ಕೋಟೆ ಪುರಸಭೆ ಗದ್ದುಗೆಗೆ ಪೈಪೋಟಿ


Team Udayavani, Dec 16, 2018, 11:21 AM IST

m4-kote.jpg

ಎಚ್‌.ಡಿ.ಕೋಟೆ: ಕಳೆದ 3 ತಿಂಗಳ ಹಿಂದೆ ಎಚ್‌.ಡಿ.ಕೋಟೆ ಪುರಸಭೆ ಚುನಾವಣೆ ನಡೆದು 23 ಸದಸ್ಯರು ಆಯ್ಕೆಯಾಗಿದ್ದರೂ ಮೀಸಲಾತಿ ಗೊಂದಲದಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನೆನಗುದಿಗೆ ಬಿದ್ದಿತ್ತು. ಇದೀಗ ಸರ್ಕಾರದ ಸೂಚನೆಯಂತೆಯೇ ಮೀಸಲಾತಿಗೆ ಹೈಕೋರ್ಟ್‌ ಸಮ್ಮತಿ ನೀಡಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಪುರಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸರ್ಕಾರ ನಿಗದಿಪಡಿಸಿದ್ದ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದರಿಂದ ಆಯ್ಕೆ ನಡೆದಿರಲಿಲ್ಲ.

ಕಳೆದ 5 ದಿನಗಳ ಹಿಂದಷ್ಟೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಸೆ.3 ರಂದು ಸರ್ಕಾರ ಹೊರಡಿಸಿದ್ದ ಮಿಸಲಾತಿ ಅನ್ವಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಲು ಸೂಚಿಸಿದೆ. ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆರಲು ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತೆರೆಮರೆಯಲ್ಲಿ ಕಸರತ್ತು ಜೋರಾಗಿ ನಡೆಯುತ್ತಿದೆ.

ಕಳೆದ 2 ವರ್ಷಗಳ ಹಿಂದೆ ಕ್ಷೇತ್ರದ ಸಂಸದರು ಹಾಗೂ ಅಂದಿನ ಶಾಸಕರಾಗಿದ್ದ ಎಸ್‌.ಚಿಕ್ಕಮಾದು ಪರಿಶ್ರಮದ ಫಲವಾಗಿ ಪಟ್ಟಣ ಪಂಚಾಯಿತಿಯನ್ನು ಸರ್ಕಾರ 2 ಪುರಸಭೆಯನ್ನಾಗಿ ಮೇಲ್ದರ್ಜೆಗೆರಿಸಿತ್ತು. ಪುರಸಭೆಗೆ ಪಟ್ಟಣದ 3 ಕಿ.ಮೀ ವ್ಯಾಪ್ತಿಯ 10ಕ್ಕೂ ಹೆಚ್ಚು ಗ್ರಾಮಗಳು ಸೇರಿದ್ದರಿಂದ ಹೊಸದಾಗಿ ವಾರ್ಡ್‌ ಪುನರ್‌ ರಚನೆಯಾಗಿ ಹಿಂದೆ ಇದ್ದ 13 ವಾರ್ಡ್‌ಗಳ ಬದಲು 23 ವಾರ್ಡ್‌ಗಳಾಗಿದ್ದವು. 

ಮೀಸಲಾತಿ ಗೊಂದಲ: ಕಳೆದ ಆಗಸ್ಟ್‌ 29 ರಂದು ಪುರಸಭೆಗೆ ಚುನಾವಣೆ ನಡೆದಿತ್ತು. ಸರ್ಕಾರ ಸೆ.3 ರಂದು ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮಿಸಲಾತಿ ಪಟ್ಟಿಯನ್ನು ಪ್ರಕಟಿಸಿತ್ತು. ಬಳಿಕ ಆದ ಬದಲಾವಣೆಯಲ್ಲಿ ಸರ್ಕಾರ ಮತ್ತೆ ಸೆ.6 ರಂದು ಮೊದಲು ಹೊರಡಿಸಿದ್ದ ಮಿಸಲಾತಿ ಪಟ್ಟಿಯಲ್ಲಿ 40 ಸ್ಥಳೀಯ ಸಂಸ್ಥೆಗಳ ಮಿಸಲಾತಿಯನ್ನು ಅದಲು ಬದಲು ಮಾಡಿ ಅಧಿಸೂಚನೆ ಹೊರಡಿಸಿತ್ತು.

ಸರ್ಕಾರ ಮೊದಲು ಹೊರಡಿಸಿದ್ದ ಮಿಸಲಾತಿ ಪಟ್ಟಿಯನ್ನು ತಿದ್ದುಪಡಿ ಮಾಡಿ ಮಿಸಲಾತಿಯನ್ನು ಬದಲಿಸಿದ ಕೆಲ ಸ್ಥಳೀಯ ಸಂಸ್ಥೆಗಳ ಸದಸ್ಯರು ನ್ಯಾಯಾಲಯದ ಮೊರೆ ಹೋದ ಪರಿಣಾಮ ಸರ್ಕಾರ ತಿದ್ದುಪಡಿ ಮಾಡಿ ಎರಡನೇ ಬಾರಿ ಹೊರಡಿಸಿದ್ದ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿಗೆ ತಡೆಯಾಜ್ಞೆ ನೀಡಿತ್ತು. ಇದರಿಂದಾಗಿ ಕಳೆದ 3 ತಿಂಗಳ ಹಿಂದೆ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನೆನಗುದಿಗೆ ಬಿದ್ದತ್ತು.

ಗರಿಗೆದರಿದ ರಾಜಕೀಯ: ಮೀಸಲಾತಿ ಅನ್ವಯ ಎಚ್‌.ಡಿ.ಕೋಟೆ ಪುರಸಭೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ನಿಗದಿಯಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇನ್ನೂ ದಿನಾಂಕ ಘೋಷಣೆ ಆಗದಿದ್ದರೂ ಕಳೆದೆರಡು ದಿನಗಳಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 23 ಸದಸ್ಯ ಬಲದ ಪುರಸಭೆಗೆ 11 ಕಾಂಗ್ರೆಸ್‌ ಸದಸ್ಯರು ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತ ಹೊಂದಿದೆ. ಸ್ವ-ಪಕ್ಷದಲ್ಲೇ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಪಕ್ಷದ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. 

ಅನುದಾನ ಸಿಗದೆ ಅಭಿವೃದ್ಧಿ ಕುಂಠಿತ: ಸುಮಾರು ನಾಲ್ಕು ತಿಂಗಳ ಕಳೆದರೂ ಪುರಸಭೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನೊಳಗೊಂಡ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಾರದೆ, ವಾರ್ಡ್‌ಗಳ ಅಭಿವೃದ್ಧಿಗೂ ಅನುದಾನ ಸಿಗದೇ ನೂತನ ಸದಸ್ಯರು ಪರಿತಪಿಸುತ್ತಿದ್ದರು.

ಸಾರ್ವಜನಿಕರು ಕೂಡ ಮೂಲಭೂತ ಸೌಲಭ್ಯಕ್ಕಾಗಿ ಪರದಾಡುವಂತಾಗಿತ್ತು. ಈಗ ಕೊನೆಗೂ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಸದಸ್ಯರಲ್ಲಿ ಸಂತಸ ಮೂಡಿದೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ದಿನಾಂಕ ನಿಗದಿಪಡಿಸಿ ಜಿಲ್ಲಾಧಿಕಾರಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆ ಚುನಾವಣೆ ನಡೆಸಲು ಸೂಚಿಸದಲ್ಲಿ, ಇಲ್ಲಿನ ಪುರಸಭೆ ಆಡಳಿತಾಧಿಕಾರಿಗಳಾಗಿರುವ ಉಪವಿಭಾಗಾಕಾರಿಗಳು ಚುನಾವಣೆ ನಡೆಸಲಿದ್ದಾರೆ.

* ಬಿ.ನಿಂಗಣ್ಣ ಕೋಟೆ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.