ವಜ್ರಮುಷ್ಠಿ ಕಾಳಗಕ್ಕೆ ಅಖಾಡ ಸಜ್ಜು


Team Udayavani, Oct 17, 2018, 11:29 AM IST

m1-vajramush.jpg

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ವಜ್ರಮುಷ್ಠಿ ಕಾಳಗಕ್ಕೆ ದಿನಗಣನೆ ಶುರುವಾಗಿದ್ದು, ವಿಜಯದಶಮಿ ದಿನದಂದು ನಡೆಯುವ ವಜ್ರಮುಷ್ಠಿ ಕಾಳಗದಲ್ಲಿ ಸೆಣೆಸಾಡಲು ಜಟ್ಟಿಗಳು ಭಾರೀ ತಯಾರಿ ನಡೆಸಿದ್ದಾರೆ. ಅ.19ರಂದು ನಡೆಯುವ ವಜ್ರಮುಷ್ಠಿ ಕಾಳಗದ ಹಿನ್ನೆಲೆಯಲ್ಲಿ ಮಂಗಳವಾರ ಸ್ಪರ್ಧಿಗಳ ಜೋಡಿ ಕಟ್ಟಲಾಯಿತು. 

ಅಂಬಾವಿಲಾಸ ಅರಮನೆ ಅವರಣದಲ್ಲಿರುವ ಗಾಯತ್ರಿದೇವಿ ದೇವಾಸ್ಥಾನದ ಆವರಣದಲ್ಲಿ ಜಟ್ಟಿ ಸಮುದಾಯದ ಹಿರಿಯರ ಸಮ್ಮುಖದಲ್ಲಿ ನಾಲ್ವರು ಜಟ್ಟಿಗಳನ್ನು ಆಯ್ಕೆ ಮಾಡಲಾಯಿತು. ವಜ್ರಮುಷ್ಠಿ ಕಾಳಗದಲ್ಲಿ ಕೇವಲ ಮೈಸೂರು, ಬೆಂಗಳೂರು, ಚಾಮರಾಜನಗರ ಹಾಗೂ ಚನ್ನಪಟ್ಟಣದ ಜಟ್ಟಿಗಳು ಮಾತ್ರ ಭಾಗವಹಿಸಲಿದ್ದಾರೆ.

ಅದರಂತೆ ಮೈಸೂರಿನ ಮಂಜುನಾಥ ಜಟ್ಟಿ, ಚಾಮರಾಜನಗರದ ಪುರುಷೋತ್ತಮ ಜಟ್ಟಿ, ಬೆಂಗಳೂರಿನ ರಾಘವೇಂದ್ರ ಜಟ್ಟಿ, ಚನ್ನಪಟ್ಟಣದ ಸಿ.ಪಿ.ವಿದ್ಯಾಧರ ಜಟ್ಟಿ ಭಾಗವಹಿಸುತ್ತಿದ್ದಾರೆ. ಇವರಲ್ಲಿ ಮೈಸೂರಿನ ಮಂಜುನಾಥ ಜಟ್ಟಿ – ಬೆಂಗಳೂರಿನ ರಾಘವೇಂದ್ರ ಜಟ್ಟಿ, ಚನ್ನಪಟ್ಟಣದ ಸಿ.ಪಿ.ವಿದ್ಯಾಧರ ಜಟ್ಟಿ-ಚಾ.ನಗರದ ಪುರುಷೋತ್ತಮ ಜಟ್ಟಿ ಮುಖಾಮುಖೀಯಾಗಲಿದ್ದಾರೆ. 

ಜಟ್ಟಿಗಳಿಂದ ತಯಾರಿ: ದಸರೆಯಲ್ಲಿ ವಜ್ರಮುಷ್ಠಿ ನಡೆಯುವ ವಜ್ರಮುಷ್ಠಿ ಕಾಳಗದಲ್ಲಿ ಭಾಗವಹಿಸುವುದು ಜಟ್ಟಿಗಳ ಪಾಲಿಗೆ ಲಭಿಸುವ ಅದೃಷ್ಟ. ಈ ಹಿನ್ನೆಲೆಯಲ್ಲಿ ರಾಜವಂಶಸ್ಥರ ಸಮ್ಮುಖದಲ್ಲಿ ನಡೆಯುವ ಕಾಳಗದಲ್ಲಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಈಗಾಗಲೇ ಜಟ್ಟಿಗಳು ತಯಾರಿ ಆರಂಭಿಸಿದ್ದಾರೆ.

ಈ ಬಾರಿಯ ವಜ್ರಮುಷ್ಠಿ ಕಾಳಗದಲ್ಲಿ ಸ್ಪರ್ಧಿಸುತ್ತಿರುವ ನಾಲ್ವರಲ್ಲಿ ಚನ್ನಪಟ್ಟಣದ ವಿದ್ಯಾಧರ ಜೆಟ್ಟಿ ಹಾಗೂ ಬೆಂಗಳೂರಿನ ರಾಘವೇಂದ್ರ ಜಟ್ಟಿ ಇದೇ ಮೊದಲ ಬಾರಿಗೆ ಅಖಾಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದ ಇಬ್ಬರು ಜಟ್ಟಿಗಳು ಈಗಾಗಲೇ ವಜ್ರಮುಷ್ಠಿ ಕಾಳಗದಲ್ಲಿ ಭಾಗವಹಿಸಿದ್ದ ಅನುಭವ ಹೊಂದಿದ್ದಾರೆ. ನಾಲ್ವರು ಜಟ್ಟಿಗಳು ಕಳೆದ ಹಲವು ದಿನಗಳಿಂದ ಕಠಿಣ ತಯಾರಿ ನಡೆಸಿ ಕಾಳಗದಲ್ಲಿ ಸೆಣೆಸಲು ಸಜ್ಜಾಗಿದ್ದಾರೆ. 

ವಜ್ರಮುಷ್ಠಿ ಕಾಳಗ: ದಸರಾ ಮಹೋತ್ಸವದ ಕೊನೆಯ ದಿನದಂದು ನಡೆಯುವ ವಿಜಯದಶಮಿಯ ಜಂಬೂಸವಾರಿಗೂ ಮುನ್ನ ಅರಮನೆ ಕಲ್ಯಾಣ ಮಂಟಪದ ಹೊರ ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯಲಿದೆ. ನಾಡು ಮತ್ತು ರಾಜವಂಶಸ್ಥರ ಒಳಿತಿಗಾಗಿ ನಡೆಯುವ ವಜ್ರಮುಷ್ಟಿ ಕಾಳಗವನ್ನು ಈ ಹಿಂದೆ ಸ್ಪರ್ಧೆಯ ರೀತಿಯಲ್ಲಿ ನಡೆಸಿ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ನಡೆಯುತ್ತಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಇದನ್ನು ಪರಂಪರೆಯಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ವಜ್ರಮುಷ್ಠಿ ಕಾಳಗದಲ್ಲಿ ಮುಖಾಮುಖೀಯಾಗುವ ಜಟ್ಟಿಗಳ ತಲೆಯಿಂದ ರಕ್ತ ಚಿಮ್ಮುತ್ತಿದ್ದಂತೆ ಕಾಳಗ ಮುಕ್ತಾಯಗೊಳ್ಳಲಿದೆ. ಜಟ್ಟಿ ಕಾಳಗದಲ್ಲಿ ಸೆಣೆಸಾಡುವ ಜಟ್ಟಿಗಳು ರಾಜವಂಶಸ್ಥರು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿ, ಚಾಮುಂಡೇಶ್ವರಿಗೆ ರಕ್ತ ನೀಡುತ್ತೇವೆಂಬ ಉದ್ದೇಶದಿಂದ ವಜ್ರಮುಷ್ಠಿ ಕಾಳಗದಲ್ಲಿ ಭಾಗವಹಿಸುತ್ತಾರೆ. 

ಆಯ್ಕೆಯಲ್ಲಿ ವಿಳಂಬ: ಈ ಬಾರಿ ವಜ್ರಮುಷ್ಠಿ ಕಾಳಗಕ್ಕೆ ಮೈಸೂರಿನಿಂದ ಭಾಗವಹಿಸಲು ಮೂವರ ನಡುವೆ ಪೈಪೋಟಿ ಉಂಟಾದ ಹಿನ್ನೆಲೆಯಲ್ಲಿ ಜಟ್ಟಿಯ ಆಯ್ಕೆಯಲ್ಲಿ ಸ್ವಲ್ಪಮಟ್ಟಿನ ವಿಳಂಬವಾಯಿತು. ವಜ್ರಮುಷ್ಠಿ ಕಾಳಗದಲ್ಲಿ ಸ್ಪರ್ಧಿಸಲು ಮೈಸೂರಿನ ಮಾಧವ ಜಟ್ಟಿ, ಬಲರಾಮ ಜಟ್ಟಿ ಹಾಗೂ ಮಧು ಜಟ್ಟಿ ಅವರು ಆಸಕ್ತಿ ತೋರಿದರು.

ಆದರೆ ಮೂವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಜೋಡಿ ಕಟ್ಟುವಿಕೆಯಲ್ಲಿ ಕೆಲಕಾಲ ವಿಳಂಬವಾಯಿತು. ಆದರೆ ಸಮುದಾಯದ ಹಿರಿಯರ ತೀರ್ಮಾನದಂತೆ ಅಂತಿಮವಾಗಿ ಮಂಜುನಾಥ ಜೆಟ್ಟಿ ಅವರಿಗೆ ಮೈಸೂರಿನಿಂದ ಭಾಗವಹಿಸುವ ಅವಕಾಶ ಲಭಿಸಿತು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.