ಎಲ್ಲೆಡೆ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ


Team Udayavani, Dec 14, 2018, 11:48 AM IST

m1-ellede.jpg

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಸಿದ್ಧಲಿಂಗಪುರದ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಸುಬ್ರಹ್ಮಣೇಶ್ವರಸ್ವಾಮಿಯ ದರ್ಶನ ಪಡೆದು ಪುನೀತರಾದ ಸಹಸ್ರಾರು ಭಕ್ತರು, ಹುತ್ತಕ್ಕೆ ಹಾಲೆರೆದು ಷಷ್ಠಿ ಆಚರಣೆ ಮಾಡಿದರು. 

ಹಬ್ಬದ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿಯ ಸಿದ್ಧಲಿಂಗಪುರದ ಸುಬ್ರಹ್ಮಣೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಹಬ್ಬದ ಪ್ರಯುಕ್ತ ಮುಂಜಾನೆ 2 ಗಂಟೆಯಿಂದಲೇ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ದೇವರ ದರ್ಶನ ಪಡೆಯುವ ಜತೆಗೆ ಪೂಜೆಗೆ ಅವಕಾಶ ಮಾಡಿಕೊಡಲಾಗಿತ್ತು.

ಬೆಳಗ್ಗೆ ಮೂರು ಗಂಟೆಗೆ ಸುಬ್ರಹ್ಮಣೇಶ್ವರಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಸಹಸ್ರ ನಾಮಾರ್ಚನೆ, ಅಷ್ಟವಧಾನ ಪೂಜೆ ಸಲ್ಲಿಸಿ, ನಂತರ ಹಾಲು, ಮೊಸರು, ಜೇನುತುಪ್ಪ, ಬೆಣ್ಣೆ ಅಭಿಷೇಕ ಮಾಡಲಾಯಿತು. ಮೈಸೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧೆಡೆಗಳಲ್ಲಿ ಆಗಮಿಸಿದ್ದ ಅಸಂಖ್ಯಾತ ಭಕ್ತರು, ಸಾಲುಗಟ್ಟಿನಿಂತ ದೇವರ ದರ್ಶನ ಪಡೆದರು. 

ಬೆಳ್ಳಿ ನಾಗರ ಧಾರಣೆ:ಪ್ರತಿ ವರ್ಷದ ಷಷ್ಠಿ ಸಂದರ್ಭದಲ್ಲಿ ಸುಬ್ರಹ್ಮಣೇಶ್ವರಸ್ವಾಮಿಗೆ ಬೆಳ್ಳಿ ನಾಗಾಭರಣವನ್ನು ಧರಿಸಲಾಗುತ್ತದೆ. ಅಂತೆಯೇ ಕಳೆದ ರಾತ್ರಿಯೇ ಪೊಲೀಸ್‌ ಬಂದೋಬಸ್ತ್ನಲ್ಲಿ ತಹಶೀಲ್ದಾರ್‌ ರಮೇಶ್‌ಬಾಬು, ದೇವಸ್ಥಾನದ ಪ್ರಧಾನ ಅರ್ಚಕ ಎನ್‌.ವಿ. ಸುಬ್ರಹ್ಮಣ್ಯ ಸಮ್ಮುಖದಲ್ಲಿ ದೇವರಿಗೆ ಧರಿಸಲಾಗಿತ್ತು. ಈ ಬೆಳ್ಳಿ ನಾಗಾಭರಣವನ್ನು ಮೈಸೂರು ಅರಸರು ಕೊಡುಗೆಯಾಗಿ ನೀಡಿದ್ದು,

ಮಹಾರಾಜರ ಕಾಲದಿಂದಲೂ ಷಷ್ಠಿ ಸಂದರ್ಭದಲ್ಲಿ ದೇವರಿಗೆ ಧರಿಸಲಾಗುತ್ತದೆ. ಷಷ್ಠಿ ಹಿನ್ನೆಲೆಯಲ್ಲಿ ನಡೆದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದ ಬಳಿಕ ಮಧ್ಯಾಹ್ನ 12.30ರ ಹೊತ್ತಿಗೆ ಸುಬ್ರಹ್ಮಣೇಶ್ವರಸಾಮಿಯ ರಥೋತ್ಸವ ವೈಭವದಿಂದ ಜರುಗಿತು. ಷಷ್ಠಿ ಹಬ್ಬದ ಪ್ರಯುಕ್ತ ಅಸಂಖ್ಯಾತ ಭಕ್ತಾಧಿಗಳು ಜಮಾಯಿಸಿದ್ದ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. 

ಹುತ್ತಗಳಿಗೆ ಪೂಜೆ: ಷಷ್ಠಿ ಪ್ರಯುಕ್ತ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದರೆ. ಮತ್ತೂಂದೆಡೆ ಭಕ್ತರು ನಾಗರ ಹುತ್ತಕ್ಕೆ ಹಾಲು-ಬೆಣ್ಣೆ ತನಿ ಎರೆಯುವ ಮೂಲಕ ಹರಕೆ ತೀರಿಸಿದರು. ಈ ನಡುವೆ ಕೆಲವು ಭಕ್ತಾಧಿಗಳು ಬೆಳ್ಳಿಯ ನಾಗರ ವಿಗ್ರಹಳನ್ನು ಹುತ್ತಕ್ಕೆ ಹಾಕುವ ಮೂಲಕ ಭಕ್ತಿಭಾವ ಮೆರೆದರು. 

ಪೊಲೀಸ್‌ ಭದ್ರತೆ: ದೇವರದರ್ಶನ ಸೇರಿ ಇನ್ನಿತರ ಸಂದರ್ಭದಲ್ಲಿ ಯಾವುದೇ ಗೊಂದಲ, ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ದೇವಸ್ಥಾನದ ಪ್ರವೇಶಸ್ಥಳ, ಭಕ್ತರು ಸಾಲಾಗಿ ನಿಂತಿದ್ದ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಸರಗಳ್ಳರ ಮೇಲೆ ನಿಗಾ ಇಡಲು ಮಫ್ತಿ ಪೊಲೀಸರು, ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿತ್ತು.

ಷಷ್ಠಿ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ, ಬದಲಿ ಮಾರ್ಗವನ್ನು ಕಲ್ಪಿಸಲಾಗಿತ್ತು. ಹೀಗಾಗಿ ಮೈಸೂರು-ಬೆಂಗಳೂರು ಮಾರ್ಗವಾಗಿ ಸಂಚರಿಸುವ ವಾಹನಗಳು ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿಯ ರಿಂಗ್‌ರಸ್ತೆಯಲ್ಲಿ ಎಡಕ್ಕೆ ತಿರುಗಿ ರಾಯಲ್‌ ಇನ್‌ ಜಂಕ್ಷನ್‌, ಕೆಆರ್‌ಎಸ್‌ ರಸ್ತೆ,ಪಂಪ್‌ಹೌಸ್‌, ಪಾಲಹಳ್ಳಿ ಮಾರ್ಗವಾಗಿ ಪಶ್ಚಿಮವಾನಿಗೆ ತಲುಪಲು ಸೂಚಿಸಲಾಗಿತ್ತು. 

ವಿವಿಧೆಡೆಗಳಲ್ಲಿ ಆಚರಣೆ: ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಮೈಸೂರಿನಲ್ಲಿ ಹಲವು ದೇವಸ್ಥಾನಗಳು ಹಾಗೂ ಬಡಾವಣೆಗಳಲ್ಲಿ ಆಚರಿಸಲಾಯಿತು. ಪ್ರಮುಖವಾಗಿ ದೇವರಾಜ ಮೊಹಲ್ಲಾದ ಅಮೃತೇಶ್ವರ ದೇವಸ್ಥಾನ, ವಿಶ್ವೇಶ್ವರನಗರದ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ಮಾನಂದವಾಡಿ ರಸ್ತೆಯ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಇನ್ನಿತರ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.

ಇನ್ನೂ ನಗರದ ವಿವಿಧ ಬಡಾವಣೆಗಳಲ್ಲಿಯೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಭಕ್ತಾಧಿಗಳು ತಮ್ಮ ಬಡಾವಣೆಯಲ್ಲಿರುವ ಹುತ್ತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಹುತ್ತಕ್ಕೆ ಹಾಲು, ಮೊಸರಿನಿಂದ ಪೂಜೆ ಸಲ್ಲಿಸಿ, ತನಿ ಎರೆಯುವ ಮೂಲಕ ಹಬ್ಬದ ಆಚರಣೆ ಮಾಡಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.