ದೇಶಕಂಡ ಶ್ರೇಷ್ಠ ರಾಜಕಾರಣಿ: ಶ್ರೀನಿವಾಸ್ಪ್ರಸಾದ್
Team Udayavani, Aug 17, 2018, 11:20 AM IST
ಮೈಸೂರು: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಶ್ರೇಷ್ಠ ರಾಜಕಾರಣಿ. ಇಡೀ ಸಂಸತ್ತು ಸಾರ್ಥಕವಾಯಿತು ಎನ್ನುವ ರೀತಿಯಲ್ಲಿ ರಾಜಕಾರಣ ಮಾಡಿದವರು ಎಂದು ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಕಂಬನಿ ಮಿಡಿದಿದ್ದಾರೆ.
ನೆಹರೂ ಅವರಂತಹ ಹಿರಿಯರೇ ವಾಜಪೇಯಿ ಅವರ ಮಾತುಗಳನ್ನು ಮೆಚ್ಚಿಕೊಂಡಿದ್ದರು. ವಾಜಪೇಯಿ ಅವರು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದಾಗ ಅವರೊಂದಿಗೆ ನಾನು ಸಮಿತಿಯ ಸದಸ್ಯನಾಗಿ ಕೆಲಸ ಮಾಡಿದ್ದೆ.
ಅವರು ಪ್ರಧಾನಿಯಾದಾಗ ಅವರ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವನಾಗಿ ಕೆಲಸ ಮಾಡುವ ಅವಕಾಶ ದೊರೆತಿತ್ತು. ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ ಸೇರಿದಂತೆ 27 ರಾಜಕೀಯ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಆಡಳಿತ ನಡೆಸುವುದು ಸುಲಭದ ಮಾತಲ್ಲ.
ಆದರೆ, ವಿಶಿಷ್ಟ ವ್ಯಕ್ತಿತ್ವದ ವಾಜಪೇಯಿ ಉತ್ತಮ ಆಡಳಿತ ನಡೆಸಿದ್ದರು. ನಾನು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದೆ. ಅವರೊಂದಿಗೆ ಒಟ್ಟಿಗೆ ಕುಳಿತು ಊಟ ಮಾಡಿದ್ದೇನೆ. ವಾಜಪೇಯಿ ಅವರಿಗೆ ಜಿಲೇಬಿ ಎಂದರೆ ಬಹಳ ಇಷ್ಟ. ಅವರನ್ನು ಕಳೆದುಕೊಂಡು ದೇಶವೇ ಶೋಕಸಾಗರದಲ್ಲಿ ಮುಳುಗಿದೆ ಎಂದು ಸಂತಾಪ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ