ದಸರಾ ಮುನ್ನ ಕಲಾ ಗ್ಯಾಲರಿ ವೀಕ್ಷಣೆಗೆ ಸಜ್ಜು


Team Udayavani, Sep 17, 2018, 11:24 AM IST

m1dasara.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರನ್ನು ಆಕರ್ಷಿಸುವ ಜಗನ್ಮೋಹನ ಅರಮನೆ (ಜಯಚಾಮರಾಜೇಂದ್ರ) ಕಲಾ ಗ್ಯಾಲರಿ ನವೀಕರಣ ಕಾಮಗಾರಿ ಭರದಿಂದ ನಡೆಸುತ್ತಿದ್ದು, ದಸರಾ ಮಹೋತ್ಸವ ಆರಂಭಕ್ಕೂ ಮೊದಲು ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಸಜ್ಜುಗೊಳಿಸುವುದಾಗಿ ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್‌ ಹೇಳಿದರು.

ನಗರದ ಪ್ರತಿಷ್ಠಿತ ಜಗನ್ಮೋಹನ ಅರಮನೆಯು ಪರಂಪರಿಕ ಕಟ್ಟಡವಾಗಿದ್ದು, ಇಲ್ಲಿರುವ ಶ್ರೀಜಯಚಾಮರಾಜೇಂದ್ರ ಆರ್ಟ್‌ ಗ್ಯಾಲರಿಯಲ್ಲಿ ಐತಿಹಾಸಿಕ ಛಾಯಾಚಿತ್ರಗಳು, ಪೇಟಿಂಗ್‌ಗಳನ್ನು ಪ್ರದರ್ಶನ ಮಾಡಲಾಗುತ್ತಿತ್ತು. ಆದರೆ ಶತಮಾನದಷ್ಟು ಹಳೆಯದಾದ ಕಟ್ಟಡಕ್ಕೆ ನಿಗದಿತ ಸಮಯದಲ್ಲಿ ಬಣ್ಣ ಹಾಕದ ಕಾರಣ ಕಟ್ಟಡ ತನ್ನ ಪ್ರಾಚೀನತೆ ಹಾಗೂ ವೈಭವತೆ ಕಳೆದುಕೊಂಡಿತ್ತು.

ಈ ಎಲ್ಲಾ ಕಾರಣದಿಂದಾಗಿ ಮೈಸೂರಿನ ಹೃದಯಭಾಗದಲ್ಲಿರುವ ಕಲಾ ಗ್ಯಾಲರಿಯನ್ನು ನವೀಕರಣ ಮಾಡಲಾಗುತ್ತಿದೆ. ಈಗಾಗಲೇ ಶೇ.60 ದುರಸ್ತಿ ಕಾರ್ಯ ಮುಗಿದಿದ್ದು, ದಸರಾ ಉತ್ಸವ ಆರಂಭದೊಳಗೆ ದುರಸ್ತಿ ಕೆಲಸ ಮುಗಿಸಬೇಕೆಂಬ ಅಭಿಲಾಷೆ ಇದೆ. ರೂಪ್‌ ಕಾರ್ಯ ಸಂಪೂರ್ಣವಾಗಿದ್ದು, ಮುಂದಿನ ಶತಮಾನ ಕಾಲದ ಪೇಂಟಿಂಗ್‌ ಸೇರಿ ಯಾವುದೇ ವಸ್ತುಗಳು ಹಾನಿಗೀಡಾಗದಂತೆ ಸಂರಕ್ಷಿಸಲಾಗುತ್ತದೆ ಎಂದು ಜಗನ್ಮೋಹನ ಅರಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜನ್ಮದಿನದ ಉಡುಗೊರೆ: ಯದುವಂಶದ ಮಹಾರಾಜರಾದ ಶ್ರೀ ಜಯಚಾಮರಾಜ ಒಡೆಯರ್‌ ಅವರ ನೂರನೇ ವರ್ಷದ ಜನ್ಮದಿನದ ಪ್ರಯುಕ್ತ ನವೀಕರಣ ಕಾರ್ಯ ಮುಗಿಸುವ ಸಾಧ್ಯತೆ ಇದೆ. ಆ ಮೂಲಕ ನಮ್ಮ ಮಾವನವ ಜನ್ಮದಿನಕ್ಕೆ ಉಡುಗೊರೆಯಾಗಿ ಅರ್ಪಿಸಲಿದ್ದು, ಕಾಮಗಾರಿಯಲ್ಲಿ ಅಂದಾಜು 70 ಸಿಬ್ಬಂದಿ ರಾತ್ರಿ 12ಗಂಟೆವರೆಗೂ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರಿನ ಜಿ.ಎನ್‌.ಹೆರಿಟೇಜ್‌ ಸಂಸ್ಥೆಯು ಈ ಜವಾಬ್ದಾರಿ ಪಡೆದಿದ್ದು, ಕಟ್ಟಡದ ಪ್ರತಿಯೊಂದು ಭಾಗವನ್ನು ಗಮನಿಸಿ ನವೀಕರಣ ಮಾಡಲಾಗುತ್ತಿದೆ. ಜಗನ್ಮೋಹನ ಅರಮನೆ ಆರ್ಟ್‌ ಗ್ಯಾಲರಿಯಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್‌, ನಾಲ್ವಡಿ ಕೃಷ್ಣರಾಜ ಒಡೆಯರ್‌, ಶ್ರೀ ಜಯಚಾಮರಾಜೇಂದ್ರ ಒಡೆಯರ್‌, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕಾಲದ ಅಪರೂಪದ ವಸ್ತುಗಳನ್ನು ಸಂಗ್ರಹಿಸಡಲಾಗಿದೆ. ಹೀಗಾಗಿ ಯಾವುದೇ ಒಂದು ವಸ್ತುಗಳನ್ನು ಹೊರಕ್ಕೆ ತಗೆದುಕೊಂಡು ಹೋಗದೆಂತೆ ಇದೇ ಸ್ಥಳದಲ್ಲೇ ನವೀಕರಣಗೊಳಿಸಲಾಗುತ್ತಿದೆ ಎಂದರು.

ಶುಲ್ಕ ಹೆಚ್ಚಳಕ್ಕೆ ಚಿಂತನೆ: ಜಗನ್ಮೋಹನ ಅರಮನೆ ಆರ್ಟ್‌ ಗ್ಯಾಲರಿ ನವೀಕರಣ ಕೆಲಸ ಮುಗಿದು ವೀಕ್ಷಣೆಗೆ ಅವಕಾಶ ಕಲ್ಪಿಸಿದಾಗ ಪ್ರವೇಶ ಶುಲ್ಕ ಹೆಚ್ಚಳ ಮಾಡುವ ಚಿಂತನೆ ಇದೆ. ಹಲವು ವರ್ಷದಿಂದ ಶುಲ್ಕ ಹೆಚ್ಚಿಸಿಲ್ಲ, ಜತೆಗೆ ಟ್ರಸ್ಟ್‌ನಲ್ಲಿ ಹಣವಿಲ್ಲ. ಆದ್ದರಿಂದ ಪ್ರವೇಶ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ. ಹೆರಿಟೇಜ್‌ ಕಟ್ಟಡವಾಗಿದ್ದರೂ ಸಹ ಸರ್ಕಾರದಿಂದ ಯಾವುದೇ ಅನುದಾನ ಪಡೆಯದೆ ನಾವೇ ಸ್ವಂತ ಖರ್ಚಿನಲ್ಲಿ ನವೀಕರಣ ಕೆಲಸ ಮಾಡಿಸುತ್ತಿದ್ದೇವೆ.

ನವೀಕರಣದ ನಂತರ ಸಾರ್ವಜನಿಕರು ವೀಕ್ಷಣೆ ಮಾಡಲು ಅಗತ್ಯವಿರುವ ಸ್ಥಳವನ್ನು ಬಿಟ್ಟು ಹತ್ತಿರದಿಂದ ಯಾವುದೇ ಪೇಂಟಿಂಗ್‌, ವಸ್ತುಗಳನ್ನು ಮುಟ್ಟದಂತೆ ನೋಡಿಕೊಳ್ಳುವ ಜತೆಗೆ ಅಗತ್ಯ ಭದ್ರತೆಯನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅರಮನೆ ಖಾಸಗಿ ಕಾರ್ಯದರ್ಶಿ ಲಕ್ಷಿನಾರಾಯಣ್‌, ಶರತ್‌ಚಂದ್ರ ಬೊಯಪತಿ, ಮಾಳವಿಕ ಇನ್ನಿತರರು ಹಾಜರಿದ್ದರು. 

ಮಳಿಗೆಗಳ ತೆರವಿಗೆ ಮನವಿ: ಜಗನ್ಮೋಹನ ಅರಮನೆ ಆವರಣದಲ್ಲಿರುವ ಮಳಿಗೆಗಳನ್ನ ತೆರವುಗೊಳಿಸುವಂತೆ ಮಾಲೀಕರಿಗೆ ಹೇಳಿದ್ದೇವೆ. ಇದಕ್ಕಾಗಿ ಕಳೆದ ಒಂದು ವರ್ಷದಿಂದ ಬಾಡಿಗೆಯನ್ನು ಪಡೆದಿಲ್ಲ ಹಾಗೂ ಬಾಡಿಗೆಯನ್ನು ಹೆಚ್ಚಿಸಿಲ್ಲ. ಆದರೆ ಕೆಲವರು ಆರು ತಿಂಗಳು ಸಮಯ ಪಡೆದುಕೊಂಡಿದ್ದರೂ, ಈವರೆಗೂ ಮಳಿಗೆ ಬಿಟ್ಟುಕೊಟ್ಟಿಲ್ಲ. ಜಗನ್ಮೋಹನ ಅರಮನೆ ಆವರಣದಲ್ಲಿ 35 ಮಳಿಗೆಗಳಿದ್ದು, ಎಲ್ಲರಿಗೂ ಖಾಲಿ ಮಾಡುವಂತೆ ಮನವಿಯನ್ನು ಮಾಡಲಾಗಿದೆ. ಆದರೆ ಇದಕ್ಕಾಗಿ ಕಾಲಾವಕಾಶ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಅವರು ನ್ಯಾಯಾಲಯದ ಮೊರೆ ಹೋದರೂ ಅಚ್ಚರಿಯಿಲ್ಲ ಎಂದು ನುಡಿದರು. 

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.