ರೈತರ ಸಾವಯವ ಸಂತೆಗೆ ಉತ್ತಮ ಪ್ರತಿಕ್ರಿಯೆ
Team Udayavani, Nov 19, 2018, 12:08 PM IST
ಮೈಸೂರು: ರೈತರಿಂದ ಗ್ರಾಹಕರಿಗೆ ನೇರವಾಗಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ತಲುಪಿಸುವ ಉದ್ದೇಶದಿಂದ ನಿಸರ್ಗ ಫೌಂಡೇಷನ್ನಿಂದ ವಾರ್ಯಾಂತದಲ್ಲಿ ನಡೆಸುವ ರೈತ ಸಂತೆಗೆ ಈ ವಾರವೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಮೈಸೂರಿನ ಜೆ.ಪಿ.ನಗರದ ಜೆಎಸ್ಎಸ್ ಕಾಲೇಜು ಬಳಿ ನಿಸರ್ಗ ಫೌಂಡೇಷನ್ ಆಯೋಜಿಸಿದ್ದ ನಾವು ವಲಸಿಗರಲ್ಲ-ನೆಲೆಸಿಗರು ಹಾಗೂ ಸಾವಯವ ರೈತ ಸಂತೆ ಉತ್ತಮವಾಗಿ ನಡೆಯಿತು. ತುಳಸಿ ಗಿಡಕ್ಕೆ ನೀರು ಹಾಕುವ ಮೂಲಕ ಚಿಂತಕ ಪ್ರೊ.ಕಾಳೇಗೌಡ ನಾಗವಾರ ರೈತಸಂತೆ ಉದ್ಘಾಟಿಸಿದರು.
ಮಹದೇಶ್ವರ ಬೆಟ್ಟದ ತಪ್ಪಲ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ಸಾವಯವ ಕೃಷಿಕರು ತಾವು ಬೆಳೆದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಿದರು. ಜೆ.ಪಿ.ನಗರ ಸುತ್ತಮುತ್ತಲಿನ ಪ್ರದೇಶದ ಜನರು ಉತ್ಸುಕತೆಯಿಂದ ಆಗಮಿಸಿ ಸಾವಯವ ಪದಾರ್ಥಗಳನ್ನು ಖರೀದಿಸುತ್ತಿದ್ದುದು ಕಂಡುಬಂತು.
ಸಾವಯವ ಕೃಷಿಯ ಬೆಳೆಗಳಲ್ಲಿ ಪ್ರಮುಖವಾಗಿ ನವಣೆ, ಸಜ್ಜೆ, ಬರಗು ಮುಂತಾದ ಸಿರಿಧಾನ್ಯಗಳು ಹಾಗೂ ರೈತರೇ ತಯಾರಿಸಿದ ಉಪ್ಪಿನ ಕಾಯಿ, ತಿಂಡಿ-ತಿನಿಸುಗಳು, ಬಾಳೆ ಹಣ್ಣು, ಬೆಲ್ಲ, ಈರುಳ್ಳಿ, ಬೆಳ್ಳುಳ್ಳಿ ಮುಂತಾದ ಸಾವಯವ ಪದಾರ್ಥಗಳ ಮಾರಾಟ ಹಾಗೂ ಪ್ರದರ್ಶನ ನಡೆಯಿತು.
ಸರ್ಕಾರಿ ಆಯುರ್ವೇದ ಕಾಲೇಜಿನ ಡಾ.ರಾಜೇಂದ್ರ, ಮಾಜಿ ಮೇಯರ್ ಬಿ.ಎಲ್.ಭೈರಪ್ಪ, ಚಾಮರಾಜನಗರ ಜಿಲ್ಲಾ ರೈತಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
3 ಕೋ. ರೂ. ಹಣ ಚೆನ್ನೈಯಿಂದ ಪೆನ್ಡ್ರೈವ್ ಖರೀದಿ: ಜಿ.ಟಿ.ದೇವೇಗೌಡ
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
MUST WATCH
ಹೊಸ ಸೇರ್ಪಡೆ
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ