ದಸರಾ ಯೋಗ ಚಾರಣಕ್ಕೆ ಚಾಲನೆ
Team Udayavani, Oct 14, 2018, 11:50 AM IST
ಮೈಸೂರು: ಆರೋಗ್ಯ ಕೆಟ್ಟ ಮೇಲೆ ಧೃತಿಗೆಡುವ ಬದಲು ಆರೋಗ್ಯ ಕೆಡದಂತೆ ನೋಡಿಕೊಳ್ಳುವುದು ಒಳ್ಳೆಯದು. ಆರೋಗ್ಯ ಸುಸ್ಥಿರವಾಗಿರಲು ಎಲ್ಲರೂ ಯೋಗಾಭ್ಯಾಸ ಮಾಡಬೇಕಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಸಲಹೆ ನೀಡಿದರು.
ಯೋಗ ದಸರಾ ಉಪಸಮಿತಿ ವತಿಯಿಂದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಶನಿವಾರ ಆಯೋಜಿಸಿದ್ದ ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ. ಆರೋಗ್ಯ ಸರಿಯಿಲ್ಲದಿದ್ದರೆ ಆತ ಏನನ್ನೂ ಮಾಡಲು ಸಾಧ್ಯಲ್ಲ. ಅದಕ್ಕಾಗಿ ಎಲ್ಲರೂ ಪ್ರತಿದಿನ ಯೋಗ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕಿದೆ.
ಯೋಗದಿಂದ ಮನಸ್ಸು ಕೂಡ ಉಲ್ಲಾಸವಾಗಿರಲಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ಪಾದದ ಬಳಿ ಹಸಿರು ನಿಶಾನೆ ತೋರುವ ಮೂಲಕ ಚಾರಣಕ್ಕೆ ಚಾಲನೆ ನೀಡಲಾಯಿತು. ಬಳಿಕ ನೂರಾರು ಯೋಗಾಸಕ್ತರು ಸಹಸ್ರ ಮೆಟ್ಟಿಲೇರಿ ಚಾಮುಂಡಿಬೆಟ್ಟಕ್ಕೆ ತೆರಳಿ ದುರ್ಗಾ ನಮಸ್ಕಾರ ಹಾಗೂ ಯೋಗಪ್ರದರ್ಶನ ನೀಡಿದರು.
ಈ ಸಂದರ್ಭದಲ್ಲಿ ಸಾಮಿ ಸರಸ್ವತಿವಿದ್ಯಾ ಕೇಂದ್ರದ ನಾರಾಯಣ ಗುರೂಜಿ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಜ್ಯೋತಿ, ಸಂಸದ ಪ್ರತಾಪ್ ಸಿಂಹ ಪತ್ನಿ ಅರ್ಪಿತಾ ಸೇರಿದಂತೆ ಇನ್ನಿತರರು ಹಾಜರಿದ್ದರು. ಮೈಸೂರಿನ ಯೋಗ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ