ಎಳ್ಳು ಬೀರುವ ಸುಗ್ಗಿಹಬ್ಬ ಸಂಕ್ರಾಂತಿ ಸಂಭ್ರಮ


Team Udayavani, Jan 16, 2019, 6:58 AM IST

m1-ellu.jpg

ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ಮೈಸೂರು ಹಾಗೂ ಚಾಮರಾಜನಗರದಲ್ಲಿ ಎಳ್ಳು ಬಿರುವ ಮೂಲಕ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲಿ ರೈತರು ತಮ್ಮ ರಾಸುಗಳನ್ನು ಅಲಂಕರಿಸಿ, ಪೂಜಿಸಿ, ಕಿಚ್ಚು ಹಾಯಿಸಿ ಸುಗ್ಗಿ ಹಬ್ಬ ಸಂಕ್ರಾಂತಿ ಆಚರಿಸಿದರೆ,  ನಗರ, ಪಟ್ಟಣಗಳಲ್ಲಿ ಹೆಣ್ಣು ಮಕ್ಕಳು ಮನೆ ಮನೆಗಳಿಗೆ ತೆರಳಿ ಎಳ್ಳು ಬೆಲ್ಲ ಹಂಚಿ ಸಂಭ್ರಮಿಸಿದರು. ಅನ್ನದಾತರು ತಾವು ಬೆಳೆದಿದ್ದ ಧಾನ್ಯಗಳನ್ನು ರಾಶಿ ಹಾಕಿ, ರಂಗೋಲಿಯಿಂದ ಅಲಂಕರಿಸಿ ಪೂಜೆ ಸಲ್ಲಿಸಿದರು. ಸಿದ್ದಲಿಂಗಪುರದಲ್ಲಿ ಕಿಚ್ಚು ಹಾಯಿಸಿದ್ದನ್ನು ವಿದೇಶಿಯರು ಸೇರಿದಂತೆ ಸಹಸ್ರಾರು ಮಂದಿ ಕಣ್ತುಂಬಿಕೊಂಡರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಗೋವುಗಳಿಗೆ ಪೂಜೆ ಸಲ್ಲಿಸಿ, ಎಳ್ಳು ಬಿರುವ ಮೂಲಕ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಮಂಗಳವಾರ ಬೆಳಗ್ಗೆಯಿಂದಲೇ ನಗರದಲ್ಲಿ ಸಂಕ್ರಾಂತಿಯ ಸಡಗರ ಮನೆಮಾಡಿತ್ತು. ಮಹಿಳೆಯರು, ಹೆಣ್ಣು ಮಕ್ಕಳು ಮನೆಯಲ್ಲಿ ಹೊಸ ಬಟ್ಟೆ ಧರಿಸಿ, ದೇವರಿಗೆ ಪೂಜೆ ಸಲ್ಲಿಸಿ ನೆರೆಹೊರೆಯವರು, ಸ್ನೇಹಿತರು, ಬಂಧುಮಿತ್ರರಿಗೆ ಎಳ್ಳುಬೀರಿ, ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಮೈಸೂರಿನ ಅಗ್ರಹಾರ, ಸುಣ್ಣದಕೇರಿ, ದೇವರಾಜ ಮೊಹಲ್ಲಾ, ಕುರುಬಗೇರಿ, ಬಂಡಿಕೇರಿ, ವಿದ್ಯಾರಣ್ಯಪುರಂ, ಕೆ.ಜಿ.ಕೊಪ್ಪಲು, ಕನಕಗಿರಿ, ಗುಂಡೂರಾವ್‌ನಗರ, ಪಡುವಾರಹಳ್ಳಿ, ಒಂಟಿಕೊಪ್ಪಲು, ನಜರ್‌ಬಾದ್‌, ವೀರನಗೆರೆ, ಕ್ಯಾತಮಾರನಹಳ್ಳಿ, ಇಟ್ಟಿಗೆಗೂಡು ಮೊದಲಾದ ಕಡೆಗಳಲ್ಲಿ ಪುರುಷರು ಮನೆಯಲ್ಲಿನ ಗೋವುಗಳ ಮೈ ತೊಳೆದು ಅರಿಶಿಣ-ಕುಂಕುಮ ಹಚ್ಚಿ, ಕೊಂಬುಗಳಿಗೆ ಬಣ್ಣ ಹಚ್ಚಿ, ಬಲೂನ್‌ಗಳನ್ನು ಕಟ್ಟಿ ಸಿಂಗರಿಸಿದ ನಂತರ ಪೂಜೆ ಸಲ್ಲಿಸಿ, ಪೊಂಗಲ್‌, ಬೆಲ್ಲ, ಕಬ್ಬನ್ನು ಗೋವುಗಳಿಗೆ ತಿನ್ನಿಸಿ ಧನ್ಯತೆ ಮೆರೆದರು.

ನಗರದ ನಂಜರಾಜ ಬಹದ್ದೂರ್‌ ಛತ್ರದ ಎದುರು ವಿನೋಬಾ ರಸ್ತೆಯಲ್ಲಿ ಸಾಮೂಹಿಕ ಗೋ ಪೂಜೆ ಆಯೋಜಿಸಲಾಗಿತ್ತು. ಜನರು ತಾವು ಸಾಕಿರುವ ಹಸುಗಳ ಮೈತೊಳೆದು, ಸಿಂಗರಿಸಿ ಇಲ್ಲಿಗೆ ಕರೆತಂದು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು. ನಾಡದೇವತೆ ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನ, ಅರಮನೆ ಕೋಟೆ ಆಂಜನೇಯಸ್ವಾಮಿ, ನೂರೊಂದು ಗಣಪತಿ, ಯೋಗಾನರಸಿಂಹಸ್ವಾಮಿ ದೇವಸ್ಥಾನ, ಒಂಟಿಕೊಪ್ಪಲಿನ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ನಗರದ ಪ್ರಮುಖ ದೇವಸ್ಥಾನಗಳಲ್ಲಿ ಹಬ್ಬದ ಪ್ರಯುಕ್ತ ಶೇಷ ಪೂಜೆ ನಡೆಯಿತು.

ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದರು. ಕ್ಯಾಥೋಲಿಕ್‌ ತಮಿಳು ಟ್ರಸ್ಟ್‌ವತಿಯಿಂದ ನಾಯ್ಡು ನಗರದ ಪುಷ್ಪಾಶ್ರಮದ ಇನ್‌ಫ್ಯಾಂಟ್‌ ಜೀಸಸ್‌ ಶೆರಿನ್‌ನಲ್ಲಿ ಪೊಂಗಲ್‌ ಹಬ್ಬ ಆಚರಿಸಲಾಯಿತು. ಬಿಷಪ್‌ ಡಾ.ಕೆ.ಎ.ವಿಲಿಯಂ ಬಲಿ ಪೂಜೆ ನೇರವೇರಿಸುವ ಮೂಲಕ 7ನೇ ವರ್ಷದ ಪೊಂಗಲ್‌ ಹಬ್ಬಕ್ಕೆ ಚಾಲನೆ ನೀಡಿದರು. 

ಮುಸ್ಲಿಮರಿಗೆ ಎಳ್ಳು ಬೆಲ್ಲ: ಮಹಾ ನಗರಪಾಲಿಕೆ 23ನೇ ವಾರ್ಡ್‌ನ ಬಿಜೆಪಿ ಸದಸ್ಯೆ ಪ್ರಮೀಳ ಭರತ್‌, ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಪೌರ ಕಾರ್ಮಿಕರು ಮತ್ತು ಮುಸಲ್ಮಾನರಿಗೆ  ಎಳ್ಳು ಬೀರುವ ಮೂಲಕ ಸಂಕ್ರಾತಿ ಹಬ್ಬ ಆಚರಿಸಿದರು. ಭಾರತೀಯ ಗೋ ಪರಿವಾರದ ವತಿಯಿಂದ ಸಂಕ್ರಾತಿ ಹಬ್ಬದ ಪ್ರಯುಕ್ತ ನಗರದಲ್ಲಿ ಗೋ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ನಂಜುಮಳಿಗೆ ವೃತ್ತದ ಬಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿ ಗೋವುಗಳಿಗೆ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಎಳ್ಳು ಬೀರಲಾಯಿತು. ಮೈಸೂರಿನಲ್ಲಿ ಯೋಗ ಕಲಿಯಲು ಆಗಮಿಸಿರುವ 20ಕ್ಕೂ ಹೆಚ್ಚು ವಿದೇಶಿಯರು ಸಹ ಗೋಪೂಜೆಯಲ್ಲಿ ಭಾಗಿಯಾಗಿ ಎಳ್ಳು-ಬೆಲ್ಲ ಸವಿದು ಸಂಭ್ರಮಿಸಿದರು. 

ಸುಗ್ಗಿಯ ಸಂಭ್ರಮ: ನಗರದ ಹೊರ ವಲಯದಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ರಾಶಿ ಮಾಡಿ ಪೂಜೆ ಸಲ್ಲಿಸುವ ಜತೆಗೆ ಜಾನುವಾರುಗಳಿಗೆ ಪೂಜೆ ಸಲ್ಲಿಸಿ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಆಚರಿಸಿದರು. ಸಂಜೆ ಗೋಧೂಳಿ ಸಮಯದಲ್ಲಿ ಗೋವುಗಳಿಗೆ ಕಿಚ್ಚು ಹಾಯಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.