ಎಲ್ಲರಿಗೂ ವಂದನೆ, 2019ಕ್ಕೆ ಮತ್ತೆ ಸಿಗೋಣ


Team Udayavani, Oct 22, 2018, 11:48 AM IST

m1-ellarigu.jpg

ಮೈಸೂರು: ಕಳೆದ ಕೆಲವು ದಿನಗಳ ಹಿಂದೆ ವಿಶ್ವವಿಖ್ಯಾತ ದಸರೆಯ ಸಂಭ್ರಮ, ಸಡಗರಕ್ಕೆ ಸಾಕ್ಷಿಯಾಗಿದ್ದ ಅಂಬಾವಿಲಾಸ ಅರಮನೆ ಆವರಣ ಭಾನುವಾರ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ನಾಡಹಬ್ಬಕ್ಕಾಗಿ ನಗರಕ್ಕಾಗಮಿಸಿ ಎಲ್ಲರ ಆಕರ್ಷಣೆಯಾಗಿದ್ದ ಗಜಪಡೆ ಒಲ್ಲದ ಮನಸ್ಸಿನಿಂದ ಕಾಡಿನತ್ತ ಪಯಣ ಆರಂಭಿಸುವ ಮೂಲಕ ಹಲವರ ಕಣ್ಣಂಚಲಿ ನೀರು ತರಿಸಿದವು. 

ಆತ್ಮೀಯ ಬೀಳ್ಕೊಡುಗೆ: ದಸರೆಯ ಹಿನ್ನೆಲೆಯಲ್ಲಿ ಕಾಡಿನಿಂದ ನಾಡಿಗೆ ಆಮಿಸಿದ್ದ ಅರ್ಜುನ ನೇತೃತ್ವದ 12 ಆನೆಗಳು ಕಳೆದ ಹಲವು ದಿನಗಳಿಂದ ಅರಮನೆಯಲ್ಲಿ ಬೀಡುಬಿಟ್ಟಿದ್ದವು. ಅಲ್ಲದೆ ಅ.19ರಂದು ನಡೆದ ಜಂಬೂಸವಾರಿ ಮೆರವಣಿಗೆ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಆನೆಗಳಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿತ್ತು. ಅದರಂತೆ ಭಾನುವಾರ ಬೆಳಗ್ಗೆ ಅರಮನೆ ಆವರಣದಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಲಾರಿ ಏರಲು ಹಿಂದೇಟು: ಆದರೆ ದಸರೆಗೆಂದು ಕಾಡಿನಿಂದ ನಾಡಿಗೆ ಆಗಮಿಸಿ 47 ದಿನಗಳ ಕಾಲ ಅರಮನೆಯಲ್ಲಿ ವಾಸ್ತವ್ಯ ಹೂಡಿದ್ದ ಆನೆಗಳು ಇಲ್ಲಿನ ವಾತಾವರಣ, ಆರೈಕೆಗೆ ಹೊಂದುಕೊಂಡಿದ್ದವು. ಹೀಗಾಗಿ ಕಾಡಿನತ್ತ ಪಯಣ ಆರಂಭಿಸುವ ವೇಳೆ ಗಜಪಡೆ ಹಲವು ಆನೆಗಳು ಲಾರಿ ಹತ್ತಲು ಮಕ್ಕಳಂತೆ ಹಠ ಮಾಡಿದವು. ಅದರಲ್ಲೂ ಅರಮನೆ ಆವರಣ ಬಿಟ್ಟು ಹೋಗುವಾಗ ಗಜಪಡೆ ಕ್ಯಾಪ್ಟನ್‌ ಅರ್ಜುನನ ಕಣ್ಣುಗಳ ಒದ್ದೆಯಾಗಿದ್ದು, ಎಲ್ಲರನ್ನು ಚಕಿತಗೊಳಿಸಿತು. ಮತ್ತೂಂದೆಡೆ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಧನಂಜಯ ಲಾರಿ ಏರಲು ಹಿಂದೇಟು ಹಾಕುತ್ತಿದ್ದ ದೃಶ್ಯಗಳು ಹಲವರನ್ನು ಭಾವುಕರನ್ನಾಗಿಸಿತು. 

ಸಾಂಪ್ರದಾಯಿಕ ಪೂಜೆ: ಅರಮನೆಯಲ್ಲಿ ಸೂತಕ ಇರುವ ಹಿನ್ನೆಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಜಪಡೆಯ ಒಂಭತ್ತು ಆನೆಗಳಿಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಂದರ್ಭದಲ್ಲಿ ಎಲ್ಲಾ ಆನೆಗಳಿಗೆ ಚೆಂಡು ಹೂವಿನ ಹಾರ ತೋಡಿಸಿ ಪೂಜೆ ಸಲ್ಲಿಸಲಾಯಿತು.

ಗೌರವಧನ ವಿತರಣೆ: ಆನೆಗಳಿಗೆ ಕಬ್ಬು, ಬೆಲ್ಲ, ಹಣ್ಣುಗಳನ್ನು ನೀಡಲಾಯಿತು.ಬಳಿಕ ಆನೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಇಡ್ಲಿ, ವಡೆ, ಚಟ್ನಿ, ಅವರೆಕಾಳು ಮತ್ತು ಸೊಪ್ಪಿನ ಸಾಗು, ಪೊಂಗಲ್‌, ಕೇಸರಿಬಾತ್‌, ಟೀ, ಕಾಫಿ ನೀಡಲಾಯಿತು. ಇದೇ ವೇಳೆ ಅರಮನೆ ಆಡಳಿತ ಮಂಡಳಿಯಿಂದ ಆನೆ ಮಾವುತರು,

ಕಾವಾಡಿಗಳು ಮತ್ತು ಸಹಾಯಕರಿಗೆ ನೀಡಲಾದ ತಲಾ 8500 ರೂ. ಗೌರವಧನವನ್ನು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್‌ ವಿತರಿಸಿದರು. ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ಡಿಸಿಎಫ್ ಸಿದ್ರಾಮಪ್ಪ ಚಳಕಾಪುರೆ, ಆನೆ ವೈದ್ಯ ಡಾ.ಡಿ.ಎನ್‌. ನಾಗರಾಜು, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌. ಸುಬ್ರಮಣ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು. 

ಮೂರು ಆನೆಗಳ ವಾಸ್ತವ್ಯ: ಈ ಬಾರಿಯ ದಸರಾ ಮಹೋತ್ಸವದಲ್ಲಿ ವಿವಿಧ ಶಿಬಿರಗಳಿಂದ 12 ಆನೆಗಳು ಪಾಲ್ಗೊಂಡಿದ್ದವು. ಈ ಪೈಕಿ ಗಜಪಡೆಯ ಸಾರಥಿ ಅರ್ಜುನ ಸೇರಿದಂತೆ ಒಂಭತ್ತು ಆನೆಗಳು ದಸರೆಯ ಯಶಸ್ಸಿನೊಂದಿಗೆ ಕಾಡಿನತ್ತ ಪಯಣ ಆರಂಭಿಸಿದವು. ಆದರೆ ಸೂತಕದ ಕಾರಣಕ್ಕೆ ಮುಂದೂಡಿದ್ದ ವಿಜಯದಶಮಿಯ ಧಾರ್ಮಿಕ ಕಾರ್ಯಕ್ರಮಗಳು ಅ.22ರಂದು ನಡೆಯುವ ಹಿನ್ನೆಲೆಯಲ್ಲಿ ರಾಜವಂಶಸ್ಥರ ಕೋರಿಕೆ ಮೇರೆಗೆ, ಗೋಪಿ, ವಿಕ್ರಮ ಹಾಗೂ ವಿಜಯ ಆನೆಗಳು ಅರಮನೆಯಲ್ಲೇ ಉಳಿದಿವೆ.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.