ಹಳ್ಳಕ್ಕೆ ಕತ್ತೆ ಕಿರುಬ ಬಿದ್ದಂತಾಗಿದೆ ಕಾಂಗ್ರೆಸ್‌ನ ಪರಿಸ್ಥಿತಿ


Team Udayavani, Jan 19, 2019, 6:52 AM IST

m4-hebbuli.jpg

ಮೈಸೂರು: ರಾಜ್ಯದ ಇಂದಿನ ರಾಜಕೀಯ ಬೆಳವಣಿಗೆಗಳು ಅಸಹ್ಯ ಹುಟ್ಟಿಸುತ್ತಿದೆ. ಒಳ ಜಗಳಗಳ ನಡುವೆಯೂ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕು ಎಂದು ಅಧಿಕಾರ ನಡೆಸುತ್ತಿದ್ದರೆ, ಬಿಜೆಪಿಯವರು ಸಹ ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫ‌ಲರಾಗಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 37 ಸ್ಥಾನ ಗೆದ್ದಿರುವ ಜೆಡಿಎಸ್‌ಗೆ ಅಧಿಕಾರ ಕೊಟ್ಟಿರುವುದು ಹೆಬ್ಬುಲಿ ಇರುವ ಹಳ್ಳಕ್ಕೆ ಕತ್ತೆ ಕಿರುಬ ಬಿದ್ದಂತೆ ಆಗಿದೆ ಕಾಂಗ್ರೆಸ್‌ನ ಸ್ಥಿತಿ ಎಂದು ಲೇವಡಿ ಮಾಡಿದರು.

ಸಮ್ಮಿಶ್ರ ಸರ್ಕಾರದಲ್ಲಿ ಪರಸ್ಪರ ಹೊಂದಾಣಿಕೆಯೇ ಇಲ್ಲ. ಸರ್ಕಾರ ಬೀಳಲ್ಲ ಎಂದು ಹೊರಗೆ ಹೇಳುತ್ತಾರಾದರೂ ಒಳಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಷ್ಟು ಗಲಾಟೆ, ಅಸಮಾಧಾನ, ಅತೃಪ್ತಿ ವ್ಯಕ್ತವಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಏಳು ತಿಂಗಳಾದರೂ ಸಹ ಯಾವುದೇ ಅಭಿವೃದ್ಧಿ ಯೋಜನೆಯನ್ನು ನೀಡಲು ವಿಫ‌ಲವಾಗಿರುವ ಇದನ್ನು ಸರ್ಕಾರವೆಂದು ಹೇಳಲು ಆಗುವುದಿಲ್ಲ ಎಂದು ಕಿಡಿಕಾರಿದರು. 

ಎಲ್ಲಾ ರಾಜಕೀಯ ಪಕ್ಷಗಳ ಹೇಳಿಕೆ, ಪ್ರತಿ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಯಾವ ಪಕ್ಷಗಳ ನಡವಳಿಕೆಯೂ ಸರಿಯಿಲ್ಲ. ನನ್ನ 46 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೀಳು ಮಟ್ಟದ ರಾಜಕೀಯ ಬೆಳವಣಿಗೆಯನ್ನು ಹಿಂದೆಂದೂ ಕಂಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯ ಕುಸಿತದ ಜತೆಗೆ ಮೌಲ್ಯಗಳು ಕಳೆದುಕೊಂಡಂತೆ ಇಂದಿನ ರಾಜಕೀಯ ಬೆಳವಣಿಗೆಗಳು ಜನರಿಗೂ ಬೇಸರ ತರಿಸಿದೆ.

ರಾಜಕಾರಣಿಗಳ ಇಂತಹ ವರ್ತನೆಯಿಂದಾಗಿ ನಾನೂ ಒಬ್ಬ ರಾಜಕಾರಣಿಯಾಗಿದ್ದೆ ಎಂದು ಹೇಳಿಕೊಳ್ಳಲು ನನಗೆ ಮುಜುಗರ ಆಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ರಾಜಕೀಯ ಇಷ್ಟೊಂದು ಕೀಳು ಮಟ್ಟಕ್ಕೆ ಹೋಗಿರುವುದು ವೈಯಕ್ತಿಕವಾಗಿ ನನಗೆ ಬೇಸರ ತಂದಿದೆ ಎಂದು ಹೇಳಿದರು.   
ಅಭ್ಯರ್ಥಿ ಆಯ್ಕೆ: ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಸೂಕ್ತ ಎಂಬುದನ್ನು ನನ್ನ ಅನುಭವದ ಮೇಲೆ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ. ಅದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.