ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ


Team Udayavani, Nov 14, 2018, 12:34 PM IST

m3-vidyarthi.jpg

ಹುಣಸೂರು: ಓದುಗರಲ್ಲಿ ಕ್ರಿಯಾಶೀಲತೆ ಉಂಟು ಮಾಡುವ, ದೈನಂದಿನ ವಿಚಾರಗಳನ್ನು ಕಟ್ಟಿಕೊಡುವ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಹೆಚ್ಚು ಜ್ಞಾನ ಪಡೆಯಬಹುದಾಗಿದೆ ಎಂದು ರೋಟರಿ ಜಿಲ್ಲಾ ಚೇರ್ಮನ್‌ ಶಿವಕುಮಾರ್‌ ವಿ.ರಾವ್‌ ಹೇಳಿದರು. 

ನಗರದ ಶಾಸ್ತ್ರೀ ವಿದ್ಯಾಸಂಸ್ಥೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಲ್ಲಿ ದಿನಪತ್ರಿಕೆಗಳು ಓದುವ ಹವ್ಯಾಸ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೂರದರ್ಶನ, ಸಾಮಾಜಿಕ ಜಾಲತಾಣಗಳು ನಮಗೆ ಮಾಹಿತಿ ನೀಡಬಹುದಷ್ಟೆ. ಆದರೆ ಪತ್ರಿಕೆಗಳು ಓದುವುದರಿಂದ ಪ್ರಪಂಚದ ಆಗುಹೋಗುಗಳು ನಮ್ಮ ಸ್ಮತಿಪಟಲದಲ್ಲಿ ಮುದ್ರೆ ಹಾಕಿದಂತೆ ಉಳಿಯುತ್ತವೆ ಎಂದು ಹೇಳಿದರು. 

ಜ್ಞಾನ ವೃದ್ಧಿಸುವ ಪತ್ರಿಕೆಗಳು: ಪತ್ರಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ಶಿಕ್ಷಣ, ಕ್ರೀಡೆ, ಆರ್ಥಿಕ ವ್ಯವಹಾರ, ದೇಶ ವಿದೇಶಗಳ ಸಮಗ್ರ ಮಾಹಿತಿ, ಸಂಪಾದಕೀಯ, ವಿಮರ್ಶೆ ಲಭ್ಯವಿರುತ್ತದೆ. ಇನ್ನು ಸ್ಥಳೀಯ ಸಮಸ್ಯೆಗಳು, ಸಾಧನೆ-ಸಾಧಕರು, ವಿಜ್ಞಾನ-ಪರಿಸರಕ್ಕೆ ಪೂರಕವಾದ ವಿಶೇಷ ಲೇಖನಗಳನ್ನು ಗಮನಿಸಬಹುದು.

ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಂಡಲ್ಲಿ ಭಾಷೆಯ ಮೇಲಿನ ಹಿಡಿತದೊಂದಿಗೆ ವಿದ್ಯಾರ್ಥಿಯ ಜ್ಞಾನಭಂಡಾರವೂ ವೃದ್ಧಿಸಿಕೊಳ್ಳಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಅದಕ್ಕಾಗಿಯೇ ಶಾಲಾ ಕಾಲೇಜುಗಳಿಂದಲೇ ಗ್ರಂಥಾಲಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. 

ದಂತಕಥೆಗಳಾದವರು: ಗಾಂಧೀಜಿ ತಮ್ಮ ಅನಿಸಿಕೆಗಳನ್ನು ಹರಿಜನ ಪತ್ರಿಕೆ ಮೂಲಕ ಅಭಿವ್ಯಕ್ತಗೊಳಿಸಿದರು. ದಿವಂಗತ ಅಬ್ದುಲ್‌ ಕಲಾಂ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡುತ್ತಲೇ ಓದುವ ಹವ್ಯಾಸ ಬೆಳೆಸಿಕೊಂಡಿದ್ದರು. ಜೈಲಿನಲ್ಲಿದ್ದ ನೆಲ್ಸನ್‌ ಮಂಡೇಲಾ, ಜಾನ್‌ ಎಫ್‌ ಕೆನಡಿ, ಅಬ್ರಹಾಂ ಲಿಂಕನ್‌ ಓದುವ ಹವ್ಯಾಸಕ್ಕೆ ಮೊರೆಹೋದ ಕಾರಣವೇ ವಿಶ್ವದ ದಂತಕಥೆಗಳಾದರು ಎಂದರು. 

ಸಂವಹನ ಕೇಂದ್ರ: ಪ್ರಾಂಶುಪಾಲ ರವಿಶಂಕರ್‌ ಮಾತನಾಡಿ, ಪತ್ರಿಕೆಗಳು ಪ್ರಚಲಿತ ವಿದ್ಯಮಾನಗಳನ್ನು ತಿಳಿಸುವ ಸಂವಹನ ಕೇಂದ್ರಗಳಾಗಿವೆ. ವಿದ್ಯಾರ್ಥಿಗಳಲ್ಲಿ ಜ್ಞಾನ ತುಂಬಲು ಪತ್ರಿಕೆಗಳಿಗಿಂತ ಉತ್ತಮ ವೇದಿಕೆ ಬೇರೊಂದಿಲ್ಲ. ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ವಿದ್ಯಾರ್ಥಿಗಳೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ, ಕ್ರಿಯಾಶೀಲತೆ ಪ್ರದರ್ಶಿಸುವ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆಯೆಂದರು. 

ಶಾಶ್ವತ ನೆಲೆ: ಕಸಾಪ ಅಧ್ಯಕ್ಷ ವಸಂತ್‌ಮಂಜುನಾಥ್‌ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವಾಗ ಎಲ್ಲಾ ಪುಸ್ತಕಗಳನ್ನು ಗುಡ್ಡೆಹಾಕಿಕೊಂಡು ಓದುವ ಬದಲು ಈಗಿಂದಲೇ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ. ಇಂದಿನ ಪ್ರಚಲಿತ ವಿದ್ಯಮಾನ ನಿಮ್ಮ ಮುಂದಿನ ಜೀವನದ ಇತಿಹಾಸದ ವಿಷಯಗಳಾಗಿ ಮೆದುಳಲ್ಲಿ ಶಾಶ್ವತವಾಗಿ ನೆಲೆಯೂರಲಿದೆ ಎಂದರು. ಮುಖ್ಯಶಿಕ್ಷಕಿ ಸತ್ಯವತಿ, ಶಿಕ್ಷಕರಾದ ನಾಗರಾಜ್‌, ಯೋಗಣ್ಣ ಮತ್ತಿತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.