ಅರಮನೆ ಅಂಗಳದಲ್ಲಿ ದಿ ರಾಯಲ್ ಕಿಡ್ಸ್ ಫೆಸ್ಟ್
Team Udayavani, Nov 19, 2018, 12:08 PM IST
ಮೈಸೂರು: ಪ್ರವಾಸಿಗರಿಂದ ತುಂಬಿರುತ್ತಿದ್ದ ಮೈಸೂರು ಅರಮನೆಯಲ್ಲಿ ಭಾನುವಾರ ಮಕ್ಕಳದೇ ಕಲರವ. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆಯು ಅರಮನೆ ಅಂಗಳದಲ್ಲಿ ಏರ್ಪಡಿಸಿದ್ದ ರಾಯಲ್ ಕಿಡ್ಸ್ ಫೆಸ್ಟ್ನಲ್ಲಿ ಭಾಗವಹಿಸಿದ ಮಕ್ಕಳು, ಹಾಳೆಯ ಮೇಲೆ ಅರಮನೆ, ಆನೆಯ ಮೇಲೆ ಅಂಬಾರಿ, ರಾಜ-ಮಹಾರಾಜರ ಚಿತ್ರಗಳನ್ನು ಬಿಡಿಸಿ ನೋಡುಗರ ಗಮನ ಸೆಳೆದರು.
ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಚಿತ್ರಪಟವೊಂದರ ಟೋಪಿಗೆ ಬಣ್ಣ ಹಚ್ಚುವ ಮೂಲಕ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿ, ಮೈಸೂರಿನ ಪರಂಪರೆಯನ್ನು ಮಕ್ಕಳಿಗೆ ತಿಳಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಪೂರಕವಾಗಿವೆ. ಇಂದಿನ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಮಕ್ಕಳು ಆಗಮಿಸಿರುವುದು ಸಂತಸ ತಂದಿದೆ ಎಂದರು.
ಉದ್ಯಮಿ ಆರ್.ಗುರು ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಸಂತೋಷಗೊಳಿಸುವುದರ ಜೊತೆಗೆ ಅವರಿಗೆ ಪರಂಪರೆಯ ಕುರಿತ ಮಾಹಿತಿ ತಲುಪಿಸಬಹುದಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಲಿ ಎಂದು ಆಶಿಸಿದರು.
ದಿ ರಾಯಲ್ ಕಿಡ್ಸ್ ಫೆಸ್ಟ್ ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲೆಗಳಿಂದ 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಚಿತ್ರ ಕಲಾವಿದ ಬಾದಲ್ ನಂಜುಂಡಸ್ವಾಮಿ, ಕಲಿಸು ಫೌಂಡೇಷನ್ನ ನಿಖೀಲೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ