ಕುಂಭಮೇಳಕ್ಕೆ 4 ತಾತ್ಕಾಲಿಕ ಬಸ್‌ ನಿಲ್ದಾಣ


Team Udayavani, Feb 15, 2019, 7:33 AM IST

m1-kumbhame.jpg

ಮೈಸೂರು: ತಿರುಮಕೂಡಲು ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಫೆ.17ರಿಂದ ಮೂರು ದಿನ ನಡೆಯುವ ಕುಂಭಮೇಳದಲ್ಲಿ ಲಕ್ಷಾಂತರ ಜನರು ಪುಣ್ಯಸ್ನಾನ ಮಾಡಲು ಆಗಮಿಸುತ್ತಿದ್ದು, ಸುಗಮ ಸಂಚಾರಕ್ಕಾಗಿ ನಾಲ್ಕು ತಾತ್ಕಾಲಿಕ ನಿಲುಗಡೆ ತಾಣಗಳನ್ನು ಸ್ಥಾಪಿಸಲಾಗಿದೆ. ನಿಲ್ದಾಣಗಳಿಂದ ಭಕ್ತರು ಒಂದು ಕಡೆಯಿಂದ ಮತ್ತೂಂದು ಕಡೆಗೆ ಸಂಚರಿಸಲು ಉಚಿತ ಮಿನಿಬಸ್‌ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ಕಡೆಯಿಂದ ಬರುವ ಭಕ್ತರು ಗಗೇಶ್ವರಿಯಿಂದ ಮುಂದೆ ಹೊಸದಾಗಿ ನಿರ್ಮಿಸಿರುವ ಸೇತುವೆ ಪಕ್ಕದ ತಾತ್ಕಾಲಿಕ ನಿಲ್ದಾಣದಲ್ಲಿ ನಿಲುಗಡೆ ಮಾಡಿ ನಂತರ ವಾಪಸ್‌ ಅಲ್ಲಿಂದ ಮೈಸೂರು ಕಡೆಗೆ ಸಂಚರಿಸುವುದು. ಕೊಳ್ಳೇಗಾಲ, ಚಾಮರಾಜನಗರ, ತಲಕಾಡು ಹಾಗೂ ತಮಿಳುನಾಡು ಕಡೆಯಿಂದ ಬರುವ ಭಕ್ತರು ತಮ್ಮ ವಾಹನಗಳನ್ನು ಅಗ್ನಿಶಾಮಕ ಠಾಣೆ ಎದುರು ನಿರ್ಮಿಸಿರುವ ತಾತ್ಕಾಲಿಕ ನಿಲ್ದಾಣದಲ್ಲಿ ನಿಲುಗಡೆ ಮಾಡಿ, ನಂತರ ಅದೇ ಮಾರ್ಗದಲ್ಲಿ ವಾಪಸ್ಸಾಗುವುದು.

ಹಳೇ ಸೇತುವೆ ಬಳಿ ನಿಲ್ದಾಣ: ಬೆಂಗಳೂರು, ಮಂಡ್ಯ, ಮಳವಳ್ಳಿ, ಬನ್ನೂರುನಿಂದ ಬರುವ ಭಕ್ತರು ತಮ್ಮ ವಾಹನಗಳನ್ನು ಕಾವೇರಿ ನದಿ ಹಳೇ ಸೇತುವೆ ಬಳಿ ತಾತ್ಕಾಲಿಕ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಿ ನಂತರ ಬನ್ನೂರು ಕಡೆಗೆ ವಾಪಸ್ಸಾಗುವುದು.

ತಾತ್ಕಾಲಿಕ ಸೇತುವೆ: ನಂಜನಗೂಡು, ತಿ.ನರಸೀಪುರ ಪಟ್ಟಣದ ಕಡೆಯಿಂದ ಬರುವ ಭಕ್ತರು ಉತ್ತಮ ವಾಹನಗಳನ್ನು ತಿರುಮಕೂಡಲು ಸೇತುವೆ ಬಳಿ ನಿಲುಗಡೆ ಮಾಡಿ, ನಂತರ ಅದೇ ಮಾರ್ಗವಾಗಿ ಸಂಚರಿಸುವುದು. ಭಕ್ತರ ಅನುಕೂಲಕ್ಕಾಗಿ ಗುಂಜಾನರಸಿಂಹಸ್ವಾಮಿ ದೇಗುಲದಿಂದ ಸಂಗಮ ಸ್ಥಳಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದ್ದು, ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಈ ಮಾರ್ಗದಲ್ಲಿ ಸಂಚರಿಸುವಂತೆ ಕೋರಲಾಗಿದೆ. 

ಮೈಸೂರಿನಿಂದ ತಿ.ನರಸೀಪುರ, ಕೊಳ್ಳೇಗಾಲ, ಚಾಮರಾಜ ನಗರಕ್ಕೆ ಬರುವ ವಾಹನಗಳು ಮೈಸೂರು-ಮೇಗಳಾಪುರ-ಮೇಗಳಾಪುರದಿಂದ ಬಲಕ್ಕೆ ತಿರುಗಿ ಹೊಸಹಳ್ಳಿ, ಕುಪ್ಪೇಗಾಲ ಸೇತುವೆ ಮಾರ್ಗವಾಗಿ ತಿರುಮಕೂಡಲು ವೃತ್ತದಲ್ಲಿ ಬಲಕ್ಕೆ ತಿರುಗಿ ಖಾಸಗಿ ಬಸ್‌ ನಿಲ್ದಾಣ ನಂತರ ಲಿಂಕ್‌ ರಸ್ತೆ ಮಾರ್ಗ ಕೊಳ್ಳೇಗಾಲ ಮುಖ್ಯರಸ್ತೆ ಮಾರ್ಗವಾಗಿ ತೆರಳುವುದು.

ಕೊಳ್ಳೇಗಾಲ, ಚಾಮರಾಜ ನಗರ, ತಲಕಾಡು ಹಾಗೂ ತಮಿಳುನಾಡು ಕಡೆಯಿಂದ ಮೈಸೂರಿಗೆ ಹೋಗುವ ವಾಹನಗಳು ಚಿಕ್ಕಮ್ಮ ತಾಯಿ ಛತ್ರದ ಬಳಿ ಎಡಕ್ಕೆ ತಿರುಗಿ ತಾಲೂಕು ಕಚೇರಿ ರಸ್ತೆ ವಿದ್ಯೋದಯ ವೃತ್ತದ ಮುಖಾಂತರ ಸುತ್ತೂರು, ವರುಣಾ ಮಾರ್ಗವಾಗಿ ಮೈಸೂರಿಗೆ ತೆರಳುವುದು.

ಬೆಂಗಳೂರು, ಮಂಡ್ಯ, ಮಳವಳ್ಳಿ, ಬನ್ನೂರಿನಿಂದ ಚಾಮರಾಜ ನಗರ, ಕೊಳ್ಳೇಗಾಲಕ್ಕೆ ಹೋಗುವ ವಾಹನಗಳು ಸೋಸಲೆ ಬಳಿ ಎಡಕ್ಕೆ ತಿರುಗಿ ದೊಡ್ಡೇಬಾಗಿಲು, ಪೂರಿಗಾಲಿ, ತಲಕಾಡು, ಮಾದಾಪುರ ಮಾರ್ಗವಾಗಿ ಕೊಳ್ಳೇಗಾಲಕ್ಕೆ ಸಂಚರಿಸುವುದು.

ಮಕ್ಕಳ ಜೇಬಲ್ಲಿ ಮಾಹಿತಿ ಚೀಟಿ ಇಡಿ: ಕುಂಭಮೇಳಕ್ಕೆ ಆಗಮಿಸುವ ಭಕ್ತರು ಜೊತೆಯಲ್ಲಿ ಚಿಕ್ಕಮಕ್ಕಳನ್ನು ಕರೆತಂದಲ್ಲಿ ಅವರ ಜೇಬಿನಲ್ಲಿ ಹೆಸರು, ವಿಳಾಸ ಮತ್ತು ಪೋಷಕರ ದೂರವಾಣಿ ಸಂಖ್ಯೆಗಳ ಮಾಹಿತಿಯನ್ನು ಇರಿಸುವುದು. ಪುಣ್ಯಸ್ನಾನ ಮಾಡುವ ಸಂದರ್ಭದಲ್ಲಿ ಪೋಷಕರು ಚಿಕ್ಕ ಮಕ್ಕಳು, ವೃದ್ಧರ ಬಗ್ಗೆ ಜಾಗೃತಿವಹಿಸಬೇಕು.

ಸ್ನಾನಘಟ್ಟಗಳ ಬಳಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ದಾಟದಂತೆ ಸೂಚಿಸಿದೆ. ಮಹಿಳೆಯರು ತಮ್ಮ ಚಿನ್ನಾಭರಣಗಳು ಹಾಗೂ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾವಹಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ಸಿಂಗ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.