ಈಶ್ವರ ದೈತೋಟಗೆ ತಾತಯ್ಯ ಪ್ರಶಸ್ತಿ ಪ್ರದಾನ


Team Udayavani, Sep 9, 2018, 11:17 AM IST

m5-eshwar.jpg

ಮೈಸೂರು: ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿರುವ ಎಂ.ವೆಂಕಟಕೃಷ್ಣಯ್ಯ (ತಾತಯ್ಯ )ಅವರ ಹೆಸರಿನಲ್ಲಿ ಪುಸ್ತಕ ಹೊರತಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಕಾಲೇಜುಗಳಲ್ಲಿ ಅಧ್ಯಯನಕ್ಕೆ ಅಳವಡಿಸಲಿ ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಸಲಹೆ ನೀಡಿದರು.

ಅನಾಥಾಲಯ ಹಾಗೂ ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ವತಿಯಿಂದ ಎಂ.ವೆಂಕಟಕೃಷ್ಣಯ್ಯ ಅವರ 174ನೇ ಜಯಂತಿ ಪ್ರಯುಕ್ತ ಶನಿವಾರ ಶಾರದಾ ವಿಲಾಸ ಕಾನೂನು ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಎಂ.ವೆಂಕಟಕೃಷ್ಣಯ್ಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ತಾತಯ್ಯ ಅಪಾರ ಕೊಡುಗೆ ನೀಡಿದ್ದಾರೆ. ಅವರ ಹೆಸರಿನಲ್ಲೇ ಒಂದು ಪುಸ್ತಕ ಹೊರತರಬೇಕಿದೆ. ಅದರಲ್ಲಿ ತಾತಯ್ಯ ಅವರ ಪತ್ರಿಕೋದ್ಯಮ ಸಾಧನೆ, ಅಭ್ಯುದಯ ಪತ್ರಿಕೋದ್ಯಮ ಕಲ್ಪನೆ ಮತ್ತು ಅದರ ಪರಿಣಾಮ ಕುರಿತು ಅಧ್ಯಯನ ಮಾಡುವಂತಹ ವಿಷಯಗಳಿರಬೇಕು. ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಕಾಲೇಜುಗಳಲ್ಲಿ ಪುಸ್ತಕವನ್ನು ವಿದ್ಯಾರ್ಥಿಗಳ ಅಧ್ಯಯನಕ್ಕೆ ಇಡಬೇಕು. 

ಮಹಾತ್ಮ ಗಾಂಧೀಜಿಗೂ ಮೊದಲು ತಾತಯ್ಯ ಪತ್ರಿಕೋದ್ಯಮ ಶುರುಮಾಡಿದ್ದರು. ಅವರ ಪತ್ರಿಕೋದ್ಯಮ ಪ್ರಯೋಗ ರಾಷ್ಟ್ರಮಟ್ಟದಲ್ಲಿ ದಾಖಲಿಸಬಹುದಾದದ್ದು. ಜನತೆಗೆ ಮಾಹಿತಿ, ತಿಳಿವಳಿಕೆ ನೀಡುವುದರ ಜತೆಗೆ ಪ್ರೋತ್ಸಾಹಕ ಬರಹಗಳನ್ನೂ ಬರೆದರು. ವಿಧವಾ ವಿವಾಹ, ದಲಿತೋದ್ಧಾರ, ಗ್ರಾಮೀಣ ಜನರ ಶಿಕ್ಷಣದ ಅಗತ್ಯತೆ ಕುರಿತು ವಿಚಾರ ಮಾಡುತ್ತಿದ್ದರು ಎಂದರು. 

ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲಶಾಸಿ ಮಾತನಾಡಿ, ಬೆಂಗಳೂರಿನಲ್ಲಿ ಗೋಖಲೆ ಅವರ ಜೀವನ, ಸಾಧನೆ ಪ್ರಚಾರಕ್ಕೆ ಗೋಖಲೆ ಸಾರ್ವಜನಿಕ ಸಂಸ್ಥೆಯನ್ನು ಡಿ.ವಿ.ಗುಂಡಪ್ಪ ಸ್ಥಾಪಿಸಿದರು. ಅದೇ ರೀತಿ ಮೈಸೂರಿನಲ್ಲಿ ವೆಂಕಟಕೃಷ್ಣಯ್ಯ ಇನ್‌ಸ್ಟಿಟ್ಯೂಟ್‌ ಆಫ್ ಪಬ್ಲಿಕ್‌ ಅಫೇರ್ ಸ್ಥಾಪಿಸಿ ಅವರ ಚಿಂತನೆ ಪ್ರಚಾರ ಮಾಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಅಧ್ಯಕ್ಷ ಬಿ.ಎಸ್‌.ಪಾರ್ಥಸಾರಥಿ, ಅನಾಥಾಲಯ ಉಪಾಧ್ಯಕ್ಷ ಸಿ.ವಿ.ಗೋಪಿನಾಥ್‌, ಪ್ರೊ. ಶ್ರೀಧರಮೂರ್ತಿ, ಅನಾಥಾಲಯ ಕಾರ್ಯಕಾರಿ ಮಂಡಳಿ ಸದಸ್ಯ ಪ್ರೊ.ಸತ್ಯನಾರಾಯಣ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.