ದಸರಾ ಪ್ರಾಧಿಕಾರಕ್ಕಾಗಿ ಏಕಾಂಗಿ ಪ್ರತಿಭಟನೆ
Team Udayavani, Sep 7, 2018, 11:24 AM IST
ಮೈಸೂರು: ಮೈಸೂರು ದಸರಾ ಪ್ರಾಧಿಕಾರ ರಚಿಸಿ, ದಸರೆಯನ್ನು ನಾಡಹಬ್ಬ ಎಂದು ಅಧಿಕೃತವಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಕೆ.ಎಂ.ನಿಶಾಂತ್, ಅರಮನೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದರು.
ಯದುವಂಶದ ಕೊನೆಯ ಅರಸ ಜಯಚಾಮರಾಜೇಂದ್ರ ಒಡೆಯರ್ ನಿಧನರಾದ ಬಳಿಕ ದಸರೆಯನ್ನು ನಾಡಹಬ್ಬ ಎಂದು ಸರ್ಕಾರವೇ ಆಚರಿಸುತ್ತಾ ಬಂದಿದ್ದರೂ ಈವರೆಗೂ ನಾಡಹಬ್ಬ ಎಂದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಹೀಗಾಗಿ ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ತರಾತುರಿಯ ಸಿದ್ಧತೆಗಳನ್ನು ಮಾಡಲಾಗುತ್ತದೆ.
ದಸರಾ ಮಹೋತ್ಸವಕ್ಕೆ ಕೇವಲ ಒಂದು ತಿಂಗಳು ಕಾಲಾವಕಾಶ ಇರುವಾಗ ಉಪ ಸಮಿತಿಗಳನ್ನು ರಚಿಸಿ, ಟೆಂಡರ್ ಕರೆಯಲಾಗುತ್ತದೆ. ದಸರಾ ಮಹೋತ್ಸವದಲ್ಲಿ ಕಾರ್ಯಕ್ರಮ ನೀಡಿದ ಕಲಾವಿದರಿಗೆ ವರ್ಷ ಕಳೆದರೂ ಸಂಭಾವನೆ ಪಾವತಿಯಾಗುವುದಿಲ್ಲ. ಅದರ ಬದಲಿಗೆ ದಸರಾ ಪ್ರಾಧಿಕಾರ ರಚಿಸಿ, ವರ್ಷವಿಡೀ ದಸರಾ ನಡೆಯುವಂತೆ ಕಾರ್ಯಕ್ರಮ ರೂಪಿಸಬೇಕು.
ವಿಂಬಲ್ಡನ್ ಕ್ರೀಡಾ ಸಿದ್ಧತೆಯ ಮಾದರಿಯಲ್ಲೇ ದಸರೆ ಮುಗಿದ ಕೂಡಲೇ ಮುಂದಿನ ವರ್ಷದ ವರ್ಷದ ದಸರೆಯ ರೂಪುರೇಷೆಗಳು ಸಿದ್ಧಗೊಳ್ಳಬೇಕು. ಆ ರೀತಿ ವರ್ಷಪೂರ್ತಿ ದಸರಾ ಚಟುವಟಿಕೆಯಿಂದ ಕೂಡಿರುವ ದಸರಾ ಪ್ರಾಧಿಕಾರ ರಚನೆಯಾಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ