17 ಲಕ್ಷ ಮಕ್ಕಳಿಗೆ ಅಕ್ಷಯಪಾತ್ರೆ ಬಿಸಿಯೂಟ


Team Udayavani, Feb 12, 2019, 7:26 AM IST

m5-17laksha.jpg

ಮೈಸೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಅಕ್ಷಯಪಾತ್ರೆಯ ಕೊಡುಗೆ ಮಹತ್ವವಾದದ್ದು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹೇಳಿದರು.

ದಿ ಅಕ್ಷಯಪಾತ್ರ ಪ್ರತಿಷ್ಠಾನದ 300 ಕೋಟಿ ಊಟವನ್ನು ಮಥುರಾದ ವೃಂದಾವನದಲ್ಲಿ ಸೋಮವಾರ, ಮಕ್ಕಳಿಗೆ ಊಟ ಬಡಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿರುವ ಹಿನ್ನೆಲೆಯಲ್ಲಿ ಮೈಸೂರಿನ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಅಕ್ಷಯ ಪಾತ್ರ ಪ್ರತಿಷ್ಠಾನದ ಮೈಸೂರು ಶಾಖೆ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮಕ್ಕಳಿಗೆ ಊಟ ಬಡಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.

ಅಸಮಾನತೆ ವಿಮುಖ: ದೇಶದ 12 ರಾಜ್ಯಗಳಲ್ಲಿ ಅಕ್ಷಯ ಪಾತ್ರೆಯು ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 17 ಲಕ್ಷ ಮಕ್ಕಳಿಗೆ ಪೌಷ್ಟಿಕಯುಕ್ತ ಮಧ್ಯಾಹ್ನದ ಬಿಸಿಯೂಟವನ್ನು ವಿತರಿಸುತ್ತಿದೆ. ಎಲ್ಲಾ ಮಕ್ಕಳು ಆರ್ಥಿಕ ಹಾಗೂ ಜಾತಿಯ ಅಸಮಾನತೆಯಿಂದ ವಿಮುಖರಾಗಿ ಒಂದೇ ರೀತಿಯ ಊಟ ಮಾಡುತ್ತಿದ್ದಾರೆ. ಅಕ್ಷಯ ಪಾತ್ರೆಯ ಹಲವಾರು ಅಡುಗೆ ಮನೆಗಳು ಐಎಸ್‌ಒ ಪ್ರಮಾಣಪತ್ರ ಹೊಂದಿದ್ದು, ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದೆ, ಸ್ವಚ್ಛತೆಯನ್ನು ಕಾಪಾಡುತ್ತಿರುವ ಅಕ್ಷಯ ಪಾತ್ರೆಗೆ ಯಶಸ್ಸು ಹಾಗೂ ಮಕ್ಕಳಿಗೆ ಉತ್ತಮ ಜೀವನ ಸಿಗಲಿ ಎಂದು ಹಾರೈಸಿದರು.

ಹಾಜರಾತಿ ವೃದ್ಧಿ: ಶಾರದಾವಿಲಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಸ್‌.ಪಾರ್ಥಸಾರಥಿ ಮಾತನಾಡಿ, ನಮ್ಮ ಶಾಲೆಯಲ್ಲಿ ಹಿಂದುಳಿದ ಬಡವರ್ಗದ ಮಕ್ಕಳು ಹೊಟ್ಟೆಗಿಲ್ಲದೆ ಸೊರಗಿದ್ದರು. 2013ನೇ ಸಾಲಿನಲ್ಲಿ ತಮ್ಮ ಶಾಲೆಗೆ ಅಕ್ಷಯ ಪಾತ್ರೆ ಕಾಲಿಟ್ಟ ನಂತರ ಆ ಮಕ್ಕಳು ಆರು ತಿಂಗಳಲ್ಲಿ ದಷ್ಟ-ಪುಷ್ಟರಾದರು. ಶಾಲೆಯ ಹಾಜರಾತಿಯಲ್ಲಿ ಪ್ರಗತಿ ಕಂಡಿತು ಎಂದು ಅಕ್ಷಯ ಪಾತ್ರೆಯ ಕಾರ್ಯವನ್ನು ಶ್ಲಾಘಿಸಿದರು.

ಡ್ರೀಮ್‌ ಪ್ರಾಜೆಕ್ಟ್: ಇಸ್ಕಾನ್‌ ಮೈಸೂರಿನ ಉಪಾಧ್ಯಕ್ಷರಾದ ರಸಿಕ ಶೇಖರ ದಾಸ ಮಾತನಾಡಿ, ಅಕ್ಷಯಪಾತ್ರೆಯಲ್ಲಿ ಪ್ರತಿದಿನ ಲಕ್ಷಾಂತರ ಮಕ್ಕಳಿಗೆ ಉಣಬಡಿಸುವ ಬಿಸಿಯೂಟ ತಯಾರಿಕೆ ಹಾಗೂ ವಿತರಿಸುವ ರೀತಿಯನ್ನು ವಿಡಿಯೋ ಮೂಲಕ ಪ್ರಸ್ತುತಪಡಿಸಿದರು. ಅಕ್ಷಯಪಾತ್ರೆಯು ಮಧ್ಯಾಹ್ನದ ಬಿಸಿಯೂಟಕ್ಕಷ್ಟೇ ಸೀಮಿತವಾಗದೆ ಶಾಲಾ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಿ ಎಷ್ಟೋ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಡ್ರೀಮ್‌ ಪ್ರಾಜೆಕ್ಟ್ ಮೂಲಕ ಹೊರತೆಗೆದು ಅವರ ಕನಸನ್ನು ನನಸು ಮಾಡುವ ಉದ್ದೇಶ ಹೊಂದಿದೆ ಎಂದು ಹೇಳಿದರು.

ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಹಾಜರಾತಿಯಲ್ಲಿ ಮುಂಚೂಣಿಯಲ್ಲಿರುವ ವಿದ್ಯಾರ್ಥಿಗಳಿಗೆ ದಿ ಅಕ್ಷಯ ಪ್ರಾತ್ರ ಪ್ರತಿಷ್ಠಾನದವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು. ಬಳಿಕ ಮಥುರೆಯ ವೃಂದಾವನದಲ್ಲಿ ನಡೆದ ಕಾರ್ಯಕ್ರಮವನ್ನು ಎಲ್‌ಇಡಿ ಪರದೆಯ ಮೇಲೆ ಅಂತರ್ಜಾಲದಿಂದ ನೇರಪ್ರಸಾರ ಮಾಡಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.