ದಸರಾ ವೈಭವದಲ್ಲಿ ಮಿಂದೆದ್ದ ಮೈಸೂರು


Team Udayavani, Oct 20, 2018, 11:44 AM IST

m1-dasdara.jpg

ಮೈಸೂರು: ಅರಮನೆ ಆವರಣದಿಂದ ಬನ್ನಿಮಂಟಪ ಮೈದಾನದವರೆಗೂ ಜಂಬೂಸವಾರಿ ಮೆರವಣಿಗೆ ಸಾಗಿದ ಮಾರ್ಗದ ಇಕ್ಕೆಲಗಳಲ್ಲಿ ದೇಶ-ವಿದೇಶಗಳಿಂದ ಬಂದಿದ್ದ ಪ್ರವಾಸಿಗರು, ಸ್ಥಳೀಯ ಸಾರ್ವಜನಿಕರು, ಅಕ್ಕಪಕ್ಕದ ಜಿಲ್ಲೆಗಳಿಂದ ಬಂದಿದ್ದ ಜನರು ಸೇರಿದಂತೆ ಲಕ್ಷಾಂತರ ಜನರು ಬೆಳಗ್ಗಿನಿಂದಲೇ ತಮ್ಮ ಕುಟುಂಬದೊಂದಿಗೆ ಇಕ್ಕೆಲಗಳಲ್ಲಿ ಬಂದು ನಿಂತು ದಸರಾ ವೈಭವವನ್ನು ಕಣ್ತುಂಬಿಕೊಂಡರು.

ಭಕ್ತಿ ಭಾವ ಮೆರೆದರು: ಅರ್ಜುನ ಹೊತ್ತು ತಂದ ಚಿನ್ನದ ಅಂಬಾರಿಯನ್ನು ಕಂಡು ಧನ್ಯತಾ ಭಾವದಿಂದ ಎದ್ದು ನಿಂತು ಕೈಮುಗಿದು, ಚಾಮುಂಡೇಶ್ವರಿ ದೇವಿ ಹಾಗೂ ಯದುವಂಶದ ಅರಸರಿಗೆ ಜೈಕಾರ ಕೂಗಿ ಭಕ್ತಿ ಭಾವ ಮೆರೆದರು. ರಸ್ತೆಯ ಇಕ್ಕೆಲಗಳಲ್ಲಿ ನಿಲ್ಲಲು ಜಾಗ ಸಿಗದ ಯುವಕರು ಅಲ್ಲಲ್ಲಿ ಮರ, ದೊಡ್ಡ ದೊಡ್ಡ ಕಟ್ಟಡಗಳು, ಮೊಬೈಲ್‌ ಟವರ್‌ಗಳನ್ನೇರಿ ಕುಳಿತು ಜಂಬೂಸವಾರಿಯನ್ನು ಕಣ್ತುಂಬಿಕೊಂಡರು.
 
ನಂದೀಧ್ವಜಕ್ಕೆ ಪೂಜೆ: ನಗರದ ಲಲಿತ್‌ ಮಹಲ್‌ ಹೋಟೆಲ್‌ನಿಂದ ಸಚಿವರು, ಶಾಸಕರು ಹಾಗೂ ತಮ್ಮ ಕುಟುಂಬದವರೊಂದಿಗೆ ಮಲ್ಟಿ ಆಕ್ಸಲ್‌ ವೋಲ್ವೋ ಬಸ್‌ನಲ್ಲಿ ಮಧ್ಯಾಹ್ನ 2.43ಕ್ಕೆ ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣಕ್ಕೆ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಂದೀಧ್ವಜಕ್ಕೆ ಪೂಜೆ ಸಲ್ಲಿಸಿ, ಅರಮನೆ ಆವರಣಕ್ಕೆ ಕಾಲ್ನಡಿಗೆಯಲ್ಲೇ ಬಂದು ಕುಳಿತು ಜಂಬೂಸವಾರಿ ಮೆರವಣಿಗೆ ವೀಕ್ಷಿಸಿದರು.

ಗೌಡರ ಕುಟುಂಬ ಭಾಗಿ: ಮಾಜಿ ಪ್ರಧಾನಿ ದೇವೇಗೌಡ, ಚೆನ್ನಮ್ಮ ದೇವೇಗೌಡ, ದೇವೇಗೌಡರ ಇಬ್ಬರು ಪುತ್ರಿಯರು, ಅನಿತಾ ಕುಮಾರಸ್ವಾಮಿ ಸೇರಿದಂತೆ ಗೌಡರ ಕುಟುಂಬದ 20ಕ್ಕೂ ಹೆಚ್ಚು ಮಂದಿ ಅರಮನೆ ಆವರಣದಲ್ಲಿ ಗಣ್ಯರಿಗಾಗಿ ಹಾಕಿದ್ದ ಆಸನಗಳಲ್ಲಿ ಕುಳಿತು ಜಂಬೂಸವಾರಿ ವೀಕ್ಷಿಸಿದರು.

ಕೇಂದ್ರ ಸಚಿವರು ಭಾಗಿ: ಕೇಂದ್ರ ಸಚಿವರಾದ ಸುರೇಶ್‌ ಪ್ರಭು, ಸತ್ಪಾಲ್‌ ಮಹಾರಾಜ್‌ ಅವರೂ ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಜಂಬೂಸವಾರಿ ವೀಕ್ಷಿಸಿದರು.

ಎದ್ದು ಹೊರಟ ಜನತೆ: ಮೈಸೂರು ದಸರಾ ಎಂದರೆ ಚಿನ್ನದ ಅಂಬಾರಿ, ತಾಯಿ ಚಾಮುಂಡೇಶ್ವರಿಯ ಬಗೆಗೆ ಈ ಭಾಗದ ಜನರಲ್ಲಿ  ಭಾವನಾತ್ಮಕತೆ ಇದೆ ಎಂಬುದನ್ನು ಜನ ಸಾಬೀತು ಮಾಡಿದರು. ಮೆರವಣಿಗೆಯ ಮಧ್ಯದಲ್ಲೇ ಅಂಬಾರಿ ಸಾಗಿದ್ದರಿಂದ ಚಿನ್ನದ ಅಂಬಾರಿಯನ್ನು ಕಣ್ತುಂಬಿಕೊಂಡು, ಚಾಮುಂಡೇಶ್ವರಿ ದೇವಿಗೆ ಕೈ ಮುಗಿದು, ಧನ್ಯತಾ ಭಾವದಿಂದ ತೆರಳಿದರು. ಹೀಗಾಗಿ ಅಂಬಾರಿಯ ಹಿಂದೆ ಸಾಗಿದ ಕಲಾ ತಂಡಗಳು, ಸ್ತಬ್ದಚಿತ್ರಗಳನ್ನು ನೋಡಲು ಜನರಲ್ಲಿ ಉತ್ಸಾಹ ಕಾಣಲಿಲ್ಲ. 

ಟಾಪ್ ನ್ಯೂಸ್

Jammu-Srinagar National Highway; ಕಮರಿಗೆ ಉರುರಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; ಕಮರಿಗೆ ಉರುರಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.