22 ಕಡೆ ಅರಳಿದ ಕಮಲ, ಪಾಲಿಕೆಗೂ ನುಗ್ಗಿದ ಆನೆ


Team Udayavani, Sep 4, 2018, 11:34 AM IST

m3-22kade.jpg

ಮೈಸೂರು: ರಾಜಕೀಯ ಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಮಹಾನಗರ ಪಾಲಿಕೆ ಚುನಾವಣಾ ಫ‌ಲಿತಾಂಶ ಹಲವು ಸ್ವಾರಸ್ಯಕರ ಸಂಗತಿಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಪಕ್ಷ ಬಿಜೆಪಿ 20ರ ಗಡಿದಾಟಿದರೆ, ಬಿಎಸ್ಪಿ ಇದೇ ಮೊದಲ ಬಾರಿಗೆ ಪಾಲಿಕೆಯಲ್ಲಿ ತನ್ನ ಖಾತೆ ತೆರೆದಿದೆ.

ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್‌ನಿಂದ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 393 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆಗೆ ನಿಂತಿದ್ದರು. ಇರುವ ವಾರ್ಡ್‌ಗಳಿಗಿಂತಲೂ ಕಣದಲ್ಲಿದ್ದ ಅಭ್ಯರ್ಥಿಗಳ ಸಂಖ್ಯೆಯೇ ಹೆಚ್ಚಾಗಿದ್ದರ ಕಾರಣದಿಂದ ಮತದಾರರೂ ಸಹ ತಮ್ಮ ಹಕ್ಕು ಚಲಾವಣೆಗೆ ಹೆಚ್ಚಿನ ಆಸಕ್ತಿ ತೋರಿರಲಿಲ್ಲ. ಇದರಿಂದಾಗಿ ಆ.31ರಂದು ನಡೆದ ಚುನಾವಣೆಯಲ್ಲಿ ಶೇ.50.01 ಮತದಾನ ನಡೆದಿತ್ತು. ಹೀಗಾಗಿ ಪಾಲಿಕೆ ಚುನಾವಣಾ ಫ‌ಲಿತಾಂಶ ಏನಾಗಲಿದೆ ಎಂಬ ಸಹಜ ಕುತೂಹಲ ಸಾಂಸ್ಕೃತಿಕ ನಗರಿಯ ಜನತೆಯಲ್ಲಿ ಮನೆಮಾಡಿತ್ತು. 

22 ಕಡೆ ಅರಳಿದ ಕಮಲ: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈವರೆಗೂ ಒಮ್ಮೆಯೂ ಮೇಯರ್‌ ಸ್ಥಾನಕ್ಕೇರದ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತ ಪಡೆಯುವ ನಿರೀಕ್ಷೆ ಹೊಂದಿತ್ತು. ಚುನಾವಣೆಗೂ ಮುನ್ನ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಬಹುತೇಕ ಹೊಸಬರಿಗೆ ಮಣೆಹಾಕಿದ್ದ ಬಿಜೆಪಿಗೆ ನಿರೀಕ್ಷಿತ ಯಶಸ್ಸು ಸಿಗದಿದ್ದರೂ, 22 ಸ್ಥಾನದೊಂದಿಗೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೃಪ್ತಿ ಸಿಕ್ಕಿದೆ. ಕಳೆದ ಮೂರು ದಶಕಗಳ ಪಾಲಿಕೆ ಇತಿಹಾಸದಲ್ಲಿ 3ನೇ ಅವಧಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ರಾಷ್ಟ್ರೀಯ ಪಕ್ಷ ಇದೇ ಮೊದಲ ಬಾರಿಗೆ 22 ಸ್ಥಾನಗಳನ್ನು ಪಡೆಯುವ ಮೂಲಕ ಹೊಸ ಮುನ್ನುಡಿ ಬರೆದಿದೆ. 

ಪಾಲಿಕೆ ಪ್ರವೇಶಿಸಿದ ಆನೆ: ನಗರ ಪಾಲಿಕೆಗೆ ಇದೇ ಮೊದಲ ಬಾರಿಗೆ ಆನೆ ಪ್ರವೇಶಿಸಿದೆ. ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಗೆದ್ದು ಗಮನ ಸೆಳೆದಿದ್ದ ಬಿಎಸ್ಪಿ, ಈ ಬಾರಿ ಪಾಲಿಕೆ ಚುನಾವಣೆಯಲ್ಲೂ ತನ್ನ ಖಾತೆ ತೆರೆದಿದೆ. ನಗರ ಪಾಲಿಕೆ 65 ವಾರ್ಡ್‌ಗಳಲ್ಲಿ 11 ಕಡೆಗಳಲ್ಲಿ ಸ್ಪರ್ಧಿಸಿದ್ದ ಬಿಎಸ್ಪಿ ಅಭ್ಯರ್ಥಿಗಳಲ್ಲಿ 56ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಬೇಗಂ ಉರುಫ್ ಪಲ್ಲವಿ ಗೆಲುವಿನ ನಗೆಬೀರಿದ್ದಾರೆ. ಪ್ರಮುಖ ಪಕ್ಷಗಳ ಪ್ರಬಲ ಅಭ್ಯರ್ಥಿಗಳ ಪೈಪೋಟಿ ನಡುವೆಯೂ ಮತದಾರರ ಮನಗೆದ್ದಿರುವ ಬಿಎಸ್ಪಿ ಅಭ್ಯರ್ಥಿ 4108 ಮತಗಳನ್ನು ಪಡೆದು ಗಮನ ಸೆಳೆದಿದ್ದಾರೆ. 

ಪಾಲಿಕೆಗೆ ಕೊಡಗಿನ ಕಲಿ: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಹಲವು ಹೊಸ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರಲ್ಲಿ 20ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೊಡಗಿನ ಎಂ.ಯು.ಸುಬ್ಬಯ್ಯ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ವಿಜಯನಗರ ವ್ಯಾಪ್ತಿಯ 20ನೇ ವಾರ್ಡಿನಿಂದ ಸ್ಪರ್ಧಿಸಿ 2245 ಮತಗಳನ್ನು ಪಡೆದಿರುವ ಎಂ.ಯು.ಸುಬ್ಬಯ್ಯ, ಜೆಡಿಎಸ್‌ನ ಗೋಪಾಲಸ್ವಾಮಿ ವಿರುದ್ಧ 423 ಮತಗಳಿಂದ ಗೆಲುವು ಕಂಡಿದ್ದಾರೆ. ಆ ಮೂಲಕ ಮೊದಲ ಬಾರಿಗೆ ಪಾಲಿಕೆ ಪ್ರವೇಶಿಸಿದ ಮೊದಲ ಕೊಡಗಿನ ಕಲಿ ಎಂಬ ಹೆಗ್ಗಳಿಕೆ ಪಡೆದಿರುವುದು ವಿಶೇಷ. 

ಪಕ್ಷಾಂತರಿಗಳಿಗೆ ಪಾಠ: ಪಾಲಿಕೆ ಚುನಾವಣೆಯಲ್ಲಿ ಒಮ್ಮೆ ಆಯ್ಕೆಯಾಗಿ ಟಿಕೆಟ್‌ ಸಿಗದೆ ಪಕ್ಷಾಂತರಗೊಂಡಿದ್ದ ಹಲವು ಪಕ್ಷಾಂತರಿಗಳಿಗೆ ಮತದಾರರು ತಕ್ಕಪಾಠ ಕಲಿಸಿದ್ದಾರೆ. ವಾರ್ಡ್‌ ವಿಂಗಡಣೆ, ಮೀಸಲಾತಿ ಕಾರಣಕ್ಕಾಗಿ ಈ ಬಾರಿ ಪ್ರಮುಖ ಪಕ್ಷಗಳ ಅನೇಕರಿಗೆ ಟಿಕೆಟ್‌ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ಕೆಲವರು ಪಕ್ಷೇತರರಾಗಿ ಸ್ಪರ್ಧಿಸಿದ್ದರೆ, ಕೆಲವರು ರಾತ್ರೋರಾತ್ರಿ ಬೇರೆ ಪಕ್ಷಕ್ಕೆ ಸೇರ್ಪಡೆಯಾಗಿ ಟಿಕೆಟ್‌ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು.

ಹೀಗೆ ಟಿಕೆಟ್‌ ಆಸೆಗಾಗಿ ಪಕ್ಷಾಂತರಗೊಂಡಿದ್ದ ಬಿಜೆಪಿಯ ಜೆ.ಎಸ್‌.ಜಗದೀಶ್‌(43ನೇ ವಾರ್ಡ್‌), ಜೆಡಿಎಸ್‌ನ ಎಂ.ಡಿ.ಪಾರ್ಥಸಾರತಿ(51ನೇ ವಾರ್ಡ್‌), ಪಿ.ದೇವರಾಜ್‌(40ನೇ ವಾರ್ಡ್‌), ಮಾಜಿ ಮೇಯರ್‌ ಬಿ.ಭಾಗ್ಯವತಿ(21ನೇ ವಾರ್ಡ್‌), ಬಿ.ಎಂ.ನಟರಾಜ್‌(29ನೇ ವಾರ್ಡ್‌) ಅವರುಗಳನ್ನು ಮತದಾರರು ತಿರಸ್ಕರಿಸಿದ್ದಾರೆ. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.