ಶಿಕ್ಷಕ ವೃತ್ತಿ ಪವಿತ್ರವಾದುದು: ಶಾಸಕ ನಿರಂಜನಕುಮಾರ್‌


Team Udayavani, Sep 6, 2018, 3:19 PM IST

mys-1.jpg

ಗುಂಡ್ಲುಪೇಟೆ: ಭವಿಷ್ಯದ ಮುಂದಿನ ಪೀಳಿಗೆಯನ್ನು ಉತ್ತಮವಾಗಿ ರೂಪಿಸುವ ಹೊಣೆ ಹೊತ್ತ ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ದೇಶ ಸೇವೆಯಷ್ಟೇ ಪ್ರಾಮುಖ್ಯತೆಯನ್ನು ಶಿಕ್ಷಕ ವೃತ್ತಿ ಪಡೆದಿದೆ ಎಂದು ಶಾಸಕ ನಿರಂಜನಕುಮಾರ್‌ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾನ್ಯ ಶಿಕ್ಷಕರಾಗಿದ್ದ ಡಾ.ರಾಧಾಕೃಷ್ಣನ್‌ ದೇಶದ ಅತ್ಯುನ್ನತ ರಾಷ್ಟ್ರಪತಿ ಸ್ಥಾನಕ್ಕೇರಲು ನಮ್ಮ ದೇಶದ ಸಂಸ್ಕೃತಿಯೇ ಕಾರಣ. ಭವಿಷ್ಯದ ಮುಂದಿನ ಪೀಳಿಗೆ ರೂಪಿಸುವಲ್ಲಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಹೊಣೆ ದೊಡ್ಡದಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ಹಾಗೂ ಅರ್ಹ ಶಿಕ್ಷಕರಿದ್ದರೂ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವುದು ತಪ್ಪಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ತಾಪಂ ಅಧ್ಯಕ್ಷ ಜಗದೀಶಮೂರ್ತಿ ಮಾತನಾಡಿ, ಎಲ್ಲಾ ಮಹನೀಯರ ಜಯಂತಿ ಅವರ ಹೆಸರಿನಲ್ಲಿಯೇ ಆಚರಿಸಿದರೂ ಡಾ.ರಾಧಾಕೃಷ್ಣನ್‌ ಮಾತ್ರ ಶಿಕ್ಷಕರ ದಿನಾಚರಣೆ ಮಾಡುವ ಮೂಲಕ ತಮ್ಮ ವೃತ್ತಿಗೆ ಗೌರವ ನೀಡಿದ್ದಾರೆ. ಆದ್ದರಿಂದ ಬೇರೆ ಹುದ್ದೆಗಳಿಗೆ ಹೋಲಿಕೆ ಮಾಡಿಕೊಂಡು ಕೀಳರಿಮೆಯಿಂದ ಕುಗ್ಗದೆ ತಮ್ಮ ವೃತ್ತಿಗೆ ಇನ್ನೂ ಹೆಚ್ಚಿನ ಗೌರವ ದೊರಕುವಂತೆ ಮಾಡಬೇಕು ಎಂದರು.

ಪುರಸಭೆ ಅಧ್ಯಕ್ಷ ಗಿರೀಶ್‌ ಮಾತನಾಡಿ, ಮಕ್ಕಳು ಮನೆಗಿಂತ ಹೆಚ್ಚಿನ ಸಮಯ ಶಾಲೆಯಲ್ಲಿಯೇ ಕಲಿಯುವುದರಿಂದ ಮಕ್ಕಳ ಮೇಲೆ ಶಿಕ್ಷಕರ ಪ್ರಭಾವ ಹೆಚ್ಚಾಗಿದೆ. ಸ್ವಂತ ಮಕ್ಕಳಂತೆ ಭಾವಿಸಿ ವಿದ್ಯೆಯೊಂದಿಗೆ ವಿನಯವನ್ನೂ ಕಲಿಸಿದರೆ ಮಾತ್ರ ಉತ್ತಮ ಪ್ರಜೆಯಾಗಲು ಸಾಧ್ಯ. ಶಿಕ್ಷಕರು ನೀಡುವ ಸಣ್ಣಪುಟ್ಟ ಶಿಕ್ಷೆಗಳಿಗೂ ಪಾಲಕರು ಅಡ್ಡಿಪಡಿಸಿದರೆ
ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸ ಬೇಕಿದೆ. ಪೋಷಕರು ಶಿಕ್ಷಕರಿಗೂ ಸ್ವಾತಂತ್ರ್ಯ ನೀಡಿ ತಮ್ಮ ಮಕ್ಕಳ ಮೇಲೆ ಹಿಡಿತವನ್ನು ಪಡೆಯಲಿ. ಆಗ ಮಾತ್ರ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದರು.

ಮೆರವಣಿಗೆ: ಇದಕ್ಕೂ ಮೊದಲು ಪ್ರವಾಸಿಮಂದಿರದಲ್ಲಿ ಡಾ. ರಾಧಾಕೃಷ್ಣನ್‌ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಸಂಗೀತ ಶಿಕ್ಷಕ ಸಿದ್ದನಗೌಡ ಪಾಟೀಲ್‌, ಸೋಮು ಹಾಗೂ ತಂಡದವರಿಂದ ನಾಡಗೀತೆ ಹಾಗೂ ಸುಗಮ ಸಂಗೀತ ಗಾಯನ ಆಯೋಜಿಸಲಾಗಿತ್ತು. ವಿವಿಧ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ
ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಚಿತ್ರಕಲಾ, ನಿವೃತ್ತ ಹಾಗೂ ತಾಲೂಕು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ ಉಪನ್ಯಾಸಕ ಡಾ.ನಂದೀಶ್‌ ಹಂಚೆ, ಜಿಪಂ ಸದಸ್ಯರಾದ ಮಹೇಶ್‌, ಬೊಮ್ಮಯ್ಯ, ಚನ್ನಪ್ಪ, ರತ್ನಮ್ಮ, ಅಶ್ವಿ‌ನಿ, ತಾಪಂ ಸದಸ್ಯರಾದ ರೇವಣ್ಣ, ಪ್ರಭಾಕರ್‌, ಬಿಇಒ ಮೋಹನ್‌, ಬಿಆರ್‌ಸಿ ನಂದೀಶ್‌ ಇತರರು ಹಾಜರಿದ್ದರು. 

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.