ಬೆಲೆ ಏರಿಕೆ: ಗೌರಿ ಹಬ್ಬಕ್ಕೆ ಖರೀದಿ ಜೋರು


Team Udayavani, Sep 12, 2018, 11:42 AM IST

m1-bele.jpg

ಮೈಸೂರು: ದೇಶದೆಲ್ಲೆಡೆ ವೈಭವದಿಂದ ಆಚರಿಸಲ್ಪಡುವ ಗೌರಿ-ಗಣೇಶ ಹಬ್ಬಕ್ಕಾಗಿ ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ತಯಾರಿ ಆರಂಭವಾಗಿದೆ. ಹಬ್ಬದ ಮುನ್ನಾದಿನವಾದ ಮಂಗಳವಾರ ನಗರದೆಲ್ಲೆಡೆ ಭರ್ಜರಿ ವ್ಯಾಪಾರ-ವಹಿವಾಟು ನಡೆಸುವ ಮೂಲಕ ವಿಘ್ನ ನಿವಾರಕನ ಆರಾಧನೆಗೆ ನಗರ ನಾಗರಿಕರು ಭರ್ಜರಿ ತಯಾರಿ ಮಾಡಿಕೊಂಡರು. 

ಹಬ್ಬದ ಮುನ್ನಾದಿನದಂದು ನಗರದ ದೇವರಾಜ ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ಹಬ್ಬಕ್ಕೆ ಅಗತ್ಯವಿರುವ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಹಬ್ಬಕ್ಕಾಗಿ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿರುವ ಜನರು ಮಾರುಕಟ್ಟೆಯಲ್ಲಿ ಹಬ್ಬದ ಆಚರಣೆಗೆ ಬೇಕಾಗಿರುವ ವಸ್ತುಗಳನ್ನು ಖರೀದಿಸಿದರು. ಪ್ರತಿ ಹಬ್ಬದಂತೆ ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟಾಗಿದ್ದರೂ, ಲೆಕ್ಕಿಸದ ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು ಸಂಭ್ರಮದೊಂದಿಗೆ ಹಬ್ಬವನ್ನು ಆಚರಿಸಲು ಮುಂದಾದರು. 

ಭಾರೀ ಜನಜಂಗುಳಿ: ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾರೀ ಜನಜಂಗುಳಿ ಕಂಡು ಬಂತು. ಬೆಳಗ್ಗಿನಿಂದಲೇ ಮಾರುಕಟ್ಟೆಗೆ ಲಗ್ಗೆಯಿಟ್ಟ ಜನರು ಹಬ್ಬದ ಆಚರಣೆಗೆ ಬೇಕಾಗಿರುವ ಪ್ರಮುಖ ವಸ್ತುಗಳನ್ನು ಖರೀದಿಸಿದರು. ಪ್ರಮುಖವಾಗಿ ದೇವರಾಜ ಮಾರುಕಟ್ಟೆ, ಶಿವರಾಂಪೇಟೆ, ಚಿಕ್ಕ ಗಡಿಯಾರ ವೃತ್ತ, ಧನ್ವಂತ್ರಿ ರಸ್ತೆ, ಅಗ್ರಹಾರ ವೃತ್ತ, ವಿವಿ ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ವ್ಯಾಪಾರ ಜೋರಾಗಿತ್ತು. ಕೇವಲ ಮಾರುಕಟ್ಟೆಗಳು ಮಾತ್ರವಲ್ಲದೆ ಬಹುತೇಕ ಬಟ್ಟೆ ಅಂಗಡಿಗಳಲ್ಲೂ ಗ್ರಾಹಕರ ಸಂಖ್ಯೆ ಸಾಮಾನ್ಯ ದಿನಕ್ಕಿಂತಲೂ ಹೆಚ್ಚಾಗಿತ್ತು. 

ಗೌರಿ-ಗಣೇಶ ಖರೀದಿ: ಪ್ರತಿ ವರ್ಷದಂತೆ ಈ ಬಾರಿಯೂ ಮಾರುಕಟ್ಟೆಗಳಲ್ಲಿ ಗೌರಿ-ಗಣೇಶ ವಿಗ್ರಹಗಳ ಖರೀದಿ ಜೋರಾಗಿತ್ತು. ಎಂದಿನಂತೆ ಮಾರುಕಟ್ಟೆಗಳಲ್ಲಿ ವಿವಿಧ ಗಾತ್ರ ಹಾಗೂ ವಿನ್ಯಾಸದ ಹಲವು ಬಗೆಯ ಗಣೇಶ ವಿಗ್ರಹ ನೋಡುಗರನ್ನು ಸೆಳೆಯಲಿವೆ. ಹಬ್ಬದ ಸಿದ್ಧತೆಯಲ್ಲಿ ಮಾರುಕಟ್ಟೆಗಳಿಗೆ ತೆರಳಿದ ಸಾರ್ವಜನಿಕರು ತಮ್ಮ ಶಕ್ತಿಗೆ ಅನುಸಾರವಾಗಿ ಗೌರಿ-ಗಣೇಶ ವಿಗ್ರಹಗಳನ್ನು ಖರೀದಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಮನೆಯಲ್ಲಿ ಪೂಜೆ ಮಾಡುವವರು ಸಣ್ಣಗಾತ್ರದ ಗೌರಿ-ಗಣೇಶ ಮೂರ್ತಿಗಳನ್ನು ಖರೀದಿಸಿದರರೆ. ಬಡಾವಣೆಗಳಲ್ಲಿ ಸಾಮೂಹಿಕವಾಗಿ ಗಣಪತಿ ಪೂಜೆ ಮಾಡುವವರು ದೊಡ್ಡದಾದ ಮತ್ತು ಆಕರ್ಷಕ ವಿನ್ಯಾಸದ ಗಣೇಶ ಮೂರ್ತಿಗಳನ್ನು ಖರೀದಿ ಮಾಡಿದರು. 

ಬಡಾವಣೆಗಳಲ್ಲೂ ಸಿದ್ಧತೆ: ಗೌರಿ-ಗಣೇಶ ಹಬ್ಬವನ್ನು ಕೇವಲ ಮನೆಗಳಲ್ಲಿ ಮಾತ್ರವಲ್ಲದೆ ಪ್ರತಿಯೊಂದು ಬಡಾವಣೆಗಳು, ವೃತ್ತಗಳಲ್ಲೂ ಆಚರಿಸಲಾಗುತ್ತದೆ. ಹಬ್ಬಕ್ಕೂ ಮೊದಲೇ ಗಣಪತಿ ಪ್ರತಿಷ್ಠಾಪನೆಗೆ ಸಿದ್ಧತೆ ಮಾಡಿಕೊಳ್ಳುವ ಬಡಾವಣೆಯ ಯುವಕರು, ಸಾರ್ವಜನಿಕರು, ಹಬ್ಬದ ಮುನ್ನಾದಿನದಂದು ಹಸಿರು ಚಪ್ಪರ ಹಾಕಿ ತಳಿರು ತೋರಣಗಳಿಂದ ಸಿಂಗರಿಸಿರುತ್ತಾರೆ. ಹೀಗಾಗಿ ನಗರದ ಬಹುತೇಕ ಕಡೆಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ತಮ್ಮ ಬಡಾವಣೆ, ಬೀದಿ ಬೀದಿಗಳನ್ನು ಅಲಂಕಾರ ಮಾಡಿಕೊಂಡಿರುವ ದೃಶ್ಯಗಳು ಕಂಡುಬಂತು. 

ಗಗನಕ್ಕೇರಿದ ಬೆಲೆ: ಹಬ್ಬದ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಯಲ್ಲಿ ಹಲವು ಪದಾರ್ಥಗಳ ಬೆಲೆ ಗಗನಕ್ಕೇರಿತ್ತು. ಮುಖ್ಯವಾಗಿ ಮಲ್ಲಿಗೆ, ಕಾಕಡ ಕೆ.ಜಿಗೆ 650 ರೂ. ಹಾಗೂ ಒಂದು ಮಾರಿಗೆ 80ರೂ., ವಿವಿಧ ಬಗೆಯ ಗುಲಾಬಿ ಹೂವು ಕಾಲು ಕೆ.ಜಿ.ಗೆ 70 ರೂ., ಹಳದಿ ಸೇವಂತಿಗೆ 1 ಮಾರಿಗೆ 60 ರೂ., ಬಿಳಿ ಸೇವಂತಿಗೆ 80ರೂ., ಮಲ್ಲಿಗೆ ಹಾರ 150 ರೂ., ಗುಲಾಬಿ ಹೂವಿನ ಹಾರ 250 ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ಉಳಿದಂತೆ ಹಣ್ಣುಗಳು ಹಾಗೂ ಕೆಲವು ತರಕಾರಿಗಳ ಬೆಲೆಯೂ ದುಬಾರಿಯಾಗಿತ್ತು. 

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.