ಅಲೆದಾಟ ತಪ್ಪಿಸಲು ಏಕಗವಾಕ್ಷಿ ಯೋಜನೆ


Team Udayavani, Nov 30, 2018, 12:04 PM IST

m2-aledata.jpg

ಮೈಸೂರು: ನಗರಾಭಿವೃದ್ಧಿ ಇಲಾಖೆಯನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಕಟ್ಟಡ ನಿರ್ಮಾಣ ಪರವಾನಗಿ ಹಾಗೂ ಬಡಾವಣೆ ರಚನೆಯ ನಕ್ಷೆ ಅನುಮೋದನೆಗೆ ಏಕಗವಾಕ್ಷಿ ಯೋಜನೆ ಜಾರಿಗೆ ತರುತ್ತಿರುವುದಾಗಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಕಟ್ಟಡ ನಿರ್ಮಾಣ ಮಾಡುವವರು, ಬಡಾವಣೆ ರಚನೆ ಮಾಡುವವರು ದಾಖಲಾತಿಗಳನ್ನು ಹಿಡಿದುಕೊಂಡು ಕಚೇರಿಗಳಿಗೆ ಅಲೆಯಬೇಕಿಲ್ಲ. ಆನ್‌ಲೈನ್‌ನಲ್ಲೇ ಅರ್ಜಿ ಹಾಕಲು ಸಾಫ್ಟ್ವೇರ್‌ ಅಭಿವೃದ್ಧಿಪಡಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಹಾಕಿದಾಗ ದಾಖಲಾತಿಗಳೆಲ್ಲಾ ಸರಿಇದ್ದರೆ ಸ್ಥಳದಲ್ಲೇ ಸ್ವೀಕೃತಿ ಪತ್ರ ದೊರೆಯುತ್ತದೆ.

ಈ ಹಿಂದೆ ಒಂದು ಅರ್ಜಿಗೆ 14 ಕಡೆಗಳಲ್ಲಿ ನಿರಾಕ್ಷೇಪಣಾ ಪತ್ರ ತರಬೇಕಿತ್ತು. ಎಂಜಿನಿಯರ್‌ಗಳು ಸ್ಥಳ ಪರಿಶೀಲನೆ ಮಾಡುವುದೂ ವಿಳಂಬವಾಗುತ್ತಿತ್ತು. ಹೊಸ ಪದ್ಧತಿಯಲ್ಲಿ ಸ್ಥಳ ಪರಿಶೀಲನೆಗೆ ಎಂಜಿನಿಯರ್‌ ಯಾವಾಗ ಬರುತ್ತಾರೆ ಎಂಬ ಸಂದೇಶ ಅರ್ಜಿದಾರರ ಮೊಬೈಲ್‌ಗೆ ರವಾನೆಯಾಗಲಿದೆ. ಇದರಿಂದ ಹಿಂದಿನಂತೆ ಎಂಜಿನಿಯರ್‌ಗಳು ಕಚೇರಿಯಲ್ಲೇ ಕುಳಿತು ನಕ್ಷೆ ಅನುಮೋದಿಸುವುದು ತಪ್ಪುತ್ತದೆ.

ಎಲ್ಲವೂ ಡಿಜಿಟಲೀಕರಣವಾಗುವುದರಿಂದ ಎಂಜಿನಿಯರ್‌ ಸ್ಥಳ ಪರಿಶೀಲನೆ ಮಾಡುವುದನ್ನು ತಪ್ಪಿಸಲಾಗುವುದಿಲ್ಲ ಎಂದರು. ಯೋಜನೆಯ ಸಿದ್ಧತೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಒಪ್ಪಿಗೆ ಪಡೆದು ಶೀಘ್ರ ಜಾರಿಗೆ ತರುವುದಾಗಿ ಹೇಳಿದರು.

ಸ್ವಯಂ ಪರವಾನಗಿ: ಈ ಯೋಜನೆಯಡಿ 30-40 ಅಡಿ ವಿಸ್ತೀರ್ಣದ ನಿವೇಶನದಲ್ಲಿ ಮನೆ ಕಟ್ಟಿಕೊಳ್ಳುವವರು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ, ಸ್ವಯಂ ಪರವಾನಗಿ ಪಡೆದುಕೊಳ್ಳಬಹುದು. ನಗರಪಾಲಿಕೆಗಳನ್ನು ಡಿಜಿಟಲೀಕರಣ ಮಾಡುತ್ತಿದ್ದು, ಕಟ್ಟಡ ನಿರ್ಮಾಣ ಪರವಾನಗಿ ಕೊಡುವಾಗಲೇ ನಲ್ಲಿ ಮತ್ತು ಒಳಚರಂಡಿ ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ನಿಯಮ ಜಾರಿ: ಮೊಬೈಲ್‌ ಸ್ಥಾವರಗಳ ನಿರ್ಮಾಣ ಸಂಬಂಧ ರಾಜ್ಯದಲ್ಲಿ ಸ್ಪಷ್ಟ ನೀತಿ ಇಲ್ಲದ್ದರಿಂದ ಎಲ್ಲೆಂದರಲ್ಲಿ ಮೊಬೈಲ್‌ ಟವರ್‌ಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿವೆ. ಅಂದಾಜಿನ ಪ್ರಕಾರ ಬೆಂಗಳೂರು ನಗರ ಒಂದರಲ್ಲೇ 10 ಸಾವಿರ ಮೊಬೈಲ್‌ ಟವರ್‌, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲಿ 26 ಸಾವಿರ ಟವರ್‌ಗಳಿವೆ ಎಂದು ಅಂದಾಜಿಸಲಾಗಿದೆ. ಆದರೆ, ಇದು ನಿಖರವಲ್ಲ. ಇದಕ್ಕಾಗಿ ಸ್ಪಷ್ಟ ನೀತಿ ಜಾರಿಗೆ ತರಲಾಗುತ್ತಿದೆ. 

ಮೊಬೈಲ್‌ ಟವರ್‌ ಸ್ಥಾಪಿಸುವವರು, ಸಂಚಾರಿ ಟವರ್‌ಗಳವರೂ ಕೂಡ ಸಂಬಂಧಿಸಿದ ಸ್ಥಳೀಯ ಸಂಸ್ಥೆಯಲ್ಲಿ ಶುಲ್ಕ ಪಾವತಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಕಟ್ಟಡಗಳ ಮೇಲೆ ಮೊಬೈಲ್‌ ಸ್ಥಾಪಿಸುವ ಸಂದರ್ಭದಲ್ಲಿ ಆ ಕಟ್ಟಡದ ಸಾಮರ್ಥ್ಯದ ಬಗ್ಗೆ ಎಂಜಿನಿಯರ್‌ರಿಂದ ನಿರಾಕ್ಷೇಪಣಾ ಪತ್ರ ತರಬೇಕು. ಶಾಲೆ, ದೇವಸ್ಥಾನ, ಆಸ್ಪತ್ರೆಗಳ ಸುತ್ತಲಿನ 50 ಮೀಟರ್‌ ವ್ಯಾಪ್ತಿಯಲ್ಲಿ ಟವರ್‌ ಸ್ಥಾಪಿಸುವಂತಿಲ್ಲ. ಜೊತೆಗೆ ಶಬ್ದರಹಿತ ಜನರೇಟರ್‌ ಅಳವಡಿಸಬೇಕು ಎಂದರು.

3 ತಿಂಗಳೊಳಗೆ ನಿಯಮಾವಳಿ: ಈ ನಿಯಮ ಜಾರಿ ಸಂಬಂಧ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ, ರಾಜ್ಯಮಟ್ಟದಲ್ಲಿ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಗಮನಹರಿಸಲಿದೆ. ಈಗಾಗಲೇ ಟವರ್‌ ಸ್ಥಾಪಿಸಿರುವವರು ಮೂರು ತಿಂಗಳೊಳಗೆ ನಿಯಮಾವಳಿಯನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅಂತಹ ಟವರ್‌ಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.