ಬಿದಿರು ಮೆಳೆಗೆ ಸಿಲುಕಿ ಗರ್ಜಿಸುತ್ತಿದ್ದ ಹುಲಿ ರಕ್ಷಣೆ


Team Udayavani, Dec 8, 2018, 11:11 AM IST

m4-bidiru.jpg

ಹುಣಸೂರು: ಉರುಳಿಗೆ ಹಾಕಿದ್ದ ಗೂಟವನ್ನೇ ಕಿತ್ತುಕೊಂಡು ಓಟ ಕಿತ್ತಿದ್ದ ಹುಲಿಯ ಕುತ್ತಿಗೆಯಲ್ಲಿದ್ದ ಗೂಟ ಬಿದಿರು ಮೆಳೆಗೆ ಸಿಲುಕಿ ಓಡಲಾಗದೆ ಗರ್ಜಿಸುತ್ತಿತ್ತು. ಅರವಳಿಕೆ ನೀಡಿದ ಅರಣ್ಯ ಇಲಾಖೆ ವೈದ್ಯ ಮತ್ತು ಸಿಬ್ಬಂದಿ, ಹುಲಿಯನ್ನು ಉರುಳಿನಿಂದ ಪಾರುಮಾಡಿ ಪುನರ್ವಸತಿ ಕೇಂದ್ರಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ತಾಲೂಕಿನ ಪ್ರಾದೇಶಿಕ ಅರಣ್ಯ ವಿಭಾಗದ ಶೆಟ್ಟಹಳ್ಳಿ-ಲಕ್ಕಪಟ್ಟಣ ಮೀಸಲು ಅರಣ್ಯ ಪ್ರದೇಶದ ಅರಣ್ಯದ ಪಕ್ಕದ ಜಮೀನಿನಲ್ಲಿ ಮರದ ಗೂಟಕ್ಕೆ ಕೇಬಲ್‌ ವೈರಿನ ಉರುಳನ್ನು ಹಾಕಲಾಗಿತ್ತು. ಅಡ್ಡಾಡುತ್ತಿದ್ದ ಹುಲಿಯು ಉರುಳಿಗೆ ಸಿಲುಕಿದ ವೇಳೆ ಜೋರಾಗಿ ಎಳೆದಿದ್ದರಿಂದ ಗೂಟದ ಸಮೇತ ಕಿತ್ತುಕೊಂಡು ಸ್ಪಲ್ಪದೂರ ಎಳೆದುಕೊಂಡು ಬಂದು ಗೂಟ ಭುಜಕ್ಕೆ ಸಿಲುಕಿಕೊಂಡು ಮುಂದೆ ಚಲಿಸಲಾಗದೆ ಬಿದಿರಿನ ಮೆಳೆಗೆ ಸಿಲುಕಿ ಗರ್ಜಿಸುತ್ತಿತ್ತು. 

ಹುಲಿಗೆ ವನ್ಯಜೀವಿ ವಿಭಾಗದ ಪಶುವೈದ್ಯ ಡಾ.ಮುಜೀಬ್‌ ರೆಹಮಾನ್‌ ಅರವಳಿಕೆ ಚುಚ್ಚು ಮದ್ದ ನೀಡಿ ಜ್ಞಾನ ತಪ್ಪಿಸಿದ ನಂತರ ಕುತ್ತಿಗೆಯಿಂದ ಉರುಳನ್ನು ಬಿಡಿಸಿ, ಚಿಕಿತ್ಸೆ ನೀಡಿ ವಾಹನಕ್ಕೇರಿಸಿಕೊಂಡು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿದ್ದು, ಇದೀಗ ಚೇತರಿಸಿಕೊಂಡಿದೆ.

ಸುಮಾರು ಎರಡೂವರೆ ವರ್ಷದ ಗಂಡು ಹುಲಿ ಇದಾಗಿದ್ದು, ಶುಕ್ರವಾರ ಬೆಳಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಹುಲಿ ಗೋಚರಿಸಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಶುಕ್ರವಾರ ಮಧ್ಯಾಹ್ನದಿಂದ ಸಂಜೆ ವರೆಗೂ ನಡೆದ ಕಾರ್ಯಾಚರಣೆಯಲ್ಲಿ ಹುಲಿಯನ್ನು ಸುರಕ್ಷಿತವಾಗಿ ಉರುಳಿನಿಂದ ಬಿಡಿಸಿ, ಇದೀಗ ಕೂರ್ಗಳ್ಳಿ ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಕಾರ್ಯಾಚರಣೆ ಬಗ್ಗೆ ಡಿಸಿಎಫ್‌.ವಿಜಯಕುಮಾರ್‌ ತಿಳಿಸಿದ್ದಾರೆ.

ಈ ವೇಳೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್‌ ರಾಂ, ಡಿಸಿಎಫ್‌ ವಿಜಯಕುಮಾರ್‌, ಎಸಿಎಫ್‌ಗಳಾದ ಸೋಮಪ್ಪ, ಪ್ರಸನ್ನಕುಮಾರ್‌, ವನ್ಯಜೀವಿ ವಾರ್ಡನ್‌ ಕೃತಿಕಾ, ಪರಿಸರವಾದಿ ರಾಜ್‌ ಕುಮಾರ್‌, ಆರ್‌ಎಫ್‌ಓ ಸಂದೀಪ್‌ ಮತ್ತಿರರ ಅಧಿಕಾರಿಗಳು ಹಾಜರಿದ್ದರು.

ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ತರಗನ್‌ ಎಸ್ಟೇಟ್‌ನಲ್ಲಿ ಕಳೆದ ಎರಡು ತಿಂಗಳ ಹಿಂದೆ ತಾಯಿಯೊಂದಿಗೆ ಮೂರು ಹುಲಿಮರಿಗಳು ಆಗಾಗ್ಗೆ ಕಾಣಿಸಿಕೊಂಡು ಉಪಟಳ ನೀಡುತ್ತಿದ್ದವು. ಈಗ ಸೆರೆ ಸಿಕ್ಕಿರುವ ಹುಲಿಯು ಕಳೆದ ಮೂರ್‍ನಾಲ್ಕು ದಿನಗಳಿಂದ ಸಹ ಈ ಭಾಗದಲ್ಲಿ ಕಾಣಿಸಿಕೊಂಡು ಆತಂಕ ಹುಟ್ಟಿಸಿತ್ತು, ಇದು ಅದೇ ಹುಲಿಯೇ ಇರಬಹುದೆಂಬ ಗ್ರಾಮಸ್ಥರು ಶಂಕಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.