ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಅರ್ಜುನ ಮತ್ತು ತಂಡ


Team Udayavani, Oct 21, 2018, 11:34 AM IST

m3-relax.jpg

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ದಸರಾ ಮಹೋತ್ಸವವನ್ನು ಸಂಪನ್ನಗೊಳಿಸಿದ ಕ್ಯಾಪ್ಟನ್‌ ಅರ್ಜುನ ನೇತೃತ್ವದ ಗಜಪಡೆ ಶನಿವಾರ ಫ‌ುಲ್‌ ರಿಲ್ಯಾಕ್ಸ್‌ ಮೂಡ್‌ನ‌ಲ್ಲಿದ್ದವು. 

ದಸರಾ ಹಿನ್ನೆಲೆಯಲ್ಲಿ ಕಾಡಿನಿಂದ ನಾಡಿಗೆ ಬಂದು ಕಳೆದ ಒಂದೂವರೆ ತಿಂಗಳಿನಿಂದ ಸತತ ತಾಲೀಮಿನಲ್ಲಿ ತೊಡಗಿಕೊಂಡಿದ್ದ ಆನೆಗಳು ಎಲ್ಲರ ಪ್ರಮುಖ ಆಕರ್ಷಣೆಯಾಗಿದ್ದವು. ಇನ್ನೂ ಜಂಬೂಸವಾರಿ ಮೆರವಣಿಗೆಯಲ್ಲಿ ಯಶಸ್ವಿಯಾಗಿ ಪಾಲ್ಗೊಳ್ಳುವ ಮೂಲಕ ಲಕ್ಷಾಂತರ ನೋಡುಗರ ಮೆಚ್ಚುಗೆಗೆ ಪಾತ್ರವಾರುವ ಗಜಪಡೆ ದಿನವಿಡಿ ವಿಶ್ರಾಂತಿ ಪಡೆದವು.

ಜಂಬೂಸವಾರಿಯ ಯಶಸ್ಸಿಗೆ ಕಾರಣವಾದ ಆನೆಗಳು ತನ್ನ ಮಾವುತರಿಂದ ಸ್ನಾನ ಮಾಡಿಸಿಕೊಂಡು, ನೀರಿನಲ್ಲಿ ಮಿಂದೆದ್ದು ವಿಶ್ರಾಂತಿ ಪಡೆದವು. ಕೋಡಿಸೋಮೇಶ್ವರ ದೇವಸ್ಥಾನದ ಬಳಿಯಿರುವ ನೀರಿನ ತೊಟ್ಟಿಯಲ್ಲಿ ಎಲ್ಲಾ ಆನೆಗಳು ಅವುಗಳ ಮಾವುತರು ಬೆಳಗ್ಗೆಯೇ ಸ್ನಾನ ಮಾಡಿಸಿದರು. ಮಾವುತರೊಂದಿಗೆ ಅವರ ಮಕ್ಕಳು ಆನೆಗಳ ಮೈಮೇಲಿದ್ದ ಬಣ್ಣಗಳನ್ನು ತೊಳೆಯಲು ಸಹಾಯ ಮಾಡಿದರು. 

ಆನೆಗಳು ಕಾಡಿಗೆ ವಾಪಸಾಗುವಷ್ಟೂ ದಿನ ಅವುಗಳಿಗೆ ಕೆಲ ದಿನಗಳಿಂದ ನೀಡುತ್ತಿರುವ ವಿಶೇಷ ಆಹಾರವನ್ನು ನೀಡಲಾಗುವುದು. ಅದೇ ರೀತಿ ಅವುಗಳ ಜತೆಯಲ್ಲಿ ಬಂದಿರುವವರಿಗೂ ಆಹಾರ ನೀಡುವುದನ್ನು ಮುಂದುವರಿಸಲಾಗುವುದು. ಆದರೆ ಕಾಡಿಗೆ ಹೋದ ಮೇಲೆ ನಮ್ಮನ್ನು ಕೇಳುವವರಿಲ್ಲ. ಇಲ್ಲಿರುವಾಗ ಎಲ್ಲರೂ ಬಂದು ಮಾತನಾಡಿಸಿ ಹೋಗುತ್ತಾರೆ. ಶಿಬಿರಕ್ಕೆ ಹೋದ ಮೇಲೆ ಯಾರೂ ಬಂದು ಕೇಳುವವರಿಲ್ಲ ಎಂದು ಮಾವುತರೊಬ್ಬರು ಬೇಸರದಿಂದ ನುಡಿದರು. 

ಆನೆಗಳಿಗೆ ಸ್ನಾನ ಮಾಡಿಸುವ ಕೆಲಸದ ವೇಳೆ ವೈದ್ಯ ಡಾ.ನಾಗರಾಜ್‌ ಖುದ್ದು ಹಾಜರಿದ್ದು ನೋಡಿಕೊಂಡರು. ಇದೇ ವೇಳೆ ಜಂಬೂಸವಾರಿ ವೇಳೆ ಗಜಪಡೆಗಳಿಗೆ ಹಾಕಿದ್ದ ವಸ್ತ್ರಗಳು, ಆಭರಣಗಳು, ಗೆಜ್ಜೆಗಳು ಮುಂತಾದವುಗಳನ್ನು ತೆಗೆದಿದ್ದ ಮಾವುತರು ಹಾಗೂ ಕಾವಾಡಿಗಳು ಸಂಗ್ರಹಿಸಿ ಅರಮನೆ ಮಂಡಳಿಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. 

ಇಂದು ನಾಡಿನಿಂದ ಕಾಡಿಗೆ: ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದು ಕಳೆದ ಒಂದೂವರೆ ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಆನೆಗಳು ಇಂದು ಕಾಡಿನತ್ತ ಪ್ರಯಾಣ ಬೆಳೆಸಲಿವೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳು ವಿವಿಧ ಆನೆ ಶಿಬಿರಗಳಿಂದ 12 ಆನೆಗಳು ಆಗಮಿಸಿದ್ದವು.

ಈ ಎಲ್ಲಾ ಆನೆಗಳು ಭಾನುವಾರ ಬೆಳಗ್ಗೆ 9.30ಕ್ಕೆ ಅರಮನೆಯಿಂದ ತಮ್ಮ ತಮ್ಮ ಶಿಬಿರಗಳಿಗೆ ಲಾರಿಗಳಲ್ಲಿ ಪ್ರಯಾಣ ಬೆಳೆಸಲಿವೆ. ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಆನೆಗಳಿಗೆ ಹಾಗೂ ಅವುಗಳ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದಿಂದ  ಬೀಳ್ಕೊಡುಗೆ ನೀಡಲಾಗುವುದು. 

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಎರಡನೇ ಬಾರಿ ನಾನು ಅರ್ಜುನನಿಗೆ ಸಾರಥಿಯಾಗಿ ಅಂಬಾರಿ ಮುನ್ನಡೆಸಿದ್ದು ತುಂಬಾ ಖುಷಿಯಾಗಿದೆ. ಅಂಬಾರಿ ನಡೆಸುವ ವೇಳೆ ಯಾವುದೇ ತೊಂದರೆಯಾಗಿಲ್ಲ. ನಿಗದಿತ ಸಮಯಕ್ಕೆ ನಾವು ಗುರಿ ತಲುಪಿದ್ದೇವೆ. ಅಂಬಾರಿ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ.
-ವಿನು, ಅರ್ಜುನನ ಮಾವುತ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.