರು ಹಾಕಿ ಸುಮ್ಮನಾಗಿದ್ದಾರೆ. ಆ ಮೂಲಕ ಕಾಮಗಾರಿಯಲ್ಲಿ ಹಣ ಲೂಟಿ ಮಾಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಚಂದ್ರಪ್ಪ, ಎಂಜಿನಿಯರ್ ಯೋಗಾನಂದ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Parameshwara; ಪ್ರಜ್ವಲ್ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ
Prajwal Revanna Case; ಪೆನ್ಡ್ರೈವ್ ಆರೋಪಿಗಳ ಜತೆ ಶ್ರೇಯಸ್: ಫೋಟೊ ವೈರಲ್
D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ