ಯೋಗಾಸಕ್ತರನ್ನು ಸೆಳೆದ ದಸರಾ ಯೋಗೋತ್ಸವ
Team Udayavani, Oct 15, 2018, 11:36 AM IST
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ದಸರಾ ಯೋಗೋತ್ಸವದಲ್ಲಿ ಸಹಸ್ರಾರು ಯೋಗಪಟುಗಳು ಏಕಕಾಲದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಆಸನ ಪ್ರದರ್ಶಿಸಿದರು.
ಅಂಬಾವಿಲಾಸ ಅರಮನೆ ಆವರಣದಲ್ಲಿ ಭಾನುವಾರ ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದ ಯೋಗಾಸಕ್ತರು ಚುಮುಚುಮು ಚಳಿಯನ್ನು ಲೆಕ್ಕಿಸದೆ ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಿ ಯೋಗ ನಮನ ಸಲ್ಲಿಸಿದರು.
ಪ್ರಾರ್ಥನೆಯೊಂದಿಗೆ ಆರಂಭಗೊಂಡ ಯೋಗ ಪ್ರದರ್ಶನದ ನಂತರ ಸಾಮೂಹಿಕ ಸೂರ್ಯ ನಮಸ್ಕಾರ ಸೇರಿದಂತೆ 26 ಆಸನಗಳು ಶವಾಸನ, ಪ್ರಾಣಾಯಾಮ, ಧ್ಯಾನ ಮತ್ತು ಶಾಂತಿ ಮಂತ್ರದ ಮೂಲಕ ಯೋಗೋತ್ಸವವನ್ನು ಮುಕ್ತಾಯಗೊಳಿಸಲಾಯಿತು. ಹಿರಿಯರು, ವಿಶೇಷ ಚೇತನರು, ಮಕ್ಕಳು ಮತ್ತು ಯುವಕ-ಯುವತಿಯರು ಸೇರಿದಂತೆ ಒಂದು ಸಾರವಿಕ್ಕೂ ಹೆಚ್ಚು ಮಂದಿ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡು ಸಾಮೂಹಿಕ ಯೋಗ ಪ್ರದರ್ಶಿಸಿದರು.
ಇದಕ್ಕೂ ಮುನ್ನಾ° ಯೋಗೋತ್ಸವಕ್ಕೆ ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಇಬ್ಬರು ಸಚಿವರು ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಇವರೊಂದಿಗೆ ಬೆಂಗಳೂರಿನ ಆಯುಷ್ ಇಲಾಖೆ ನಿರ್ದೇಶಕಿ ಮೀನಾಕ್ಷಿ ನೇಗಿ, ಯೋಗ ದಸರಾದ ಉಪವಿಶೇಷಾಧಿಕಾರಿ ಕೆ.ರಮ್ಯಾ, ಕಾರ್ಯಾಧ್ಯಕ್ಷೆ ಬಿ.ಎಸ್.ಪ್ರಭಾ, ಕಾರ್ಯದರ್ಶಿ ಡಾ.ಬಿ.ಎಸ್.ಸೀತಾಲಕ್ಷ್ಮೀ ಸೇರಿದಂತೆ ಮುಂತಾದವರು ಭಾಗವಸಿದ್ದರು.
ವಸ್ತು ಪ್ರದರ್ಶನದಲ್ಲಿ ಯೋಗ: ದಸರಾ ಅಂಗವಾಗಿ ಯೋಗ ದಸರಾ ಉಪ ಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವೃದ್ಧರು ಮತ್ತು ವಿಶೇಷ ಮಕ್ಕಳ ಯೋಗ ಪ್ರದರ್ಶನ ನಡೆಯಿತು.
ಬೆಂಗಳೂರಿನ ಬಸವೇಶ್ವರನಗರದ 67 ವರ್ಷದ ಹಿರಿಯ ಯೋಗಪಟು ಶ್ಯಾಮ್ಸುಂದರರಾವ್ ಅಂಗವಿಕಲರ ವಿಭಾಗದಲ್ಲಿ ಯೋಗಾಸನ ಮಾಡಿ ಗಮನ ಸೆಳೆದರು. ಇವರೊಂದಿಗೆ ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ್ದ ವಿವಿಧ ವಯೋಮಾನದ 800 ಸ್ಪರ್ಧಾರ್ಥಿಗಳು ಭಾಗವಸಿದ್ದರು. ಒಟ್ಟು 9 ವಿಭಾಗಗಳಲ್ಲಿ ಯೋಗಾಸನ ಸ್ಪರ್ಧೆ ನಡೆಸಲಾಯಿತು.
8ರಿಂದ 60ಕ್ಕೂ ಮೇಲ್ಪಟ್ಟ ವಯೋಮಾನದವರು ಸ್ಪರ್ಧೆಯಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ನೀರಿಕ್ಷೆ ಶಾಲೆಯ ವಿಶೇಷಚೇತನ ಮಕ್ಕಳು ಹಾಗೂ ಗದಗ ಜಿಲ್ಲೆಯ ಹೊಳೆ-ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿಯುತ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ