ಅದಾಲತ್‌ನಲ್ಲಿ ಹತ್ತಾರು ವರ್ಷಗಳ ಸಮಸ್ಯೆಗೆ ಪರಿಹಾರ


Team Udayavani, Nov 30, 2018, 12:04 PM IST

m1-adalat.jpg

ಮೈಸೂರು: ಪ್ರಾಧಿಕಾರದ ಕೆಲಸಗಳಲ್ಲಿ ಅನಗತ್ಯ ವಿಳಂಬದಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌, ಗುರುವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅದಾಲತ್‌ ನಡೆಸಿದರು.

ಕಳೆದ 10, 15 ವರ್ಷಗಳಿಂದ ಬಾಕಿ ಉಳಿದಿದ್ದ ಸಮಸ್ಯೆಗಳ ಪೈಕಿ ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವರು, ಕೆಲ ಸಮಸ್ಯೆಗಳನ್ನು ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿಟ್ಟು ಇತ್ಯರ್ಥಪಡಿಸುವಂತೆ ಸೂಚಿಸಿದರು. ಕಾನೂನಾತ್ಮಕ ಸಮಸ್ಯೆಗಳಿರುವ ಪ್ರಕರಣಗಳನ್ನು ಸರ್ಕಾರಕ್ಕೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

203 ಅರ್ಜಿ: ಮುಡಾ ಅದಾಲತ್‌ಗಾಗಿ ವಲಯ ಕಚೇರಿಗಳಲ್ಲಿ 132, ನಗರ ಯೋಜನಾ ಶಾಖೆಯಲ್ಲಿ 7, ಭೂಸ್ವಾಧೀನ ಶಾಖೆಯಲ್ಲಿ 30, ತಾಂತ್ರಿಕ ಶಾಖೆಯಲ್ಲಿ 29 ಹಾಗೂ ಇತರೆ 5 ಸೇರಿದಂತೆ ಒಟ್ಟು 203 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಪೈಕಿ 189 ಅರ್ಜಿಗಳಿಗೆ ಪರಿಹಾರ ಸೂಚಿಸಲಾಯಿತು.

14 ಅರ್ಜಿಗಳನ್ನು ಪ್ರಾಧಿಕಾರದ ಸಭೆಯಲ್ಲಿ ಮಂಡಿಸಿ ನಿರ್ಣಯ ಕೈಗೊಳ್ಳಲು ತಿಳಿಸಲಾಯಿತು. ಅರ್ಜಿ ಸಲ್ಲಿಸಿದವರ ಪೈಕಿ ಮೊದಲ ಹಂತದಲ್ಲಿ 50 ಜನರಿಗೆ ಅದಾಲತ್‌ನಲ್ಲಿ ಟೋಕನ್‌ ನೀಡಿ, ಸರದಿಯ ಪ್ರಕಾರ ಈ 50 ಮಂದಿಯ ಅಹವಾಲು ಆಲಿಸಿದ ಸಚಿವರು, ಪರಿಹಾರ ಸೂಚಿಸಿದರು.

ಸಚಿವರಿಗೆ ಮನವರಿಕೆ: ಬದಲಿ ನಿವೇಶನ ಕೋರಿ ಅರ್ಜಿ, ತುಂಡು ಜಾಗ ಮಂಜೂರಾತಿ, ಕ್ರಯಪತ್ರ, ಖಾತೆ ವರ್ಗಾವಣೆ, ಹಕ್ಕುಪತ್ರ, ಸ್ವಾಧೀನ ಪತ್ರ, ನಿವೇಶನ, ಮನೆ ಕಂದಾಯ ನಿಗದಿ, ಗುತ್ತಿಗೆ ನವೀಕರಣ, ಭೂಸ್ವಾಧೀನ ಪರಿಹಾರ ,ಪ್ರೋತ್ಸಾಹಕ ನಿವೇಶನ ಕೋರಿಕೆ ಹಾಗೂ ಮುಡಾ ವ್ಯಾಪ್ತಿಯ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ ದುರಸ್ತಿ, ಒಳ ಚರಂಡಿ ನಿರ್ಮಾಣ, ವಿದ್ಯುತ್‌ ಸಂಪರ್ಕ, ಬೀದಿ ದೀಪಗಳ ಅಳವಡಿಕೆ ಕಾಮಗಾರಿ ವಿಳಂಬ ಇತ್ಯಾದಿ ಸಮಸ್ಯೆಗಳನ್ನು ಸಾರ್ವಜನಿಕರು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕ್ರಿಮಿನಲ್‌ ಕೇಸ್‌ ದಾಖಲಿಸಿ: ಎಸ್‌ಬಿಎಂ ಲೇಔಟ್‌ ನಿರ್ಮಾಣ ಮಾಡಿರುವ ಗೃಹ ನಿರ್ಮಾಣ ಸಹಕಾರ ಸಂಘದ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಿ, ಸಂಘವನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಸಂಘದಿಂದ ನಿಯಮಾವಳಿ ಉಲ್ಲಂ ಸಿ ಮಂಜೂರು ಮಾಡಿರುವ ಸಿಎ ನಿವೇಶನದಲ್ಲಿ ಮನೆ ಕಟ್ಟಲು ಬಿಟ್ಟರೆ, ರಾಜ್ಯದ ಎಲ್ಲಾ ಕಡೆಯೂ ಸಿಎ ನಿವೇಶನದಲ್ಲಿ ಮನೆಕಟ್ಟಲು ಅವಕಾಶ ಕೊಡಬೇಕಾಗುತ್ತದೆ. ಇದು ಕ್ರಿಮಿನಲ್‌ ಅಪರಾಧ. ಸಿಎ ನಿವೇಶನ ಹಾಗೂ ಉದ್ಯಾನವನವನ್ನು ಖಾತೆ ಮಾಡಬೇಡಿ, ಈ ಪ್ರಕರಣದಲ್ಲಿ 1998ರಲ್ಲಿ ಖಾತೆ ಮಾಡಿಕೊಟ್ಟಿರುವ ಮುಡಾ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಸಾರ್ವಜನಿಕರ ತರಾಟೆ: ಇದಕ್ಕೂ ಮುನ್ನ ಮುಡಾ ಅದಾಲತ್‌ಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್‌ ಹಾಗೂ ಜಿ.ಟಿ.ದೇವೇಗೌಡ ಅವರು ವೇದಿಕೆಯಿಂದ ತರಾತುರಿಯಲ್ಲಿ ಹೊರಟಿದ್ದನ್ನು ಕಂಡ ಸಾರ್ವಜನಿಕರು ಇಬ್ಬರೂ ಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡರು. ಕುರುಬಾರಹಳ್ಳಿ ಸರ್ವೇ ನಂಬರ್‌ 4ರ ಸಮಸ್ಯೆ ಇದೆ. ಅದಾಲತ್‌ಗೆ ಅರ್ಜಿಕೊಟ್ಟು ನಾವು ಕಾದು ಕುಳಿತಿದ್ದೇವೆ. ಅಧಿಕಾರಿಗಳಿಗಿಂತ ಮಂತ್ರಿಗಳೇ ಅರ್ಜೆಂಟ್‌ನಲ್ಲಿದ್ದಂತಿದೆ. ಕಾಟಾಚಾರಕ್ಕೆ ಅದಾಲತ್‌ ಮಾಡುತ್ತಿದ್ದೀರಾ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು.

ಅರ್ಜಿ ಕೊಡಿ: ನಿಮ್ಮ ಸಮಸ್ಯೆ ಬಗೆಹರಿಸುವುದಕ್ಕಾಗಿಯೇ ನಾವು ಬಂದಿರುವುದು, ನಿಮ್ಮಷ್ಟೇ ಕಾಳಜಿ ನಮಗೂ ಇದೆ. ಜನರ ಬಗ್ಗೆ ಕಾಳಜಿ ಇರುವುದಕ್ಕೇ ನಮ್ಮನ್ನು ಜನ ಆರಿಸಿ ಕಳುಹಿಸಿದ್ದಾರೆ. ನಿಮ್ಮ ವಿಚಾರ ಗೊತ್ತಿರಲಿಲ್ಲ. ಬರವಣಿಗೆಯಲ್ಲಿ ಅರ್ಜಿ ಕೊಡದೆ, ಬಾಯಲ್ಲಿ ಹೇಳಿ ಹೋದರೆ ಸಮಸ್ಯೆ ಬಗೆಹರಿಯಲ್ಲ. ಅಷ್ಟೆಲ್ಲಾ ನೆನಪಿಟ್ಟುಕೊಳ್ಳುವಂತಿದ್ದರೆ ನಾನೂ ಐಎಎಸ್‌ ಅಧಿಕಾರಿ ಆಗಿಬಿಡುತ್ತಿದ್ದೆ ಎಂದು ಸಮಜಾಯಿಷಿ ನೀಡಿದ ಸಚಿವ ಯು.ಟಿ.ಖಾದರ್‌, ಇಡೀ ದಿನ ಕುಳಿತು ಸಮಸ್ಯೆ ಆಲಿಸಿ, ಪರಿಹಾರ ಸೂಚಿಸಿದರು.

ಎಲ್ಲ ಸಮಸ್ಯೆಗಳನ್ನು ಸಚಿವರೇ ಬಗೆಹರಿಸಬೇಕಾ?: ಸಣ್ಣಪುಟ್ಟ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮಂತ್ರಿಗಳು ಬಂದು ಕೂರಬೇಕಾ? ಅಧಿಕಾರಿಗಳು ಏನು ಮಾಡುತ್ತೀರಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ತರಾಟೆಗೆ ತೆಗೆದುಕೊಂಡರು. ವಿದ್ಯಾರಣ್ಯಪುರಂನಲ್ಲಿ 30-50 ಅಡಿ ವಿಸ್ತೀರ್ಣದ ನಿವೇಶನ ಖರೀದಿಸಿರುವ ಮೀನಾಕ್ಷಿ ಎಂಬುವವರು ಮೂಲ ಕ್ರಯಪತ್ರ ಕೋರಿ ಅರ್ಜಿ ಸಲ್ಲಿಸಿದರೆ,

ಮುಡಾದಲ್ಲಿ ದಾಖಲಾತಿ ಇಲ್ಲ ಎಂದು ಹಿಂಬರಹ ನೀಡಲಾಗಿದೆ. ಕಚೇರಿಯಲ್ಲಿ ದಾಖಲಾತಿ ಇಲ್ಲ ಅಂದರೆ ಅರ್ಥವೇನು? ತಮಾಷೆ ಮಾಡ್ತೀರಾ, ನಿಮ್ಮಲ್ಲೇ ದಾಖಲಾತಿ ಸರಿಯಾಗಿ ಇಟ್ಟುಕೊಳ್ಳದೆ ಸಾರ್ವಜನಿಕರಿಗೆ ತೊಂದರೆ ಕೊಡುತ್ತೀರಾ ಎಂದು ತರಾಟೆಗೆ ತೆಗೆದುಕೊಂಡ ಅವರು, 2 ತಿಂಗಳಲ್ಲಿ ಇವರ ಸಮಸ್ಯೆ ಪರಿಹರಿಸಿ, ಮುಡಾ ರೆಕಾರ್ಡ್‌ ರೂಂ ಜವಾಬ್ದಾರಿ ಹೊಂದಿರುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸೂಚಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.