ಪ್ರತ್ಯೇಕ ಪ್ರಕರಣ: ನಗದು, ಚಿನ್ನಾಭರಣ ಕಳವು


Team Udayavani, Jun 23, 2018, 12:22 PM IST

m4-pratyeka.jpg

ಮೈಸೂರು: ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಬೀಗ ತೆಗೆದು ಒಳನುಗ್ಗಿರುವ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಸಿದ್ದಲಿಂಗೇಶ್ವರ ಬಡಾವಣೆ ನಿವಾಸಿ ಚಂದ್ರಶೇಖರ್‌ ಮನೆಯಲ್ಲಿ ಈ ಘಟನೆ ನಡೆದಿದ್ದು, ಕಳ್ಳರು ಮನೆಯಲ್ಲಿದ್ದ 80 ಸಾವಿರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. 

ಮನೆ ಮಾಲಿಕ ಚಂದ್ರಶೇಖರ್‌ ಬುಧವಾರ ಸಂಜೆ 5 ಗಂಟೆ ಸಮಯದಲ್ಲಿ ಕೆಲಸದ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಇದನ್ನು ಹೊಂಚು ಹಾಕಿ ಕಳ್ಳತನ ನಡೆಸಿರುವ ಕಳ್ಳರು ಬೀರುವಿನ ಲಾಕರ್‌ನಲ್ಲಿಟ್ಟಿದ್ದ 25 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಚಂದ್ರಶೇಖರ್‌ ಗುರುವಾರ ಮಧ್ಯಾಹ್ನ ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನಗದು ಅಪಹರಣ: ಮನೆ ಬಾಗಿಲು ತೆಗೆದು ಒಳನುಗ್ಗಿರುವ ಕಳ್ಳರು 5 ಸಾವಿರ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ಮೈಸೂರು ನಗರದ ವಾಯುದಳದ ಸಿವಿಲಿಯನ್‌ ವಸತಿಗೃಹದಲ್ಲಿ ನಡೆದಿದೆ. ವಾಯುದಳ ಕಚೇರಿ ನೌಕರ ಮಂಜುನಾಥ ಮನೆಯಲ್ಲಿ ಕಳ್ಳತನ ನಡೆದಿದ್ದು, ಹೆಂಡತಿ ಹಾಗೂ ಮಕ್ಕಳು ಹುಬ್ಬಳ್ಳಿಗೆ ಹೋಗಿದ್ದರಿಂದ ಮನೆಗೆ ಬೀಗ ಹಾಕಿಕೊಂಡು, ಜನತಾನಗರದಲ್ಲಿ ವಾಸವಾಗಿರುವ ತಮ್ಮ ತಂದೆ-ತಾಯಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ವಸತಿ ಗೃಹಕ್ಕೆ ಬಂದಾಗ ಬೀರುವಿನಲ್ಲಿದ್ದ 5 ಸಾವಿರ ರೂ. ಕಳುವಾಗಿರುವುದು ಕಂಡುಬಂದಿದೆ. ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಳ್ಳಿ ವಸ್ತು ಕಳವು ಯತ್ನ: ಸಮಾರಂಭಕ್ಕೆಂದು ತಂದಿದ್ದ ಬೆಳ್ಳಿ ವಸ್ತುಗಳನ್ನು ಕಳವು ಮಾಡಲು ಯತ್ನಿಸಿ, ಮಹಿಳೆಯೊಬ್ಬರು ಪೊಲೀಸರ ಅತಿಥಿಯಾಗಿರುವ ಘಟನೆ ನಗರದ ಲಕ್ಷ್ಮಿಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ನಗರದ ಹೊಯ್ಸಳ ಕರ್ನಾಟಕ ಸಭಾಭವನದಲ್ಲಿ ಶುಕ್ರವಾರ ಉಪನಯನ ಕಾರ್ಯಕ್ರಮ ನಡೆಯುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ಶಾಂತಮ್ಮ(50) ಎಂಬಾಕೆ ಅಲ್ಲಿದ್ದ ಬೆಳ್ಳಿ ಪದಾರ್ಥಗಳನ್ನು ತಮ್ಮ ಚೀಲಕ್ಕೆ ತುಂಬಿಸಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಳು. ಅಷ್ಟರಲ್ಲೇ ಮಹಿಳೆಯ ವರ್ತನೆಯಿಂದ ಅನುಮಾನಗೊಂಡ ಕೆಲವರು, ಆಕೆಯ ಪೂರ್ವಾಪರ ವಿಚಾರಿಸಲು ಆರಂಭಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮಹಿಳೆ ಸೂಕ್ತ ಉತ್ತರ ನೀಡದೆ ತಡಬಡಾಯಿಸಿದ್ದಾಳೆ. 

ಇದರಿಂದ ಕಾರ್ಯಕ್ರಮ ಆಯೋಜಕರು ಲಕ್ಷಿಪುರಂ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆಕೆಯ ವಿಚಾರಣೆ ನಡೆಸಿ, ಆಕೆಯ ಬಳಿಯಿದ್ದ ಚೀಲವನ್ನು ಪರಿಶೀಲಿಸಿದಾಗ ಬೆಳ್ಳಿ ಪದಾರ್ಥಗಳು ಕಂಡುಬಂದಿದೆ. ಇದರಿಂದಾಗಿ ಆಕೆಯನ್ನು ವಶಕ್ಕೆ ಪಡೆದ ಲಕ್ಷಿಪುರಂ ಠಾಣೆ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.