ಮುಳ್ಳೂರು ಬಸ್‌ ಸಂಚಾರ


Team Udayavani, Sep 8, 2018, 11:19 AM IST

m1-mulluru.jpg

ಹುಣಸೂರು: ಹುಣಸೂರು-ಮುಳ್ಳೂರು ಮಾರ್ಗವಾಗಿ ಕೆ.ಆರ್‌.ನಗರ ಹಾಗೂ ಹೆಜ್ಜೊಡ್ಲು-ರಾಯನಹಳ್ಳಿ-ಮಂಟಿಕೊಪ್ಪಲು ಮಾರ್ಗಕ್ಕೆ ಶಾಸಕ ಎಚ್‌.ವಿಶ್ವನಾಥ್‌ ಗಾವಡಗೆರೆ ಹೋಬಳಿಯ ಮುಳ್ಳೂರಿನಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈ ಭಾಗದ ಬಹು ದಿನಗಳ ಬೇಡಿಕೆಯಂತೆ ಕೆ.ಆರ್‌.ನಗರ ಡಿಪೋದಿಂದ ಮುಳ್ಳೂರು, ತೊಂಡಾಳು, ಉಂಡುವಾಡಿ ಮಾರ್ಗ ಹುಣಸೂರು ಹಾಗೂ ಹುಣಸೂರು ಡಿಪೋದಿಂದ ಕೆ.ಆರ್‌.ನಗರ-ಹೆಜ್ಜೊಡ್ಲು-ರಾಯನಹಳ್ಳಿ-ಮಂಟಿಕೊಪ್ಪಲು ಮಾರ್ಗ ಹುಣಸೂರಿಗೆ ಸಂಪರ್ಕ ಕಲ್ಪಿಸುವ ಬಸ್‌ಗಳನ್ನು ನಿತ್ಯ ಬೆಳಿಗ್ಗೆ-ಸಂಜೆ ಎರಡು ಬಾರಿ ಒಡಾಡಲಿದೆ. ಜನರು ಟಿಕೆಟ್‌ ಪಡೆದು ಪ್ರಯಾಣಿಸಬೇಕೆಂದು ಮನವಿ ಮಾಡಿದರು.

ಶಾಸಕರ ಬಸ್‌ ಪ್ರಯಾಣ: ಮುಳ್ಳೂರಿನಲ್ಲಿ ಹೊಸ ಬಸ್‌ ಮಾರ್ಗಕ್ಕೆ ಚಾಲನೆ ನೀಡಿದ ಶಾಸಕರು ತಮ್ಮ ಬೆಂಬಲಿಗರು, ಗ್ರಾಮಸ್ಥರೊಂದಿಗೆ ಟಿಕೇಟ್‌ ಪಡೆದು ಹೊಜ್ಜೊಡ್ಲು, ರಾಯನಹಳ್ಳಿ ಹಾಗೂ ಮಂಟಿಕೊಪ್ಪಲಿನವರೆಗೆ ತೆರಳಿ, ಬಸ್‌ನಲ್ಲೇ ಗ್ರಾಮದ ಸಮಸ್ಯೆಗಳನ್ನು ಆಲಿಸಿದರು. 

ಕೆರೆ ಒತ್ತುವರಿ ತೆರವು: ಸಭೆಯಲ್ಲಿ ರೈತರು ಈ ಭಾಗದ ಕೆರೆಗಳ ಒತ್ತುವರಿ ಸಾಕಷ್ಟಾಗಿದ್ದು, ತೆರವುಗೊಳಿಸಿರೆಂಬ ಒತ್ತಾಯಕ್ಕೆ ಕೆರೆ ಒತ್ತುವರಿ ವಿಚಾರದಲ್ಲಿ ರಾಜಿ ಇಲ್ಲ, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಮುಳ್ಳೂರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಸ್ಪಂದಿಸುತ್ತೇನೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಖುದ್ದು ಭೇಟಿ ನೀಡಿ ಪರಿಹರಿಸಿಕೊಳ್ಳಿ.

ಗ್ರಾಮದ ಅಭಿವೃದ್ಧಿಯಲ್ಲಿ ದೇವರಾಜೇ ಅರಸರ ಆಪ್ತ ಗ್ರಾಮದ ಶಂಕರರಾವ್‌ ಕದಂ ಅನೇಕ ಕೊಡುಗೆ ನೀಡಿದ್ದನ್ನು ಸ್ಮರಿಸಿದರು. ಚುನಾಯಿತರಾದ ನಂತರ ಮುಳ್ಳೂರು ಗ್ರಾಮಕ್ಕಾಗಮಿಸಿದ ಶಾಸಕ ವಿಶ್ವನಾಥರನ್ನು ಮಂಗಳವಾದ್ಯಗಳೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ವೇಳೆ ವಿನಾಯಕ ಯುವ ಸೇನೆ ಎಂಬ ಸಂಘವನ್ನು ಶಾಸಕರು ಉದ್ಘಾಟಿಸಿದರು.

ಸಮಾರಂಭದಲ್ಲಿ ಗ್ರಾಮದ ವಿಠಲ್‌ರಾವ್‌ಜಗತಾಪ್‌, ಬಸವರಾಜು, ಮಹದೇವು, ಮಂಜು, ಸತ್ಯನಾರಾಯಣ್‌, ರಾಜ್‌ ಕಿರಣ್‌, ಮಹದೇವರಾಜು, ಗಾವಡಗೆರೆ ಗ್ರಾಪಂ ಮಾಜಿ ಅಧ್ಯಕ್ಷ ಹೊನ್ನಪ್ಪರಾವ್‌ ಕಾಳಿಂಗೆ, ಅಣ್ಣಯ್ಯನಾಯ್ಕ  ಮತ್ತಿತರ ಮುಖಂಡರು ಹಾಗೂ ಸೆಸ್ಕ್ ಎಇಇ ಸಿದ್ದಪ್ಪ, ಕೆಎಸ್‌ಆರ್‌ಟಿಸಿಯ ಡಿಟಿಒ ದಶರಥ, ಎ.ಟಿ.ಎಸ್‌.ಕೃಷ್ಣಮೂರ್ತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.