ಬಿಸಿಯೂಟಕ್ಕೆ ಕಳಪೆ ದಿನಸಿ, ನೀರು ಬಳಸಿದ್ದಕ್ಕೆ ತರಾಟೆ


Team Udayavani, Feb 1, 2019, 7:05 AM IST

m3-bisiyuta.jpg

ಕೆ.ಆರ್‌.ನಗರ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾ.ರಾ.ನಂದೀಶ ಗುರುವಾರ ಮದ್ಯಾಹ್ನ ದಿಢೀರ್‌ ಭೇಟಿ ನೀಡಿ ಬಿಸಿಯೂಟದ ಅವ್ಯವಸ್ಥೆ ಕಂಡು ಕೆಂಡಮಂಡಲವಾದರು.

ಹೆಣ್ಣು ಮಕ್ಕಳಿಗೆ ಸರ್ಕಾರ ನೀಡುತ್ತಿದ್ದ ಬಿಸಿಯೂಟದಲ್ಲಿ ನಿಯಮಗಳ ಪ್ರಕಾರ ಅಕ್ಕಿ, ತರಕಾರಿ, ಬೇಳೆ ಮೊದಲಾದವುಗಳನ್ನು ಉಪ ಯೋಗಿಸಿಲ್ಲದಿರುವುದು, ಆಹಾರದ ಗುಣಮಟ್ಟ ದಲ್ಲಿ ಕಳಪೆ, ಶುಚಿಯಾದ ನೀರನ್ನು ಬಳಸದೇ ಇರುವುದನ್ನು ಕಂಡು ಶಾಲೆಯ ಉಪ ಪ್ರಾಂಶುಪಾಲ ರಾಮ ಸ್ವಾಮಿಗೌಡ ಮತ್ತು ಸ್ಟೋರ್‌ ಇನ್‌ಚಾರ್ಜ್‌ ಶಿಕ್ಷಕ ಜ್ಞಾನದೇವ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ತಪಾಸಣೆ ವೇಳೆ ಬೇಜವಾಬ್ದಾರಿ ವರ್ತನೆ ತೋರಿದ ಶಿಕ್ಷಕ ಜ್ಷಾನದೇವ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ಶಿಕ್ಷಣಾಧಿಕಾರಿ ರಾಜು ಅವರಿಗೆ ಸೂಚಿಸಿದರು. ಕುಡಿಯುವ ನೀರು ಹಾಗೂ ಬಿಸಿಯೂಟಕ್ಕೆ ಬಳಸುವ ಸಂಪ್‌ ನೀರನ್ನು ಶುಚಿಯಾಗಿರುವಂತೆ ನೋಡಿಕೊಳ್ಳವಲ್ಲಿ ಬೇಜವಾಬ್ದಾರಿತನ ತೋರುತ್ತಿರು ವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಮಕ್ಕಳಿಗೂ ಇಂತಹ ನೀರನ್ನೇ ಬಳಸುತ್ತೀರಾ ಎಂದು ಪ್ರಶ್ನಿಸಿದರಲ್ಲದೇ, ಮಕ್ಕಳು ಕಾಯಿಲೆಗೆ ತುತ್ತಾದರೆ ಯಾರು ಹೊಣೆ ಎಂದು ಆತಂಕ ವ್ಯಕ್ತಪಡಿಸಿದರು. ಬಿಇಒ ರಾಜುರವರು ಸಮಸ್ಯೆಗಳ ಬಗ್ಗೆ ಜಿಲ್ಲಾ ಪಂಚಾಯಿತ್‌ ಅಧ್ಯಕ್ಷರಿಗೆ ಮಾಹಿತಿ ನೀಡಿ ಶಿಕ್ಷಕರಿಗೆ ಎಚ್ಚರಿಕೆ ನೀಡಿದರು. ಇದೇ ವೇಳೆ ಸಾ.ರಾ. ನಂದೀಶ್‌ ಅವರು ಅಡುಗೆ ಪರಿಚಾರಕಿಯರು ಹಾಗೂ ಸ್ಟೋರ್‌ ಇನ್ಚಾರ್ಜ್‌ರವರ ಮಾತುಗಳಿಂದ ಅಸಮಾಧಾನಗೊಂಡರಲ್ಲದೇ ಬಿಸಿಯೂಟ ಸವಿದು ಗುಣಮಟ್ಟದ ಬಗ್ಗೆ ಪರಿಶೀಲಿಸಿದರು.

ಬಿಸಿಯೂಟದ ಖರ್ಚಿನ ಉಳಿಕೆ ಹಣದಲ್ಲಿ ಮೊಸರು ಅಥವಾ ಮಜ್ಜಿಗೆ ನೀಡುವಂತೆ ಶಿಕ್ಷಕರಿಗೆ ತಾಕೀತು ಮಾಡಿದರು. ಬಿಸಿಯೂಟದ ಅಧಿಕಾರಿ ಪ್ರದೀಪ್‌ ಅವರಿಂದ ಬಿಸಿಯೂಟಕ್ಕೆ ನೀಡುವ ಅಕ್ಕಿ, ಬೇಳೆ ಸಾಮಗ್ರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಸಾ.ರಾ.ನಂದೀಶ್‌, ಬಿಸಿ ಯೂಟಕ್ಕೆ ಬಳಸುವ ನೀರು ಸ್ವಚ್ಛವಾಗಿಲ್ಲ,

ಶೌಚಾ ಲಯಗಳ ಸ್ವಚ್ಛತೆ ಸಾಲದು, ಮಕ್ಕಳಿಗೆ ಗುಣಮಟ್ಟದ ಆಹಾರ ಕೊಡಬೇಕು. ಸರ್ಕಾರ ನೀಡುವ ಬೇಳೆ, ಅಕ್ಕಿ ಗುಣಮಟ್ಟ ಸಾಲುತ್ತಿಲ್ಲ ಹಾಗೂ ಅಡುಗೆ ಯವರು ಸ್ವಚ್ಛತೆ ಕಾಪಾಡಬೇಕು ಎಂದರು. ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್‌, ಪುರಸಭಾಧ್ಯಕ್ಷೆ ಹರ್ಷಲತಾ ಶ್ರೀಕಾಂತ್‌, ಕ್ಷೇತ್ರ ಸಮನ್ವಯಾಧಿಕಾರಿ ರುದ್ರಪ್ಪ, ಶಿಕ್ಷಕ ಹನುಮಂತು ಇತರರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.