ಕಾನೂನಾತ್ಮಕ ಸಮಸ್ಯೆಗಳಿಂದ ನಿವೇಶನ ವಿತರಿಸಿಲ್ಲ


Team Udayavani, Sep 8, 2018, 11:19 AM IST

m3-kanoonu.jpg

ಹುಣಸೂರು: ನಗರದಲ್ಲಿ ವಸತಿ ಸೌಲಭ್ಯ ಮತ್ತು ಬಡಾವಣೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕೆಂದು ಶಾಸಕ ಎಚ್‌.ವಿಶ್ವನಾಥ್‌ ಸೂಚಿಸಿದರು. ನಗರಸಭೆಯ ಅಧ್ಯಕ್ಷ ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪೌರ ಸನ್ಮಾನ ಹಾಗೂ ಅಂಬೇಡ್ಕರ್‌ ವಸತಿ ಯೋಜನೆಯಡಿ 69 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.

2017-18ನೇ ಸಾಲಿನಲ್ಲಿ ಮಂಜೂರಾಗಿರುವ ಮನೆಗಳನ್ನು 20 ವರ್ಷಗಳಿಂದ ಕಾನೂನಾತ್ಮಕ ಸಮಸ್ಯೆಗಳಿಂದ ನಿವೇಶನ ವಿತರಿಸಿಲ್ಲ, ಸಮಸ್ಯೆ ಬಗೆಹರಿಸಿ, ಆದ್ಯತೆ ಮೇರೆಗೆ ಜಿ + 3 ಮಾದರಿ ಹಾಗೂ ಒಂದು+ಮೂರು ಮಾದರಿಯ ಮನೆ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು. 

ಹೊಸ ಬಡಾವಣೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ಬದಲು ನಗರದೊಳಗಿನ ಕೊಳಗೇರಿಗಳನ್ನು ಅಭಿವೃದ್ಧಿಪಡಿಸಿ, ವಸತಿ ಸಮಸ್ಯೆಯನ್ನು ಎಲ್ಲರೂ ಸೇರಿ ಬಗೆಹರಿಸೋಣ, ಹೊಸ ಆಶ್ರಯ ಸಮಿತಿ ರಚನೆಯಾಗಬೇಕಿದ್ದು, ಸದಸ್ಯರಲ್ಲೇ ಹಿರಿಯ ಸದಸ್ಯರೊಬ್ಬರನ್ನು ಸಮಿತಿ ಅಧ್ಯಕ್ಷರನ್ನಾಗಿಸಿ, ವಸತಿ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲಾಗುವುದು ಎಂದು ಹೇಳಿದರು. 

ನಗರಸಭೆ ವತಿಯಿಂದ ನೀಡಿರುವ ಮನವಿ ಬಗ್ಗೆ ಪ್ರಸ್ತಾಪಿಸಿ ಒಳಚರಂಡಿ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುತ್ತೇನೆಂದು ಭರವಸೆ ನೀಡಿದರು. 

ಎಲ್ಲ ರಸ್ತೆಗಳಲ್ಲೂ ಮೆರವಣಿಗೆ ನಡೆಯಲಿ: ವಿಷಯ ಪ್ರಸ್ತಾಪಿಸಿದ ಸದಸ್ಯ ಸತೀಶ್‌ಕುಮಾರ್‌ 3 ವರ್ಷಗಳಿಂದ ಹಲವು ಕಾರಣಗಳಿಂದ ನಗರದ ವಿಶ್ವೇಶ್ವರಯ್ಯ ವೃತ್ತ, ಜೆಎಲ್‌ಬಿ ಹಾಗೂ ಬಜಾರ್‌ ರಸ್ತೆಯಲ್ಲಿ ರಾಷ್ಟ್ರೀಯ ಹಬ್ಬ ಹಾಗೂ ಧಾರ್ಮಿಕ ಮೆರವಣಿಗೆಗಳನ್ನು ನಿಷೇಧ ತೆರವುಗೊಳಿಸಬೇಕೆಂಬ ಮನವಿಗೆ ಎಲ್ಲಾ ಸದಸ್ಯರು ಒಪ್ಪಿಗೆ ನೀಡಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ನಿರ್ಣಯಿಸಿದರು.

ನಗರ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಗುತ್ತಿಗೆದಾರ ಗಂಜಾಂ ಶಿವು ಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಇವರಿಂದಾಗಿ ಹಲವಾರು ಬಡಾವಣೆಗಳಲ್ಲಿ ರಾತ್ರಿ ವೇಳೆ ಓಡಾಟ ಕಷ್ಟವಾಗಿದೆ ಎಂದು ಸದಸ್ಯ ಶಿವರಾಜ್‌ ತೀವ್ರ ಅಸಮಧಾನ ವ್ಯಕ್ತಪಡಿಸಿದರು. ಅವರಿಗೆ ಧ್ವನಿಗೂಡಿಸಿದ ಹಜರತ್‌ಜಾನ್‌, ಶ್ರೀನಿವಾಸ್‌, ಕೃಷ್ಣರಾಜಗುಪ್ತ, ಶರವಣ, ಹಾಲಿ ಗುತ್ತಿಗೆದಾರರನ್ನು ಬದಲಿಸುವಂತೆ ಆಗ್ರಹಿಸಿದರು. 

ಭಾರಿ ವಾಹನ ನಿಷೇಧಿಸಿ: ನಗರದ ಲಕ್ಷ್ಮಣತೀರ್ಥ ನದಿಗೆ ಟಿಪ್ಪುಸುಲ್ತಾನ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಸೇತುವೆ ಅಪಾಯದಲ್ಲಿದೆ. ಈ ಸೇತುವೆ ಮೇಲೆ ಭಾರಿ ವಾಹನಗಳ ಓಡಾಟ ನಿಷೇಧಿಸಿ, ಸೇತುವೆಯ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಸದಸ್ಯ ಶರವಣ ಸಭೆಯಲ್ಲಿ ಒತ್ತಾಯಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಧನಲಕ್ಷ್ಮೀ, ಪೌರಾಯುಕ್ತ ಶಿವಪ್ಪನಾಯಕ, ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.