ಆಕರ್ಷಕ ಪಂಜಿನ ಕವಾಯತು


Team Udayavani, Oct 20, 2018, 11:44 AM IST

m3-akarshaka.jpg

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಆಕರ್ಷಕ ಪಂಜಿನ ಕವಾಯತು ನೆರೆದಿದ್ದ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡಿತು. ದಸರೆಯ ಕೊನೆಯ ಕಾರ್ಯಕ್ರಮವಾಗಿ ನಡೆದ ಕಂಜಿನ ಕವಾಯತು ಕಾರ್ಯಕ್ರಮದೊಂದಿಗೆ ವೈಭವದ ದಸರಾ ಮಹೋತ್ಸವಕ್ಕೆ ಸಂಭ್ರಮದ ತೆರೆಬಿದ್ದಿತು. 

ಚಿನ್ನದ ಅಂಬಾರಿ ಹೊತ್ತ ಅರ್ಜುನ ಬನ್ನಿಮಂಟಪ ತಲುಪುತ್ತಿದ್ದಂತೆ ಪಂಜಿನ ಕವಾಯತು ಕಾರ್ಯಕ್ರಮದ ಸಂಭ್ರಮಕ್ಕೆ ಚಾಲನೆ ದೊರೆಯಿತು. ರಾತ್ರಿ 8 ಗಂಟೆಗೆ ಆರಂಭಗೊಂಡ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ನಗರ ಪೊಲೀಸ್‌ ಆಯುಕ್ತ ಎ.ಸುಬ್ರಹ್ಮಣ್ಯೇಶ್ವರ ರಾವ್‌ ಬೆಂಗಾವಲಿನಲ್ಲಿ ವಿವಿಧ ತುಕಡಿಗಳ ಪರಿಶೀಲನೆ ನಡೆಸಿದರು. 

ಇದಾದ ನಂತರ ಮೈದಾನದಲ್ಲಿ 21 ಕುಶಾಲ ತೋಪು ಸಿಡಿಸುವ ಮೂಲಕ ರಾಷ್ಟ್ರ ಗೌರವ ಸಮರ್ಪಿಸಲಾಯಿತು. ಬಳಿಕ ಪೊಲೀಸ್‌ ತುಕಡಿಗಳು, ಎನ್‌ಸಿಸಿಯ ಭೂಸೇನೆ, ವಾಯು ಸೇನೆ, ನೌಕಾದಳ ಹಾಗೂ ಅಶ್ವರೋಹಿ ಪಡೆ ಸಿಬ್ಬಂದಿ ಪೊಲೀಸ್‌ ವಾದ್ಯವೃಂದ ಹಿಮ್ಮೇಳದೊಂದಿಗೆ ಶಿಸ್ತುಬದ್ಧ ಪಥಸಂಚಲನ ನಡೆಸಿ ನೋಡುಗರನ್ನು ಚಕಿತಗೊಳಿಸಿದರು. ನಂತರ ಗಣೇಶ್‌ ಈಶ್ವರ್‌ ಭಟ್‌ ನೇತೃತ್ವದ ಗಾಯಕರ ತಂಡ ನಾಡಗೀತೆ ಪ್ರಸ್ತುತ ಪಡೆಸಿದರು. 

“ಶ್ವೇತಾಶ್ವ’ ಮ್ಯಾಜಿಕ್‌: ಪಂಜಿನ ಕವಾಯತು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಸಾಹಸಮಯ ಬೈಕ್‌ ರೈಡಿಂಗ್‌ ನೆರೆದಿದ್ದ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ಉಣಬಡಿಸಿತು. “ಶ್ವೇತಾಶ್ವ’ ಹೆಸರಿನ ತಂಡದಲ್ಲಿದ್ದ ಭೂದಳದ 30 ಮಂದಿ ಯೋಧರು ತಮ್ಮ ಮಿಂಚಿನ ವೇಗದ ರಾಯಲ್‌ ಎನ್ಫಿàಲ್ಡ್‌ ಬೈಕ್‌ಗಳ ಮೂಲಕ ನೀಡಿದ ಸಾಹಸ ಪ್ರದರ್ಶನ ಎಲ್ಲರ ಹುಬ್ಬೇರುವಂತೆ ಮಾಡಿತು.

ಮೈದಾನದಲ್ಲಿ ಅಂದಾಜು 20 ನಿಮಿಷಗಳ ಸಾಹಸಮಯ ಬೈಕ್‌ ರೈಡಿಂಗ್‌ ನಡೆಸಿದ ಯೋಧರು ತರಾವರಿ ಕಸರತ್ತು ಪ್ರದರ್ಶಿಸುವ ಮೂಲಕ ಮೈನವಿರೇಳಿಸುವಂತೆ ಮಾಡಿದರು. ಏಳು ಬೈಕ್‌ಗಳ ಮೇಲೆ 30 ಜನ ಯೋಧರು ರಾಷ್ಟ್ರಧ್ವಜ ಹಿಡಿದು ಸಾಗಿದ್ದು, ಜನರ ಪ್ರಶಂಸೆಗೆ ಪಾತ್ರವಾಯಿತು. 

ಟೆಂಟ್‌ಪೆಗ್ಗಿಂಗ್‌ ಸೆಳೆತ: ನಂತರ ಅಶ್ವರೋಹಿ ಪಡೆಯ ಸದಸ್ಯರು ನಡೆಸಿಕೊಟ್ಟ ಟೆಂಟ್‌ ಪೆಗ್ಗಿಂಗ್‌ ಎಲ್ಲರನ್ನು ರಂಜಿಸಿತು. 15 ನಿಮಿಷಗಳ ಕಾಲ ನಡೆದ ಟೆಂಡ್‌ ಪೆಗ್ಗಿಂಗ್‌ ಪ್ರದರ್ಶನದಲ್ಲಿ ಪೊಲೀಸರು ಶರವೇಗದಲ್ಲಿ ಬಂದು ಟೆಂಟ್‌ ಪೆಗ್ಗಿಂಗ್‌ ಮಾಡುವ ಮೂಲಕ ಸಾಹಸ ಪ್ರದರ್ಶಿಸಿದರು. ವೇಗ ಮತ್ತು ಅಶ್ವರೋಹಿಪಡೆ ಸಿಬ್ಬಂದಿಯ ಚಾಕಚಕ್ಯತೆಗೆ ಸಾಕ್ಷಿಯಾಯಿತು. 

ಸಾಂಸ್ಕೃತಿಕ ಮೆರಗು: ರೋಮಾಂಚನಕಾರಿ ಬೈಕ್‌ ರೈಡಿಂಗ್‌, ಟೆಂಟ್‌ಪೆಗ್ಗಿಂಗ್‌ ಪ್ರದರ್ಶನದ ನಡುವೆ ಬನ್ನಿಮಂಟಪದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಿತು. ಕಲಾತಂಡಗಳ ಸದಸ್ಯರು, ಮಕ್ಕಳು ವಿವಿಧ ಹಾಡುಗಳಿಗೆ ಹೆಜ್ಜೆಹಾಕುವ ಮೂಲಕ ಎಲ್ಲರನ್ನು ರಂಜಿಸಿದರು. 

ಪಂಜಿನ ಕವಾಯತು: ಬನ್ನಿಮಂಟಪ ಮೈದಾನದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳು ಮುಕ್ತಾಯಗೊಂಳ್ಳುತ್ತಿದ್ದಂತೆ ಶತಮಾನಗಳ ಇತಿಹಾಸವಿರುವ ಪಂಜಿನ ಕವಾಯತು ಪ್ರದರ್ಶನ ರೋಮಾಂಚನಗೊಳಿಸಿತು. ರಾಜ್ಯ ಪೊಲೀಸ್‌ ಪಡೆಯ 300ಕ್ಕೂ ಹೆಚ್ಚು ಪೊಲೀಸ್‌ ಪ್ರಶಿಕ್ಷಣಾರ್ತಿಗಳು ಆಕರ್ಷಕ ಪ್ರದರ್ಶನ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಕವಾಯತಿನಲ್ಲಿ ಮೈಸೂರು ದಸರಾ, ಕರ್ನಾಟಕ ಪೊಲೀಸ್‌, ವೆಲ್ಕಮ್‌ ಟು ಆಲ್‌, ಜೈ ಚಾಮುಂಡಿ, ಜೈ ಹಿಂದ್‌ ಹಾಗೂ ಸೀ ಯೂ ಇನ್‌ 2019 ಎಂಬ ಅಕ್ಷರಗಳನ್ನು ರೂಪಿಸುವ ಮೂಲಕ ದಸರಾಗೆ ಅದ್ಧೂರಿ ತೆರೆ ಎಳೆದರು. ಸಮಾರಂಭದಲ್ಲಿ ದಸರಾ ಉದ್ಘಾಟಕರಾದ ಡಾ. ಸುಧಾಮೂರ್ತಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ್‌, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಇತರರಿದ್ದರು. 

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.