ಆರ್ಭಟಿಸಿದ ಲಕ್ಷ್ಮಣತೀರ್ಥ: ಬೆಳೆ ಜಲಾವೃತ
Team Udayavani, Aug 18, 2018, 12:22 PM IST
ಹುಣಸೂರು: ಕೊಡಗು ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಹನಗೋಡು ಅಣೆಕಟ್ಟೆಯ ಹಿನ್ನೀರಿನಿಂದ ಸಾವಿರಾರು ಎಕರೆ ಪ್ರದೇಶದ ಬೆಳೆ ಜಲಾವೃತವಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಹನಗೋಡು ಅಣೆಕಟ್ಟೆ ಮೇಲೆ 7,360 ಕ್ಯೂಸೆಕ್ ನೀರು ಹರಿಯುತ್ತಿದೆ. ನಾಲೆಗೆ 600 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರಿಂದ ರೈತರು ಕಂಗಾಲಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಿನ್ನೇರಿನಲ್ಲಿ ಬೆಳೆ ಮುಳುಗಡೆ: ಹನಗೋಡು ಅಣೆಕಟ್ಟೆ ಹಿನ್ನೀರಿನಿಂದ ಕೋಣನಹೊಸಹಳ್ಳಿ, ಬಿಲ್ಲೇನಹೊಸಹಳ್ಳಿ, ಕೆ.ಜಿ.ಹಬ್ಬನಕುಪ್ಪೆ, ಕೊಳವಿಗೆ, ನೇಗತ್ತೂರು, ಶಿಂಡೇನಹಳ್ಳಿ, ಮುದನಗನೂರು, ಚಿಕ್ಕ ಹೆಜೂರು, ದೊಡ್ಡ ಹೆಜೂರು, ದಾಸನಪುರ, ಹಿಂಡಗುಡ್ಲು, ಕಿರಂಗೂರು, ಹನಗೋಡು, ಕಾಮಗೌಡನಹಳ್ಳಿ, ಹೆಗ್ಗಂದೂರು, ವಡ್ಡಂಬಾಳು, ಬೀರನಹಳ್ಳಿ, ಲಕ್ಷ್ಮೀಪುರ, ಕೂಡೂರು, ಚನ್ನಸೋಗೆ, ರಾಮೇನಹಳ್ಳಿ, ನಿಲುವಾಗಿಲು ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ನದಿ ಅಂಚಿನ ಪಾತ್ರಗಳಲ್ಲಿ ಬೆಳೆದಿದ್ದ ಹತ್ತಿ,
ಮುಸುಕಿನ ಜೋಳ, ತಂಬಾಕು, ಶುಂಠಿ, ಹಲಸಂದೆ, ರಾಗಿ, ಭತ್ತದ ಸಸಿ ಮಡಿ ಸೇರಿದಂತೆ ಮತ್ತಿತರ ಬೆಳೆಗಳು ಸಾವಿರಾರು ಎಕರೆ ಪ್ರದೇಶದ ನೀರಿನಲ್ಲಿ ಮುಳುಗಿದ್ದು, ರೈತರು ಚಿಂತಾಕ್ರಾಂತರಾಗಿದ್ದಾರೆ. ಈ ಹಿಂದೆಯೂ ಇದೇರೀತಿ ಹಿನ್ನೀರು ನುಗ್ಗಿ ನಷ್ಟ ಉಂಟು ಮಾಡಿತ್ತು. ಮತ್ತೂಮ್ಮೆ ನೀರು ನುಗ್ಗಿದ್ದು, ಲಕ್ಷಾಂತರ ರೂ.ನಷ್ಟ ಉಂಟಾಗಿದೆ. ನಗರದ ಒಂಟೇಪಾಳ್ಯಬೋರೆಯ ಸೇರಿದಂತೆ ಹನಗೋಡು ಭಾಗದಲ್ಲಿ ಎರಡು ಮನೆ ಗೋಡೆ ಕುಸಿದಿದೆ.
ಹುಣಸೂರು ನಗರ ಸೇರಿದಂತೆ ತಾಲೂಕಾದ್ಯಂತ ಮಳೆ ರಚ್ಚೆ ಹಿಡಿದಿದೆ. ರಸ್ತೆಗಳಲ್ಲಿ ನೀರಿನಲ್ಲೇ ಸಂಚರಿಸುತ್ತಿರುವ ವಾಹನಗಳು. ನಗರದ ಬೈಪಾಸ್ ರಸ್ತೆಯ ಅಲ್ಲಲ್ಲಿ ಕೆರೆಯಂತೆ ಗುಂಡಿ ನಿರ್ಮಾಣವಾಗಿದೆ. ಮಳೆ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಮೋಹನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?