ಟಿಪ್ಪು ಜಯಂತಿ ವಿರೋಧಿಗಳು ಚರ್ಚೆ ಬರಲಿ


Team Udayavani, Nov 11, 2018, 11:21 AM IST

m1-tippu.jpg

ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ವಿರೋಧದ ಮಧ್ಯೆ ಶನಿವಾರ ಬಿಗಿ ಭದ್ರತೆಯಲ್ಲಿ ಮೈಸೂರು ಹಾಗೂ ಚಾ.ನಗರ ಜಿಲ್ಲಾದ್ಯಂತ ಟಿಪ್ಪು ಜಯಂತಿ ಆಚರಿಸಲಾಯಿತು. ವೇದಿಕೆ ಕಾರ್ಯಕ್ರಮದಲ್ಲಿ ಟಿಪ್ಪು ವಿರೋಧಿಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ನಾಯಕರು ತಿರುಗೇಟು ನೀಡಿದರು.

ಸಾಮಂತ ರಾಜನಾಗಿದ್ದ ಟಿಪ್ಪು ಮತಾಂಧನಲ್ಲ, ಬ್ರಿಟಿಷರ ವಿರುದ್ಧ 4 ಯುದ್ಧ ಮಾಡಿದ ಟಿಪ್ಪು ಇತಿಹಾಸ ತಿಳಿದು ಮಾತನಾಡಿ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ಶಾಸಕ ತನ್ವೀರ್‌ಸೇಠ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ರಾಷ್ಟ್ರದ ಆಸ್ತಿಯಾದ  ಟಿಪ್ಪುನನ್ನು ವಿನಾಕಾರಣ ಕಳ್ಳನ ಸ್ಥಾನದಲ್ಲಿ ನಿಲ್ಲಿಸಿರುವುದು ಸರಿಯಲ್ಲ. ಈ ಬಗ್ಗೆ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದರು. ಜತೆಗೆ ಮೈಸೂರು ವಿವಿಯಲ್ಲಿ ಟಿಪ್ಪು ಪೀಠ ಸ್ಥಾಪಿಸಿ ಎಂದು ಆಗ್ರಹಿಸಿದರು.

ಮೈಸೂರು: ಟಿಪ್ಪು ಸುಲ್ತಾನ್‌ ವಿಚಾರದಲ್ಲಿ ಹೆಚ್ಚಿನ ಅಧ್ಯಯನ ನಡೆಯಬೇಕಿರುವುದರಿಂದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಟಿಪ್ಪು ಅಧ್ಯಯನ ಪೀಠ  ಸ್ಥಾಪಿಸಬೇಕು, ಟಿಪ್ಪು ಜಯಂತಿ ರಾಷ್ಟ್ರೀಯ ಆಚರಣೆ ಆಗಬೇಕು ಎಂದು ಶಾಸಕ ತನ್ವೀರ್‌ಸೇಠ್ ಆಗ್ರಹಿಸಿದರು.

 ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ಹಾಗೂ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತ್ಯುತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಕಲಾಮಂದಿರ ದಲ್ಲಿ ಏರ್ಪಡಿಸಿದ್ದ ಹಜರತ್‌ ಟಿಪ್ಪು ಸುಲ್ತಾನ್‌  ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ತುಮಕೂರು ವಿವಿಯಲ್ಲಿ ಟಿಪ್ಪು ಅಧ್ಯಯನ ಪೀಠ ಸ್ಥಾಪನೆ ಘೋಷಣೆ ಮಾಡಿದ್ದರು.

ಆದರೆ ಅಧ್ಯ ಯನ ಪೀಠವನ್ನು ಮೈಸೂರು ವಿವಿಯಲ್ಲಿ ಸ್ಥಾಪನೆ ಮಾಡುವುದು ಸೂಕ್ತ ಎಂದು ಉನ್ನತ ಶಿಕ್ಷಣ ಸಚಿವ  ಜಿ.ಟಿ.ದೇವೇಗೌಡ ಗಮನ ಸೆಳೆದರು. ಇತಿಹಾಸ ಗೊತ್ತಿಲ್ಲದಿರುವವರಿಂದ ಟಿಪ್ಪು ಜಯಂತಿಗೆ ಅಪಸ್ವರ ಕೇಳಿ ಬರುತ್ತಿದೆ. ಬೆಂಗ ಳೂರಿನ ದೇವನಹಳ್ಳಿಯಲ್ಲಿ  ಜನಿಸಿದ ಟಿಪ್ಪು ಕನ್ನಡಿಗ ಅಲ್ವೇ ಎಂದು ಪ್ರಶ್ನಿಸಿದರು.

ತಮ್ಮ ಮಾತಿನುದ್ದಕ್ಕೂ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ತಿರುಗೇಟು ನೀಡಿದರು. ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಜನರ ಮನಸ್ಸು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಟಿಪ್ಪು ಮುಸಲ್ಮಾನ ಎಂಬ ಒಂದೇ  ಕಾರಣಕ್ಕೆ ವಿರೋಧ ಮಾಡಲಾಗುತ್ತಿದೆ.

ಟಿಪ್ಪು ಅನ್ಯ ಧರ್ಮಿಯನಾಗಿದ್ದರೆ ವೃತ್ತಗಳಲ್ಲಿ ಟಿಪ್ಪು ಪ್ರತಿಮೆಗಳಿರುತ್ತಿತ್ತು. ಟಿಪ್ಪು ಒಂದು ಕೋಮಿನ ಜನರ ಮಾರಣ  ಹೋಮ ಮಾಡಿದ ಎಂದು ಆರೋಪ ಮಾಡಲಾಗುತ್ತಿದೆ. ಜಲಿಯನ್‌ ವಾಲಾಬಾಗ್‌ ಘಟನೆಯಲ್ಲಿ ಪ್ರಾಣತ್ಯಾಗ ಮಾಡಿದವರ ಸ್ಮರಣೆಗೆ ಮುಂದಾಗದ, ಮಹಾತ್ಮ ಗಾಂಧೀಜಿಯ ಪ್ರಾಣವನ್ನೇ ತೆಗೆದ ಜನ ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು. 

ರಾಷ್ಟ್ರೀಯ ಆಚರಣೆಯಾಗಲಿ: ಟಿಪ್ಪು  ಕೇವಲ ಮುಸಲ್ಮಾನರ ಆಸ್ತಿಯಲ್ಲ, ರಾಷ್ಟ್ರದ ಆಸ್ತಿ. ಹೀಗಾಗಿ ಟಿಪ್ಪು ಜಯಂತಿ ರಾಷ್ಟ್ರೀಯ ಆಚರಣೆ ಆಗಬೇಕು. ನಾವೇನು ಟಿಪ್ಪು ಜಯಂತಿ ಮಾಡಿ  ಎಂದು ನಾವ್ಯಾರು ಅರ್ಜಿ ಹಾಕಿರಲಿಲ್ಲ. ಪೊಲೀಸ್‌ ರಕ್ಷಣೆಯಲ್ಲಿ ಟಿಪ್ಪು ಜಯಂತಿ ಮಾಡು ವುದು ಬೇಕಿಲ್ಲ.

ಸರ್ಕಾರಕ್ಕೆ ಟಿಪ್ಪು ಜಯಂತಿ ಮಾಡುವ ಯೋಗ್ಯತೆ  ಇಲ್ಲದಿದ್ದರೆ ಬಿಡಿ, ನಾವು ಮಾಡಿಕೊಳ್ಳುತ್ತೇವೆ. ಆರೋಗ್ಯದ ಕಾರಣಕ್ಕೆ ವಿಶ್ರಾಂತಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ, ಎಲ್ಲಿದ್ದಾರೋ ಅಲ್ಲೇ ಟಿಪ್ಪು ಜಯಂತಿಯಲ್ಲಿ ಭಾಗವಹಿಸಬೇಕಿತ್ತು ಎಂದರು.

ಶಕ್ತಿ ಬರಲ್ಲ: ಟಿಪ್ಪು ಜಯಂತ್ಯುತ್ಸವವನ್ನು ರಾಜ ಕಾರಣಕ್ಕೆ ಬಳಸುವುದರಿಂದ ಶಕ್ತಿ ಬರುವುದಿಲ್ಲ. ಎಲ್ಲರೂ ವಿದ್ಯಾವಂತರು, ಬುದ್ದಿವಂತರಾಗಿದ್ದಾರೆ. ಜಾತೀ- ಧರ್ಮದ ಹೆಸರಲ್ಲಿ ಮತಗಳಿಸುವುದು ಹೆಚ್ಚು ದಿನ ನಡೆಯಲ್ಲ.

ಅಭಿವೃದ್ಧಿ ಮಾಡದೆ ಕೋಮುವಾದ ಬಿತ್ತಿದರು ಎನ್ನುವುದು ಐದೇ ವರ್ಷಗಳಲ್ಲಿ  ಗೊತ್ತಾಗಿಬಿಡುತ್ತದೆ. ಹೀಗಾಗಿ ಜನರನ್ನು ಉದ್ವೇಗಕ್ಕೆ ಒಳಪಡಿಸಿ ಮತ ಪಡೆಯುವುದನ್ನು ಯಾರೂ ಒಪ್ಪುವುದಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.