ಮೈಸೂರು ದಸರಾ ನಾಡಿನ ಸಂಸ್ಕೃತಿಯ ಪ್ರತೀಕ


Team Udayavani, Oct 16, 2018, 5:03 PM IST

mys-2.jpg

ನಂಜನಗೂಡು: ನಾಡ ಸಂಸ್ಕೃತಿ ಹಾಗೂ ಪರಂಪರೆ ಉಳಿಸಿ ಬೆಳೆಸಬೇಕಾದುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದು ಶಾಸಕ ಹರ್ಷವರ್ಧನ್‌ ಹೇಳಿದರು. ಇಲ್ಲಿನ ತಾಲೂಕು ಆಡಳಿತ ಏರ್ಪಡಿಸಿದ್ದ ಗ್ರಾಮೀಣ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಪಾಲುದಾರ ಕಾಂಗ್ರೆಸ್‌ ಪಕ್ಷ ನಾಡಹಬ್ಬ ದಿಂದ ದೂರ ಉಳಿದಿರುವುದು ತರವಲ್ಲ. ಇದು ಕೇವಲ ಒಂದು ಸರ್ಕಾರ ಅಥವಾ ಪಕ್ಷದ ಸಮಾರಂಭವಲ್ಲ ಆಗಲೂಬಾರದು. ಹೀಗಾಗಿಯೇ ನಾವು ಬಿಜೆಪಿ ಮುಕ್ತ ಮನಸ್ಸಿನಿಂದ ದಸರಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದೇವೆ ಎಂದರು.

ಕನ್ನಡ ನಾಡಿನ ಸಂಸ್ಕೃತಿ ಸೊಬಗನ್ನು ಉಳಿಸಲು ಅಂದು ಮಹಾರಾಜರು ಆರಂಭಿಸಿದ್ದ ನವರಾತ್ರಿ ವೈಭವ (ಹಬ್ಬ) ಇಂದು ಸರ್ಕಾರಿ ಕೃಪಾಪೋಷಿತವಾಗಿ ತನ್ನ ಪರಂಪರೆಯ ಗತ ವೈಭವದಿಂದ ದೂರವಾಗುವುದು ಸರಿಯಲ್ಲ. ನಮ್ಮ ಪರಂಪರೆ ಸಂಸ್ಕೃತಿಯನ್ನು ನಾವೇ ಉಳಿಸಿ ಬೆಳೆಸದಿದ್ದರೆ, ನಮ್ಮ ಸಂಸ್ಕೃತಿ ಮೇಲೆ ಓಪನ್‌ ಸ್ಟ್ರೀಟ್‌ನಂತಹ ಪಾಶ್ಚಾತ್ಯ ಸಂಸ್ಕೃತಿ ನಿಧಾನವಾಗಿ ಆವರಿಸಿಕೊಳ್ಳತೊಡಗಿದೆ ಎಂದು ಎಚ್ಚರಿಸಿದರು. 

ಶ್ರೀಕಂಠೇಶ್ವರ ಕಲಾ ಮಂದಿರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳ ಸಾಂಸ್ಕೃತಿಕ ಕಾರ್ಯಕೃಮಗಳು ಹಾಗೂ ಗುರುಸ್ವಾಮಿಯವರ ಜಾದು ಪ್ರೇಕ್ಷಕರನ್ನು ಆಕರ್ಷಿಸಿತು. ತಹಶೀಲ್ದಾರ್‌ ದಯಾನಂದ, ಜಿಪಂ ಸದಸ್ಯರಾದ ಮಂಗಳಾ, ಸದಾನಂದ, ತಾಪಂ ಉಪಾಧ್ಯಕ್ಷ ಗೊವಿಂದ ರಾಜು, ಸದಸ್ಯರಾದ ಶಿವಣ್ಣ, ಬದನವಾಳು ರಾಮು, ಬಸವರಾಜು ಮಹದೇವಯ್ಯ, ನಗರಸಭಾ ಅಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ರಾಮಕೃಷ್ಣ, ಬಾಬು ದೇವಾ ಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪುಟ್ಟಲಿಂಗ ಶೆಟ್ಟಿ ಇನ್ನಿತರರು ಭಾಗವಹಿಸಿದ್ದರು.

ದಸರಾ ಮರವಣಿಗೆಗೆ ಚಾಲನೆ ನೀಡಿದ ತಹಶೀಲ್ದಾರ್‌ ದಯಾನಂದ ಸೋಮವಾರ ಬೆಳಗ್ಗೆ 11 ಗಂಟೆಗೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಿಂದ ಹೊರಟ ಗ್ರಾಮೀಣ ದಸರಾ ಮೆರವಣೆಗೆಗೆ ಕನ್ನಡಾಂಬೆಯ ಭಾ‌ವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.

ಮೆರವಣೆಗೆಯಲ್ಲಿ ತಾಯಿ ಭುವನೇಶ್ವರಿಯ ಭಾವ ಚಿತ್ರದೊಂದಿಗೆ ನಂದಿಧ್ವಜ, ವೀರಗಾಸೆ, ಮರಗಾಲು ಕುಣಿತ, ಕಂಸಾಳೆ, ಕೀಲುಗೊಂಬೆ ಸೇರಿ ದಂತೆ 13ಕ್ಕೂ ಹೆಚ್ಚು ಕಲಾತಂಡಗಳು ಭಾಗವಸಿದ್ದವು. ಕಾಲೇಜಿನ ಆವರಣದಿಂದ ಹೊರಬಂದ ಮೆರವಣಿಗೆ ಮಹಾತ್ಮ ಗಾಂಧಿ ರಸ್ತೆಯಲ್ಲಿ ಹಾದು ಶ್ರೀಕಂಠೇಶ್ವರ ಕಲಾಮಂದಿರದಲ್ಲಿ ಸಮಾರೋಪಗೊಂಡಿತು.  ಜಿಪಂ ಸದಸ್ಯರಾದ ಮಂಗಳಾ, ಮಧು, ತಾಪಂ ಉಪಾದ್ಯಕ್ಷ ಗೊವಿಂದರಾಜು, ಸದಸ್ಯರಾದ ಶಿವಣ್ಣ, ಬದನವಾಳು ರಾಮು, ಬಸವರಾಜು ಮಹದೇವಯ್ಯ, ಕುಂಬರಳ್ಳಿ ಸುಬ್ಬಣ್ಣ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.