ಪಾಲಿಕೆ ಮತ್ತೆ ಅತಂತ್ರ: ಕೈ-ತೆನೆ ದೋಸ್ತಿ?


Team Udayavani, Sep 4, 2018, 11:34 AM IST

m1-palike.jpg

ಮೈಸೂರು: ಮೈಸೂರು ಮಹಾ ನಗರಪಾಲಿಕೆಯಲ್ಲಿ ಈ ಬಾರಿ ಸ್ವಂತ ಬಲದಿಂದ ಅಧಿಕಾರ ಹಿಡಿಯಬೇಕು ಎಂದು ತಮ್ಮದೇ ಆದ ಕಾರ್ಯತಂತ್ರಗಳನ್ನು ಹೆಣೆದು ಚುನಾವಣೆ ಎದುರಿಸಿದ್ದ ಮೂರು ಪಕ್ಷಗಳಿಗೂ ನಗರದ ಮತದಾರ ಮಣೆ ಹಾಕದಿರುವುದರಿಂದ ಪಾಲಿಕೆಯಲ್ಲಿ ಮತ್ತೆ ಅತಂತ್ರ ಪರಿಸ್ಥಿತಿ ಉಂಟಾಗಿದೆ.

65 ಸದಸ್ಯ ಬಲದ ಮೈಸೂರು ಮಹಾ ನಗರಪಾಲಿಕೆಯಲ್ಲಿ ಬಿಜೆಪಿ 22, ಕಾಂಗ್ರೆಸ್‌ 19, ಜೆಡಿಎಸ್‌ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಿಎಸ್‌ಪಿ ಮೊದಲ ಬಾರಿಗೆ ಖಾತೆ ತೆರೆದಿದ್ದರೆ, ಐವರು ಪಕ್ಷೇತರರು ಜಯಗಳಿಸಿದ್ದಾರೆ. 22 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಬಿಜೆಪಿ ಅತಿ ದೊಡ್ಡಪಕ್ಷವಾಗಿ ಹೊರಹೊಮ್ಮಿದ್ದರೂ ಅಧಿಕಾರ ಕೈಗೆಟುಕದಂತಾಗಿದೆ.

ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರಿಗೂ ಮೇಯರ್‌ ಚುನಾವಣೆಯಲ್ಲಿ ಮತದಾನಕ್ಕೆ ಹಕ್ಕು ಇರುವುದರಿಂದ ಪಾಲಿಕೆ ಅಧಿಕಾರ ಹಿಡಿಯಲು 33 ಸದಸ್ಯರ ಬೆಂಬಲದ ಜೊತೆಗೆ ಮ್ಯಾಜಿಕ್‌ ಸಂಖ್ಯೆ 38 ಬೇಕು. ಆದರೆ, ಯಾವುದೇ ಪಕ್ಷದ ಬಳಿ ಈ ಸಂಖ್ಯಾಬಲ ಇಲ್ಲದಿರುವುದರಿಂದ ಪಾಲಿಕೆಯಲ್ಲಿ ಮತ್ತೂಮ್ಮೆ ಮೈತ್ರಿ ಆಡಳಿತ ಬರುವುದು ಖಚಿತ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಚುನಾವಣೆಯಲ್ಲೂ ಅತಂತ್ರ ಪರಿಸ್ಥಿತಿ ಉಂಟಾಗಿದ್ದರಿಂದ ಜೆಡಿಎಸ್‌- ಬಿಜೆಪಿ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಿದ್ದವು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವುದರಿಂದ ಮೈತ್ರಿಯ ಮುಂದುವರಿದ ಭಾಗವಾಗಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡೂ ಪಕ್ಷಗಳು

ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳದೆ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಎರಡೂ ಪಕ್ಷಗಳ ನಾಯಕರು ತಮ್ಮದು ಫ್ರೆಂಡ್ಲಿಫೈಟ್‌ ಎಂದು ಹೇಳಿರುವುದರಿಂದ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದಿರುವ ಕಡೆಗಳಲ್ಲಿ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಈ ಬಾರಿ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ಹಂಚಿಕೊಳ್ಳುವ ಸಾಧ್ಯತೆ ಹೆಚ್ಚಿದೆ. 

ಫ‌ಲ ನೀಡದ ಟಾರ್ಗೆಟ್‌: ಈ ಬಾರಿ ಹೇಗಾದರೂ ಸರಿ ಪಾಲಿಕೆ ಅಧಿಕಾರ ಹಿಡಿಯಲೇಬೇಕು ಎಂಬ ಉದ್ದೇಶದಿಂದ ಬಿಜೆಪಿ ನಾಯಕರು ನಗರಪಾಲಿಕೆ ವ್ಯಾಪ್ತಿಗೆ ಬರುವ ನಗರದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಟಾರ್ಗೆಟ್‌-20 ಗುರಿ ಹಾಕಿಕೊಂಡು ಚುನಾವಣೆ ಎದುರಿಸಲಾಗಿತ್ತು. ಆದರೆ, ಹಾಲಿ ಸದಸ್ಯರಿಗೆ ಟಿಕೆಟ್‌ ನಿರಾಕರಿಸಿ, ವಲಸೆ ಬಂದವರಿಗೆ ಮಣೆ ಹಾಕಿದ್ದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದರೆ,

ಬಿಜೆಪಿಯ ರಾಜ್ಯಮಟ್ಟದ ನಾಯಕರ್ಯಾರೂ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸದಿದ್ದುದು ಟಾರ್ಗೆಟ್‌-20 ಗುರಿ ತಲುಪುವಲ್ಲಿ ಮುಗ್ಗರಿಸಿದೆ. ಜೆಡಿಎಸ್‌ ಅಭ್ಯರ್ಥಿಗಳ ಪರ ಸ್ವತಃ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಂದು ಪ್ರಚಾರ ನಡೆಸಿ ಮತಯಾಚನೆ ಮಾಡಿದರೆ, ಕಾಂಗ್ರೆಸ್‌ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಸಭೆಗಳನ್ನು ಮಾಡಿ ಕಾರ್ಯತಂತ್ರ ಹೆಣೆದಿದ್ದರು, ಜೊತೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಹ ಮತಯಾಚನೆ ಮಾಡಿದರು.

ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿರುವ ಬಿಎಸ್‌ಪಿಯ ಎನ್‌.ಮಹೇಶ್‌ ಅವರು ಸಹ ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದು ಫ‌ಲ ನೀಡಿ ಖಾತೆ ತೆರೆಯುವಲ್ಲಿ ಸಫ‌ಲವಾದರೆ, ಕಳೆದ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಎಸ್‌ಡಿಪಿಐ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಸಫ‌ಲವಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.