ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತ್ಯೇಕ ಪ್ರತಿಭಟನೆ


Team Udayavani, Sep 9, 2018, 11:17 AM IST

m3-bedike.jpg

ಮೈಸೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಶನಿವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದವು.
ಶುದ್ಧ ಕುಡಿಯುವ ನೀರಿನಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಮಾನಸಗಂಗೋತ್ರಿ ವಿದ್ಯಾರ್ಥಿನಿಲಯದ ನಿಲಯಾರ್ಥಿಗಳು ಶನಿವಾರ ದಿಢೀರ್‌ ಪ್ರತಿಭಟನೆ ನಡೆಸಿದರು.

ವಿವಿ ವಿರುದ್ಧ ಘೋಷಣೆ: ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆಯ ಬಳಿ ಜಮಾಯಿಸಿದ ನಿಲಯಾರ್ಥಿಗಳು, ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸ್ವತ್ಛತೆಯಿಲ್ಲ: ಮೈಸೂರು ವಿವಿಯ ವಿದ್ಯಾರ್ಥಿನಿಲಯಗಳ ಶೌಚ ಗೃಹಗಳು ಹಾಳಾಗಿವೆ. ಬಟ್ಟೆ ಒಗೆಯುವ ಜಾಗದಲ್ಲಿ ಪಾಚಿ-ಗಿಡಗಂಟಿಗಳು ಬೆಳೆದಿವೆ. ಕಸ ಸಂಗ್ರಹಣೆ, ವಿಂಗಡಣೆಗೆ ಯಾವುದೇ ವೈಜ್ಞಾನಿಕ ವಿಧಾನ ಅನುಸರಿಸುತ್ತಿಲ್ಲ. ಇಲ್ಲಿ ಸಮರ್ಪಕ ವ್ಯವಸ್ಥೆಗಳಿಲ್ಲದೆ, ಸಾಂಕ್ರಾಮಿಕ ರೋಗಗಳ ಭೀತಿ ಉಂಟಾಗಿದೆ ಎಂದು ದೂರಿದರು. ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೇ ಸ್ಥಾಪಿಸಬೇಕು. ಸೊಳ್ಳೆಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಕೋಣೆಗಳಲ್ಲಿ ತಿಗಣೆ ಸಮಸ್ಯೆ ಇದ್ದು, ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಊಟದ ಹಾಲ್‌ನಲ್ಲಿ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುವ ಫ‌ಲಕ ಹಾಕಬೇಕು. ಪಾರ್ಕಿಂಗ್‌ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು.  ಸ್ವತ್ಛತಾ ಪರಿಕರಗಳನ್ನು ಹೆಚ್ಚಿನ ಮಟ್ಟದಲ್ಲಿ ಪೂರೈಸಬೇಕು. ತಿಂಗಳಿಗೊಮ್ಮೆಯಾದರೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಬೇಕು. ಹಾಸ್ಟೆಲ್‌ನಲ್ಲಿರುವ ಜಿಮ್‌ ಪ್ರತಿದಿನ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಚೇತನ್‌, ಕೆ.ಎಂ.ಸುರೇಶ್‌, ಬಸವಣ್ಣ, ಮೋಹಿತ್‌, ನಾಗೇಂದ್ರ, ಗೋವಿಂದರಾಜು, ಚೇತನ್‌, ರಾಜ್‌ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಯುವ ಕಾಂಗ್ರೆಸ್‌ ಪ್ರತಿಭಟನೆ: ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ನ್ಯಾಯಾಲಯ ಮುಂಭಾಗದ‌ ಗಾಂಧಿ ಪುತ್ಥಳಿ ಬಳಿ ಸೇರಿದ ಪ್ರತಿಭಟನಾಕಾರರು, ತಳ್ಳುಗಾಡಿಯ ಮೇಲೆ ಬೈಕ್‌ ನಿಲ್ಲಿಸಿ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಗತ್ಯ ವಸ್ತುಗಳಾದ ಪೆಟ್ರೋಲ್‌, ಡಿಸೇಲ್‌,  ಅಡುಗೆ ಅನಿಲ ದರ ಏರುತ್ತಲೇ ಸಾಗಿದೆ. ಇದರಿಂದಾಗಿ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ಕೂಡಲೇ ತೈಲ ದರವನ್ನು ಇಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿ ಅಧ್ಯಕ್ಷ ಮೋಸಿನ್‌ ಖಾನ್‌, ನಗರ ಉಪಾಧ್ಯಕ್ಷರಾದ ರಾಘವೇಂದ್ರ, ರಾಜರಾಜೇಂದ್ರ, ಪದಾಧಿಕಾರಿಗಳಾದ ಸ್ವಾಮಿ, ಮಂಜು, ಲೋಕೇಶ್‌, ಪ್ರವೀಣ್‌, ಗಿರೀಶ್‌, ಹರೀಶ್‌ ಇತರರು ಹಾಜರಿದ್ದರು.

7ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ: ದಿನಗೂಲಿ ಮಹಿಳಾ ಪೌರಕಾರ್ಮಿಕರನ್ನು ವಜಾಗೊಳಿಸಿ ಹೊರಗುತ್ತಿಗೆ ನೀಡುವ ಮೈಸೂರು ವಿಶ್ವವಿದ್ಯಾಲಯದ ಕ್ರಮ ಖಂಡಿಸಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನಾ ಧರಣಿ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾನಸಗಂಗೋತ್ರಿಯ ಮುಖ್ಯದ್ವಾರದಲ್ಲಿರುವ ಕುವೆಂಪು ಪ್ರತಿಮೆ ಮುಂದೆ ಪ್ರತಿಭಟನೆ ಮುಂದುವರಿಸಿರುವ ಪೌರಕಾರ್ಮಿಕ ಮಹಿಳೆಯರು ಶನಿವಾರವೂ ಪ್ರತಿಭಟನೆ ನಡೆಸಿದರು.

 ವಿಶ್ವ ವಿದ್ಯಾನಿಲಯದಲ್ಲಿ 14 ವರ್ಷಗಳಿಂದ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೂರಾರು ಮಹಿಳಾ ಪೌರಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲು ವಿವಿ ಮುಂದಾಗಿರುವುದು ಖಂಡನೀಯ. ಸ್ವತ್ಛತಾ ಕೆಲಸ ಮಾಡುವ ನಮಗೆ ಎರಡು ತಿಂಗಳಿನಿಂದ ವೇತನ ನೀಡಿಲ್ಲ. ಇಎಸ್‌ಐ, ಪಿಎಫ್ ಸೌಲಭ್ಯ ಕೂಡ ನೀಡುತ್ತಿಲ್ಲ. ವೇತನ ತಾರತಮ್ಯ ಮಾಡದೆ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.