ಮೈಸೂರು ರಸ್ತೆಗಳಲ್ಲಿ ಗಜಪಡೆ ತಾಲೀಮು


Team Udayavani, Sep 7, 2018, 11:24 AM IST

m2-mys.jpg

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಆಗಮಿಸಿರುವ ಅರ್ಜುನ ನೇತೃತ್ವದ ಗಜಪಡೆ ಮೈಸೂರಿನ ರಸ್ತೆಗಳಲ್ಲಿ ತಾಲೀಮು ಆರಂಭಿಸಿವೆ. ಗಜಪಡೆಯ ಆರೋಗ್ಯದ ಮೇಲೆ ನಿಗಾ ಇಡುವ ಜೊತೆಗೆ ಅವುಗಳ ಆರೈಕೆ ದೃಷ್ಟಿಯಿಂದ ಪ್ರತಿವರ್ಷದಂತೆ ಈ ವರ್ಷವೂ ತಾಲೀಮು ನಡೆಸುವ ಮುನ್ನ ಆನೆಗಳ ತೂಕ ಪರೀಕ್ಷೆ ಮಾಡಿಸಲಾಯಿತು. 

ತೂಕ ಪರೀಕ್ಷೆ: ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ ಬರೋಬ್ಬರಿ 5650 ಕೆ.ಜಿ ತೂಕದೊಂದಿಗೆ ತನ್ನ ಬಾಹುಬಲ ಪ್ರದರ್ಶಿಸಿದರೆ ಮೊದಲ ತಂಡದಲ್ಲಿ ಬಂದಿರುವ ಉಳಿದ ಆನೆಗಳಾದ ವರಲಕ್ಷ್ಮೀ 3120 ಕೆ.ಜಿ, ಧನಂಜಯ 4045 ಕೆ.ಜಿ.,ಗೋಪಿ 4435 ಕೆ.ಜಿ, ವಿಕ್ರಮ 3985 ಕೆ.ಜಿ, ಹಾಗೂ ಚೈತ್ರ 2920 ಕೆ.ಜಿ ತೂಕವಿದೆ. 

ಕಳೆದ ವರ್ಷ 5250 ಕೆ.ಜಿ ತೂಕವಿದ್ದ ಅರ್ಜುನ, ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 400 ಕೆ.ಜಿ ತೂಕ ಹೆಚ್ಚಿಸಿಕೊಂಡಿದ್ದಾನೆ. ಕಳೆದ ವರ್ಷ 2830 ಕೆ.ಜಿ ತೂಕವಿದ್ದ ಕುಮ್ಕಿ ಅನೆ ವರಲಕ್ಷ್ಮೀ ಈ ವರ್ಷ 290 ಕೆ.ಜಿ ತೂಕ ಹೆಚ್ಚಿಸಿಕೊಂಡು 3120 ಕೆ.ಜಿ ತೂಗಿದೆ. 

ಧನಂಜಯನಿಗೆ ಮೊದಲ ದಸರಾ: ಕಳೆದ ವರ್ಷ ಎರಡನೇ ತಂಡದಲ್ಲಿ ಕರೆತರಲಾಗಿದ್ದ ವಿಕ್ರಮ, ಚೈತ್ರ, ಗೋಪಿ ಆನೆಗಳನ್ನು ಈ ಬಾರಿ ಮೊದಲ ತಂಡದಲ್ಲೇ ಕರೆತರಲಾಗಿದೆ. ಇನ್ನು ದುಬಾರೆ ಆನೆ ಶಿಬಿರದ 35 ವರ್ಷ ಅಂದಾಜು ವಯಸ್ಸಿನ ಧನಂಜಯ ಆನೆಯನ್ನು ಇದೇ ಮೊದಲ ಬಾರಿಗೆ ದಸರಾ ಮಹೋತ್ಸವಕ್ಕೆ ಕರೆತರಲಾಗಿದೆ. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್‌, ಆನೆಗಳ ತೂಕ ಕಳೆದ ವರ್ಷಕ್ಕಿಂತ ಉತ್ತಮವಾಗಿದ್ದು, ಎಲ್ಲಾ ಆನೆಗಳೂ ಆರೋಗ್ಯವಾಗಿವೆ. ಅರ್ಜುನ ನೇತೃತ್ವದ ಮೊದಲ ತಂಡದ ಆನೆಗಳಿಗೆ ಗುರುವಾರದಿಂದಲೇ ತಾಲೀಮು ಆರಂಭಿಸಲಾಗಿದೆ. 

ಅರ್ಜುನ ಮತ್ತು ವರಲಕ್ಷ್ಮೀ ಆನೆಗಳನ್ನು ಹೊರತುಪಡಿಸಿದರೆ, ನಾಲ್ಕು ಆನೆಗಳೂ ಈ ವರ್ಷ ಮೊದಲ ತಂಡದಲ್ಲಿ ಕರೆತರಲಾಗಿದೆ. ವಿಜಯದಶಮಿ ದಿನ ಆನೆಗಳು ಸುಮಾರು ಐದು ಗಂಟೆ ಕಾಲ, 5 ಕಿ.ಮೀ ದೂರ ಆನೆಗಳು ಮೆರವಣಿಗೆಯಲ್ಲಿ ಸಾಗಬೇಕಿರುವುದರಿಂದ ಅವುಗಳ ದೈಹಿಕ ಸಾಮರ್ಥ್ಯ ಅಳೆಯಲು ತಾಲೀಮು ಆರಂಭಿಸುವ ಮುನ್ನ ಹಾಗೂ ಜಂಬೂಸವಾರಿಯ ಹಿಂದಿನ ದಿನ ಆನೆಗಳನ್ನು ತೂಕ ಮಾಡಿಸಲಾಗುತ್ತದೆ. 

ವಿಶೇಷ ಆರೈಕೆ: ಗುರುವಾರದಿಂದ ಆನೆಗಳಿಗೆ ವಿಶೇಷ ಆರೈಕೆ ನೀಡಲಾಗುತ್ತಿದೆ. ಬೆಲ್ಲ, ತೆಂಗಿನಕಾಯಿ, ಮುದ್ದೆ, ಭತ್ತದ ಕುಸುರೆ, ಬೆಣ್ಣೆ ಸೇರಿದಂತೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ತಿನ್ನಿಸಲಾಗುತ್ತದೆ. ಆನೆಗಳ ಮಾವುತರು ಮತ್ತು ಕಾವಾಡಿಗಳು ಆನೆಗಳಿಗೆ ನಿತ್ಯ ಮೈತೊಳೆದು ಹಣೆಗೆ ಹರಳೆಣ್ಣೆ ಹಚ್ಚಿ, ಭತ್ತದ ಕುಸುರೆ ತಿನ್ನಿಸಿ ವಿಶೇಷ ಆರೈಕೆ ಮಾಡುತ್ತಾರೆ ಎಂದರು.

ಎರಡನೇ ತಂಡದ ಆನೆಗಳು ಸೆ.14ರಂದು ಆಗಮಿಸುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಆನೆಗಳಿಗೆ ಭಾರ ಹೊರುವ ಹಾಗೂ ಮರದ ಅಂಬಾರಿ ಹೊರುವ ತಾಲೀಮು ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.