ಗ್ರಾಹಕರಿಗೆ ಹುಳಿಯಾದ ಟೊಮೆಟೋ ದರ


Team Udayavani, Jan 18, 2019, 6:48 AM IST

m1-grahaka.jpg

ಮೈಸೂರು: ತರಕಾರಿ ಬೆಲೆಗಳ ಏರಿಳಿತದ ಕಣ್ಣಾಮುಚ್ಚಾಲೆಯಿಂದಾಗಿ ರೈತರು ತರಕಾರಿ ಬೆಳೆಯನ್ನು ಕಡಿಮೆ ಮಾಡಿದ್ದು, ಹಾಗೂ ಚಳಿಯ ತೀವ್ರತೆಯಿಂದಾಗಿ ಇಳುವರಿ ಕಡಿಮೆಯಾಗಿರುವುದರಿಂದ ಮಾರುಕಟ್ಟೆಗೆ ತರಕಾರಿ ಪೂರೈಕೆ ಕಡಿಮೆಯಾಗಿರುವುದರಿಂದ ತರಕಾರಿ ಬೆಲೆ ದಿನೇ ದಿನೆ ಗಗನಮುಖೀಯಾಗುತ್ತಿದ್ದು, ಅದರಲ್ಲೂ ಟೊಮೆಟೋ ಗ್ರಾಹಕರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ. 

ಸಾಮಾನ್ಯವಾಗಿ ಹಬ್ಬ ಮೊದಲಾದ ವಿಶೇಷ ಸಂದರ್ಭಗಳಲ್ಲಿ ಬೆಲೆಯೇರಿಕೆಯಾಗುವುದು ಸಹಜ. ಆದರೆ, ಸಂಕ್ರಾಂತಿ ಹಬ್ಬ ಕಳೆದು ಮೂರು ದಿನವಾದರೂ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಇದಕ್ಕೆ ಬೇಡಿಕೆ ಮತ್ತು ಪೂರೈಕೆಯಲ್ಲಿನ ವ್ಯತ್ಯಾಸವೇ ಕಾರಣ ಎನ್ನುತ್ತಾರೆ ಮೈಸೂರಿನ ಎಪಿಎಂಸಿ ಮಾರುಕಟ್ಟೆಯ ತರಕಾರಿ ಸಗಟು ವರ್ತಕರಾದ ಕೆಂಪೇಗೌಡ.

ಮೈಸೂರಿನ ಎಪಿಎಂಸಿಗೆ ಮೈಸೂರು ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ತೋಟದ ಬೆಳೆಗಾರರು ತಾವು ಬೆಳೆದ ಹಣ್ಣು-ತರಕಾರಿಗಳನ್ನು ತಂದು ಮಾರಾಟ ಮಾಡಿ ಹೋಗುತ್ತಾರೆ. ಇದರಲ್ಲಿ ಸ್ಥಳೀಯ ಚಿಲ್ಲರೆ ಮಾರಾಟಗಾರರು ಕೊಂಡೊಯ್ಯುವುದು ಶೇ.5 ರಿಂದ 10ರಷ್ಟು ತರಕಾರಿಯನ್ನು ಮಾತ್ರ. ಇನ್ನುಳಿದ ಶೇ.90 ರಷ್ಟು ತರಕಾರಿ ಕೇರಳ ಮತ್ತು ತಮಿಳುನಾಡಿಗೆ ಸಾಗಣೆಯಾಗುತ್ತದೆ.

ಅದರಲ್ಲೂ ಕೇರಳಕ್ಕೆ ಶೇ.70ರಷ್ಟು ಹಣ್ಣು-ತರಕಾರಿ ಹೋಗುತ್ತದೆ. ಇನ್ನುಳಿದ ಶೇ.20ರಷ್ಟು ಹಣ್ಣು-ತರಕಾರಿ ತಮಿಳುನಾಡು ಪಾಲಾಗುತ್ತದೆ. ಒಂದು ವೇಳೆ ಕೇರಳದಲ್ಲಿ ಪ್ರತಿಭಟನೆ, ಬಂದ್‌ಗಳಾಗಿ ಸಾರಿಗೆ ವ್ಯವಸ್ಥೆ ವ್ಯತ್ಯಯವಾದಾಗ ಇಲ್ಲಿನ ಮಾರುಕಟ್ಟೆಯಲ್ಲಿ ಹಣ್ಣು -ತರಕಾರಿಯ ಬೆಲೆ ದಿಢೀರ್‌ ಕುಸಿಯುತ್ತದೆ ಎನ್ನುತ್ತಾರೆ ಎಪಿಎಂಸಿಯ ಹಣ್ಣು-ತರಕಾರಿ ಸಗಟು ವರ್ತಕರು.

ಜಿಲ್ಲೆಯಲ್ಲಿ ನೀರಾವರಿ ವ್ಯವಸ್ಥೆ ಇರುವ ರೈತರೇ ಹೆಚ್ಚಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು. ಮಳೆ ಆಶ್ರಯದಲ್ಲಿ ತರಕಾರಿ ಬೆಳೆಯುವ ರೈತರು ಎಪಿಎಂಸಿವರೆಗೆ ಬರುವುದು ಕಡಿಮೆ, ಮುಕ್ತ ಮಾರುಕಟ್ಟೆಯಲ್ಲೇ ಮಾರಿಕೊಳ್ಳುತ್ತಾರೆ. ಅವರಿಗೆ ಎಂ.ಜಿ.ರಸ್ತೆಯ ತರಕಾರಿ ಮಾರುಕಟ್ಟೆಯೇ ದೊಡ್ಡ ವ್ಯಾಪಾರಿ ತಾಣ.

ಆದರೆ, ನೀರಾವರಿ ವ್ಯವಸ್ಥೆಯನ್ನು ಮಾಡಿಕೊಂಡು ತರಕಾರಿ ಬೆಳೆಯನ್ನು ನಿಯಮಿತವಾಗಿ ಬೆಳೆಯುವ ರೈತರು, ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತವನ್ನು ಗಮನಿಸಿಯೇ ನಾವು ಯಾವ ತರಕಾರಿ ಬೆಳೆಯಬೇಕು ಎಂದು ನಿರ್ಧರಿಸುತ್ತಾರೆ. ಕಳೆದ ಆರೇಳು ತಿಂಗಳ ಹಿಂದೆ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ತೀವ್ರ ಕುಸಿತ ಕಂಡಿದ್ದರಿಂದ ಹೆಚ್ಚಿನವರು ಹಾಕಿದ ಬಂಡವಾಳ ವಾಪಸ್‌ ಬರುತ್ತದೋ ಇಲ್ಲವೋ ಎಂಬ ಗೊಂದಲದಲ್ಲಿ ತರಕಾರಿ ಬೆಳೆಯುವ ಗೋಜಿಗೆ ಹೋಗಿಲ್ಲ.

ಇನ್ನು ತರಕಾರಿ ಬೆಳೆ ಹಾಕಿರುವವರಿಗೆ ಈ ವರ್ಷ ವಿಪರೀತ ಚಳಿ ಹೆಚ್ಚಳದಿಂದ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಳೆದ 8-10ದಿನಗಳಿಂದ ಮಾರುಕಟ್ಟೆಗೆ ಬರುವ ತರಕಾರಿಯ ಪ್ರಮಾಣ ಕಡಿಮೆಯಾಗಿರುವುದರಿಂದ ತರಕಾರಿ ಬೇಡಿಕೆಯನ್ನು ಪೂರೈಸಲಾಗುತ್ತಿಲ್ಲ. ಆದ್ದರಿಂದ ಬೆಲೆ ಗಗನಮುಖೀಯಾಗುತ್ತಿದೆ. ಮೂರು ದಿನಗಳ ಹಿಂದೆ ಪ್ರತಿ ಕೇಜಿಗೆ 30 ರೂ.ಇದ್ದ ಟೊಮೆಟೋ ಬೆಲೆ ಗುರುವಾರ 22 ರೂ.ಗೆ ಇಳಿದಿದೆ. ಆದರೆ, ಮೂರು ದಿನಗಳ ಹಿಂದೆ ಕೇಜಿಗೆ 30 ರೂ. ಇದ್ದ ಬೀನ್ಸ್‌ ದರ 40 ರೂ. ಆಗಿದೆ ಎನ್ನುತ್ತಾರೆ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆ ತರಕಾರಿ ವರ್ತಕರು. 

ದರ ಕಡಿಮೆ ಇದ್ದುದರಿಂದ ಹೆಚ್ಚಿನ ರೈತರು ತರಕಾರಿ ಬೆಳೆಗೆ ಮುಂದಾಗದಿದ್ದರ ಜೊತೆಗೆ ಶೀತ ವಾತಾವರಣದಿಂದಾಗಿ ಇಳುವರಿ ಕಡಿಮೆ ಬರುವುದರಿಂದ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಏರಿಕೆಯಾಗಿದೆ.
-ಡಿ.ಮಂಜುನಾಥ್‌, ಉಪ ನಿರ್ದೇಶಕ, ತೋಟಗಾರಿಕೆ ಇಲಾಖೆ

ಕಳೆದ ಹತ್ತು ದಿನಗಳಿಂದ ಮಾರುಕಟ್ಟೆಗೆ ಟೊಮೆಟೋ ಸೇರಿದಂತೆ ತರಕಾರಿಗಳ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಬೇಡಿಕೆ ಮತ್ತು ಪೂರೈಕೆಯಲ್ಲಿ ವ್ಯತ್ಯಾಸವಾಗಿರುವುದರಿಂದ ದರ ಹೆಚ್ಚಳ ಆಗುತ್ತಿದೆ. 
-ನಾಗರಾಜ್‌, ಮೇಲ್ವಿಚಾರಕ, ಎಪಿಎಂಸಿ ಮಾರುಕಟ್ಟೆ, ಬಂಡಿಪಾಳ್ಯ

ಮಾರುಕಟ್ಟೆಗೆ ತರಕಾರಿಗಳ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ 2-3 ದಿನಗಳಿಂದ ತರಕಾರಿಗಳ ಬೆಲೆ ಜಾಸ್ತಿಯಾಗಿದೆ. ಟೊಮೆಟೋ ಬೆಲೆ ಕಡಿಮೆಯಾಗುತ್ತಿದ್ದು, ಬೀನ್ಸ್‌ ಬೆಲೆ ಹೆಚ್ಚಾಗುತ್ತಿದೆ.
-ಕೆಂಪೇಗೌಡ, ತರಕಾರಿ ಸಗಟು ವರ್ತಕರು, ಎಪಿಎಂಸಿ, ಬಂಡಿಪಾಳ್ಯ

ಇಂದಿನ ತರಕಾರಿ ವಹಿವಾಟಿನ ಬೆಲೆ ಪ್ರತಿ ಕೇಜಿಗೆ (17.01.2019)
ಬೀನ್ಸ್‌    40 ರೂ.
ಮೆಣಸಿನಕಾಯಿ    30 ರೂ.
ಸೌತೆಕಾಯಿ    13 ರೂ.
ಗುಂಡು ಬದನೆ    16 ರೂ.
ಕುಂಬಳಕಾಯಿ    4 ರೂ.
ಹೀರೆಕಾಯಿ    25 ರೂ.
ಪಡವಲ ಕಾಯಿ    13 ರೂ.
ತೊಂಡೆಕಾಯಿ    20 ರೂ.
ಹಾಗಲ(ಬಿಳಿ)    30 ರೂ.
ಹಾಗಲ(ಹಸಿರು)    30 ರೂ.
ಕಾಲಿಫ್ಲವರ್‌    12 ರೂ.
ದಪ್ಪ ಮೆಣಸಿನಕಾಯಿ    40 ರೂ.
ಬಜ್ಜಿ ಮೆಣಸಿನಕಾಯಿ    32 ರೂ.
ಸೋರೆಕಾಯಿ    8 ರೂ.
ಬಿಳಿ ಬದನೆ    20 ರೂ.
ಕೋಸು    9 ರೂ.
ಸೀಮೆ ಬದನೆ    11 ರೂ.
ಬೆಂಡೆಕಾಯಿ    27 ರೂ.
ಟೊಮೆಟೋ (ಹುಳಿ)    22 ರೂ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.