ಮೈಸೂರು ರಸ್ತೆಗಳಲ್ಲಿ ಗಜಪಡೆ ತಾಲೀಮು


Team Udayavani, Sep 7, 2018, 11:24 AM IST

m2-mys.jpg

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಆಗಮಿಸಿರುವ ಅರ್ಜುನ ನೇತೃತ್ವದ ಗಜಪಡೆ ಮೈಸೂರಿನ ರಸ್ತೆಗಳಲ್ಲಿ ತಾಲೀಮು ಆರಂಭಿಸಿವೆ. ಗಜಪಡೆಯ ಆರೋಗ್ಯದ ಮೇಲೆ ನಿಗಾ ಇಡುವ ಜೊತೆಗೆ ಅವುಗಳ ಆರೈಕೆ ದೃಷ್ಟಿಯಿಂದ ಪ್ರತಿವರ್ಷದಂತೆ ಈ ವರ್ಷವೂ ತಾಲೀಮು ನಡೆಸುವ ಮುನ್ನ ಆನೆಗಳ ತೂಕ ಪರೀಕ್ಷೆ ಮಾಡಿಸಲಾಯಿತು. 

ತೂಕ ಪರೀಕ್ಷೆ: ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ ಬರೋಬ್ಬರಿ 5650 ಕೆ.ಜಿ ತೂಕದೊಂದಿಗೆ ತನ್ನ ಬಾಹುಬಲ ಪ್ರದರ್ಶಿಸಿದರೆ ಮೊದಲ ತಂಡದಲ್ಲಿ ಬಂದಿರುವ ಉಳಿದ ಆನೆಗಳಾದ ವರಲಕ್ಷ್ಮೀ 3120 ಕೆ.ಜಿ, ಧನಂಜಯ 4045 ಕೆ.ಜಿ.,ಗೋಪಿ 4435 ಕೆ.ಜಿ, ವಿಕ್ರಮ 3985 ಕೆ.ಜಿ, ಹಾಗೂ ಚೈತ್ರ 2920 ಕೆ.ಜಿ ತೂಕವಿದೆ. 

ಕಳೆದ ವರ್ಷ 5250 ಕೆ.ಜಿ ತೂಕವಿದ್ದ ಅರ್ಜುನ, ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 400 ಕೆ.ಜಿ ತೂಕ ಹೆಚ್ಚಿಸಿಕೊಂಡಿದ್ದಾನೆ. ಕಳೆದ ವರ್ಷ 2830 ಕೆ.ಜಿ ತೂಕವಿದ್ದ ಕುಮ್ಕಿ ಅನೆ ವರಲಕ್ಷ್ಮೀ ಈ ವರ್ಷ 290 ಕೆ.ಜಿ ತೂಕ ಹೆಚ್ಚಿಸಿಕೊಂಡು 3120 ಕೆ.ಜಿ ತೂಗಿದೆ. 

ಧನಂಜಯನಿಗೆ ಮೊದಲ ದಸರಾ: ಕಳೆದ ವರ್ಷ ಎರಡನೇ ತಂಡದಲ್ಲಿ ಕರೆತರಲಾಗಿದ್ದ ವಿಕ್ರಮ, ಚೈತ್ರ, ಗೋಪಿ ಆನೆಗಳನ್ನು ಈ ಬಾರಿ ಮೊದಲ ತಂಡದಲ್ಲೇ ಕರೆತರಲಾಗಿದೆ. ಇನ್ನು ದುಬಾರೆ ಆನೆ ಶಿಬಿರದ 35 ವರ್ಷ ಅಂದಾಜು ವಯಸ್ಸಿನ ಧನಂಜಯ ಆನೆಯನ್ನು ಇದೇ ಮೊದಲ ಬಾರಿಗೆ ದಸರಾ ಮಹೋತ್ಸವಕ್ಕೆ ಕರೆತರಲಾಗಿದೆ. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್‌, ಆನೆಗಳ ತೂಕ ಕಳೆದ ವರ್ಷಕ್ಕಿಂತ ಉತ್ತಮವಾಗಿದ್ದು, ಎಲ್ಲಾ ಆನೆಗಳೂ ಆರೋಗ್ಯವಾಗಿವೆ. ಅರ್ಜುನ ನೇತೃತ್ವದ ಮೊದಲ ತಂಡದ ಆನೆಗಳಿಗೆ ಗುರುವಾರದಿಂದಲೇ ತಾಲೀಮು ಆರಂಭಿಸಲಾಗಿದೆ. 

ಅರ್ಜುನ ಮತ್ತು ವರಲಕ್ಷ್ಮೀ ಆನೆಗಳನ್ನು ಹೊರತುಪಡಿಸಿದರೆ, ನಾಲ್ಕು ಆನೆಗಳೂ ಈ ವರ್ಷ ಮೊದಲ ತಂಡದಲ್ಲಿ ಕರೆತರಲಾಗಿದೆ. ವಿಜಯದಶಮಿ ದಿನ ಆನೆಗಳು ಸುಮಾರು ಐದು ಗಂಟೆ ಕಾಲ, 5 ಕಿ.ಮೀ ದೂರ ಆನೆಗಳು ಮೆರವಣಿಗೆಯಲ್ಲಿ ಸಾಗಬೇಕಿರುವುದರಿಂದ ಅವುಗಳ ದೈಹಿಕ ಸಾಮರ್ಥ್ಯ ಅಳೆಯಲು ತಾಲೀಮು ಆರಂಭಿಸುವ ಮುನ್ನ ಹಾಗೂ ಜಂಬೂಸವಾರಿಯ ಹಿಂದಿನ ದಿನ ಆನೆಗಳನ್ನು ತೂಕ ಮಾಡಿಸಲಾಗುತ್ತದೆ. 

ವಿಶೇಷ ಆರೈಕೆ: ಗುರುವಾರದಿಂದ ಆನೆಗಳಿಗೆ ವಿಶೇಷ ಆರೈಕೆ ನೀಡಲಾಗುತ್ತಿದೆ. ಬೆಲ್ಲ, ತೆಂಗಿನಕಾಯಿ, ಮುದ್ದೆ, ಭತ್ತದ ಕುಸುರೆ, ಬೆಣ್ಣೆ ಸೇರಿದಂತೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ತಿನ್ನಿಸಲಾಗುತ್ತದೆ. ಆನೆಗಳ ಮಾವುತರು ಮತ್ತು ಕಾವಾಡಿಗಳು ಆನೆಗಳಿಗೆ ನಿತ್ಯ ಮೈತೊಳೆದು ಹಣೆಗೆ ಹರಳೆಣ್ಣೆ ಹಚ್ಚಿ, ಭತ್ತದ ಕುಸುರೆ ತಿನ್ನಿಸಿ ವಿಶೇಷ ಆರೈಕೆ ಮಾಡುತ್ತಾರೆ ಎಂದರು.

ಎರಡನೇ ತಂಡದ ಆನೆಗಳು ಸೆ.14ರಂದು ಆಗಮಿಸುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಆನೆಗಳಿಗೆ ಭಾರ ಹೊರುವ ಹಾಗೂ ಮರದ ಅಂಬಾರಿ ಹೊರುವ ತಾಲೀಮು ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.