ಕುಂಭಮೇಳ ರಾಜ್ಯದ ಘನತೆ ಹೆಚ್ಚುವಂತಿರಲಿ


Team Udayavani, Jan 24, 2019, 7:22 AM IST

m5-kumbha.jpg

ಮೈಸೂರು: ಪ್ರತಿ ಮೂರು ವರ್ಷಗಳಿಗೊಮ್ಮೆ ತಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ ನಡೆಯುವ ಕುಂಭಮೇಳ ಕಾರ್ಯಕ್ರಮದ ಮೂಲಕ ಕರ್ನಾಟಕದ ಘನತೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು. ಕುಂಭಮೇಳ ಸಂಬಂಧ ಬುಧವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಧಾರ್ಮಿಕ ಮುಖಂಡರು, ರಾಜಕೀಯ ಗಣ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಕಾವೇರಿ, ಕಪಿಲಾ, ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಅತ್ಯಂತದೊಡ್ಡ ಮಟ್ಟದಲ್ಲಿ ವ್ಯವಸ್ಥಿತವಾಗಿ ನಡೆಯಬೇಕು. ಈ ವರ್ಷ 150ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರಗಾಲವಿದೆ. ಮುಂದಿನ ವರ್ಷ ಉತ್ತಮ ಮಳೆಯಾಗಿ ಜನ ನಮ್ಮೆದಿಯಿಂದ ಬದುಕುವಂತಾಗಬೇಕು ಎಂದರು. ಕುಂಭಮೇಳ ಆಯೋಜನೆಗೆ ಹಣದ ಕೊರತೆ ಇಲ್ಲ. ಸೋಪಾನಕಟ್ಟಿ, ರಸ್ತೆ ದುರಸ್ತಿ, ಶೌಚಾಲಯ, ಸ್ನಾನದ ಘಟ್ಟ ವ್ಯವಸ್ಥೆ, ಕುಡಿಯುವ ನೀರು ಮುಂತಾದ ವ್ಯವಸ್ಥೆಗಳು ಅಚ್ಚುಕಟ್ಟಾಗಿ ಆಗಬೇಕು ಎಂದರು.

ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಬೆಂಗಳೂರಿನ ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿಗಳ ಆಶಯದಂತೆ ಅವರ ಸಲಹೆ ಪಡೆದು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಕುಂಭಮೇಳಕ್ಕೆ ಹಲವಾರು ರಾಜ್ಯಗಳಿಂದ ಆಗಮಿಸಲಿರುವ ಯತಿವರ್ಯರಿಗೆ ಎಲ್ಲ ರೀತಿಯ ಸೌಕರ್ಯ ಮಾಡಿಕೊಡಬೇಕು.

ಅವರು ಕರ್ನಾಟಕದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದರು. ಕುಂಭಮೇಳಕ್ಕೆ ಶಾಶ್ವತವಾದ ಮೂಲ ಸೌಕರ್ಯಗಳ ಒದಗಿಸಲು ಗಮನಹರಿಸಬೇಕು, ಪ್ರವಾಸೋದ್ಯಮ ಇಲಾಖೆಯಿಂದ ಈ ಕ್ಷೇತ್ರದಲ್ಲಿ ಶಾಶ್ವತವಾದ ಅಭಿವೃದ್ಧಿ ಕೆಲಸ ಮಾಡಲು ನೀಲನಕ್ಷೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಮುಖ್ಯಮಂತ್ರಿಗಳ ಸೂಚನೆಯಂತೆ ಎಲ್ಲ ವ್ಯವಸ್ಥೆಗಳು ಅಟ್ಟುಕಟ್ಟಾಗಿ ನಡೆಯಬೇಕು. ಕುಂಭಮೇಳಕ್ಕೆ ಕೇವಲ 23 ದಿನಗಳು ಮಾತ್ರ ಉಳಿದಿದೆ. ಸಮರೋಪಾದಿಯಲ್ಲಿ ಕೆಲಸಗಳು ಆಗಬೇಕು ಎಂದು ತಿಳಿಸಿದರು.

ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಬೆಂಗಳೂರಿನ ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿ, ಓಂಕಾರ ಪೀಠದ ಮಧುಸೂದನಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಸಚಿವರಾದ ಸಾ.ರಾ. ಮಹೇಶ್‌,

ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿ‌ನ್‌ ಕುಮಾರ್‌, ಎಚ್‌.ವಿಶ್ವನಾಥ್‌, ಸುರೇಶ್‌ಗೌಡ, ನಾರಾಯಣಗೌಡ, ಶ್ರೀನಿವಾಸ್‌, ಅನ್ನದಾನಿ, ರವೀಂದ್ರ ಶ್ರೀಕಂಠೇಗೌಡ, ಸಂಸದ ಎಲ್‌.ಆರ್‌.ಶಿವರಾಮೇಗೌಡ, ವಿಧಾನ ಪರಿಷತ್‌ ಸದಸ್ಯ ಅಪ್ಪಾಜಿಗೌಡ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಉತ್ತರಭಾರತದಲ್ಲಿ ಇತ್ತೀಚೆಗೆ ನಡೆದ ಕುಂಭಮೇಳಕ್ಕೆ ಸಾವಿರಾರು ಕೋಟಿ ರೂ. ಖರ್ಚಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲಿ ಯಾವ ರೀತಿ ಆಯೋಜನೆ ಆಗಿದೆ ಎಂದು ಇಬ್ಬರು ಅಧಿಕಾರಿಗಳು ಹೋಗಿ ಅಧ್ಯಯನ ಮಾಡುವಂತೆ ಸೂಚಿಸಿದ್ದೇನೆ.
-ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.