ಇಸ್ಕಾನ್‌ನಲ್ಲಿ ಅತೀ ದೊಡ್ಡ ರಾವಣ ದಹನ


Team Udayavani, Oct 23, 2018, 11:48 AM IST

m3-iscon.jpg

ಮೈಸೂರು: ಇಸ್ಕಾನ್‌-ಮೈಸೂರು 9ನೇ ವಾರ್ಷಿಕ ದಸರಾ ಉತ್ಸವದ ಅಂಗವಾಗಿ ಶ್ರೀರಾಮ, ರಾವಣನನ್ನು ಸಂಹಾರಮಾಡಿದ ಸಲುವಾಗಿ ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ರಾವಣ ದಹನ ನಡೆಸಲಾಯಿತು. ಸಂಗೀತಗಾರ ಡಾ.ವಿದ್ಯಾಭೂಷಣ ಅವರು ಹರಿದಾಸ ಕೀರ್ತನೆಗಳನ್ನು ಹಾಡುವುದರ ಮೂಲಕ ಭಗವಂತನಿಗೆ ಸಂಗೀತ ಸೇವೆಯನ್ನು ಅರ್ಪಿಸಿದರು.

ಇಸ್ಕಾನ್‌-ಬೆಂಗಳೂರು ಹಾಗೂ ದಿ ಅಕ್ಷಯ ಪಾತ್ರೆ ಫೌಂಡೇಶನ್‌ ಅಧ್ಯಕ್ಷರಾದ ಮಧು ಪಂಡಿತ್‌ ದಾಸ ಮಾತನಾಡಿ, ನಮ್ಮ ಹೃದಯಾಳದಲ್ಲೂ ಯಾವಾಗಲೂ ಒಂದು ಯುದ್ಧ ನಡೆಯುತ್ತಲೇ ಇರುತ್ತದೆ. ನಮ್ಮೊಳಗಿನ ಆ ದೈವತ್ವಕ್ಕೂ ಮತ್ತು ರಾಕ್ಷಸತ್ವಕ್ಕೂ ಸದಾ ನಡೆಯುತ್ತಿರುವ ಆ ಯುದ್ಧದ ಪ್ರತೀಕವೇ ರಾಮ-ರಾವಣರ ಯುದ್ಧ ಎಂದರು.

ಶ್ರೀರಾಮ, ರಾವಣನನ್ನು ಸಂಹರಿಸಿದಂತೆಯೇ ನಮ್ಮೊಳಗಿನ ರಾಕ್ಷಸ ಗುಣವನ್ನು ನಾಶ ಮಾಡುವ ಮೂಲಕ ಸಮಾಜದಲ್ಲಿ ದೊಡ್ಡ ಮಹತ್ತರ ಬದಲಾವಣೆಯನ್ನು ತರಬೇಕು. ಭಗವಂತನ ಪವಿತ್ರ ನಾಮ ಸ್ಮರಣೆಯಿಂದ ಮಾತ್ರ ನಮ್ಮೊಳಗಿನ ಕೋಪ, ಕಾಮ, ದುರಾಸೆ ಹಾಗೂ ಅಹಂಕಾರಗಳೆಂಬ ರಾಕ್ಷಸ ಗುಣಗಳ ಸಂಹಾರವಾಗುತ್ತದೆ ಎಂದು ನುಡಿದರು.

ಬಳಿಕ ಶ್ರೀಕೃಷ್ಣ-ಬಲರಾಮರ ಉತ್ಸವ ಮೂರ್ತಿಗಳನ್ನು ರಾಮ-ಲಕ್ಷ್ಮಣರ ಅಲಂಕಾರದಲ್ಲಿ ಗಜವಾಹನ ರಥವನ್ನು ಸೇರಿದ್ದ 15 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಹರೇ ಕೃಷ್ಣ ನಾಮ ಜಪಿಸುತ್ತಾ ಎಳೆದದರು. ರಾವಣ, ಕುಂಭಕರ್ಣ ಮತ್ತು ಮೇಘನಾದರ 60 ಅಡಿ ಎತ್ತರದ ಪ್ರತಿಕೃತಿಗಳನ್ನು ರಾವಣನ ಮೇಲಿನ ಭಗವಾನ್‌ ಶ್ರೀರಾಮನ ವಿಜಯದ ಗುರುತಾಗಿಯೂ ಅಂತೆಯೇ, ಸುಳ್ಳಿನ ಮೇಲೆ ಸತ್ಯದ ವಿಜಯವನ್ನೂ ಬಿಂಬಿಸುತ್ತಾ ಅವುಗಳ ದಹನ ಮಾಡಿದ್ದು ನೆರೆದ ಭಕ್ತಾದಿಗಳಲ್ಲಿ ರೋಮಾಂಚನವನ್ನುಂಟು ಮಾಡಿತು.

ಇಸ್ಕಾನ್‌-ಬೆಂಗಳೂರಿನ ಹಿರಿಯ ಉಪಾಧ್ಯಕ್ಷರಾದ ಚಂಚಲಪತಿ ದಾಸ, ಚೆನ್ನೈನ ಹರೇಕೃಷ್ಣ ಚಳವಳಿ ಅಧ್ಯಕ್ಷರಾದ ಸ್ತೋಕ ದಾಸ ಹಾಗೂ ಇಸ್ಕಾನ್‌-ಮೈಸೂರು ಅಧ್ಯಕ್ಷರಾದ ಜೈ ಚೈತನ್ಯದಾಸ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.