ಭಕ್ತರಿಗೆ ಹತ್ತು ನಿಮಿಷ ಧ್ಯಾನಾಭ್ಯಾಸ 


Team Udayavani, Feb 19, 2019, 7:40 AM IST

m4-bhaktarige.jpg

ತಿ.ನರಸೀಪುರ: ಕುಂಭಮೇಳದಲ್ಲಿ ಭಾಗವಹಿಸಿದ ಭಕ್ತರಿಗೆ ಧ್ಯಾನದ ಸವಿರುಚಿಯನ್ನು ಉಚಿತವಾಗಿ ಉಣಬಡಿಸಲಾಗುತ್ತಿದೆ. ಮನಃಶಾಂತಿ, ಮನಸಿನ ನಿಯಂತ್ರಣ, ಏಕಾಗ್ರತೆ, ತಾಳ್ಮೆ ಹಾಗೂ ಮನಸೊಲ್ಲಾಸಕ್ಕೆ ಸ್ಫೂರ್ತಿನೀಡಬಲ್ಲ ಧ್ಯಾನವನ್ನು ತಂಡತಂಡವಾಗಿ ಹೇಳಿಕೊಡುವ ಕಾರ್ಯ ತ್ರಿವೇಣಿ ಸಂಗಮದ ಪುಣ್ಯ ಭೂಮಿಯಲ್ಲಿ ನಡೆಯುತ್ತಿದೆ. ಹಾರ್ಟ್‌ಫ‌ುಲ್‌ನೆಲ್‌ ಮೆಡಿಟೇಷನ್‌ ಸಂಘಟನೆಯವರು ಭಕ್ತರಿಗೆ ಉಚಿತವಾಗಿ ಹತ್ತು ನಿಮಿಷಗಳ ಧ್ಯಾನಾಭ್ಯಾಸ ಮಾಡಿಸುತ್ತಿದ್ದಾರೆ. 

ಐದರಿಂದ ಹತ್ತು ಭಕ್ತರ ಗುಂಪನ್ನು ಕುರ್ಚಿಯ ಮೇಲೆ ಕುರಿಸಿಕೊಡು, ಅವರಿಗೆ ಓರ್ವ ಮಾರ್ಗದರ್ಶಕನ ಮೂಲಕ ಧ್ಯಾನಾಭ್ಯಾಸ ಮಾಡಿಸಲಾಗುತ್ತಿದೆ. ಧ್ಯಾನ ಎಂದರೆನು? ಏಕೆ ನಿತ್ಯ ಮಾಡಬೇಕು? ಅದರಿಂದಾಗುವ ಉಪಯೋಗ ಏನು ಮತ್ತು ಅದನ್ನು ನಿರಂತರವಾಗಿ ಮಾಡುವುದು ಹೇಗೆ ಎಂಬಿತ್ಯಾದಿ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತಾ, ಧ್ಯಾನಾಭ್ಯಾಸ ಮಾಡಿಸಲಾಗುತ್ತದೆ.

ಕಾಲು ಬೆರಳು, ಪಾದ, ಕೈಬೆರಳು, ಅಂಗೈ, ಹೊಟ್ಟೆ, ಕಣ್ಣು, ತಲೆ ಸಹಿತವಾಗಿ ಸಂಪೂರ್ಣ ಶರೀರವನ್ನು ಬಾಹ್ಯ ಮತ್ತು ಅಂತರಿಕವಾಗಿ ನಿಯಂತ್ರಣ ಮಾಡುವುದು ಮತ್ತು ಮನಸ್ಸಿನ ಮೇಲೆ ಹಿಡಿತ ಸಾಧಿಸುವುದು ಹೇಗೆ ಎಂಬುದನ್ನು ಸುಮಾರು ಹತ್ತು ನಿಮಿಷಗಳ ಧ್ಯಾನಾಭ್ಯಾಸದಲ್ಲಿ ಹೇಳಿ ಕೊಡಲಾಗುತ್ತದೆ. ಇದನ್ನು ನಿತ್ಯ ಮನೆಯಲ್ಲಿ ಅಥವಾ ಬಿಡುವಿನ ಸಮಯದಲ್ಲಿ ಅಭ್ಯಾಸ ಮಾಡಬಹುದು ಎಂದು ಆಯೋಜಕರು ತಿಳಿಸಿದರು.

ಮೂರು ದಿನವೂ ಧ್ಯಾನಾಭ್ಯಾಸ ಮಾಡಿಸುತ್ತೇವೆ. ಕುಂಭಮೇಳಕ್ಕೆ ಬಂದಿರುವ ಸಾವಿರಾರು ಭಕ್ತರು ಇದರ ಪ್ರಯೋಜನ ಪಡೆದಿದ್ದಾರೆ. ನಿರ್ದಿಷ್ಟ ಸಮಯದಲ್ಲೇ ಧ್ಯಾನ ಮಾಡಬೇಕೆಂದೇನೂ ನಿಯಮ ಇಲ್ಲ. ಬಿಡುವಿನ ಸಮಯದಲ್ಲಿ ದಿನಕ್ಕೆ ಎಷ್ಟು ಬಾರಿ ಬೇಕಾದರೂ ಧ್ಯಾನ ಮಾಡಬಹುದು. ಉಚಿತ ಧ್ಯಾನ ಶಿಬಿರದಲ್ಲಿ ಧ್ಯಾನವನ್ನು ಮಾಡುವುದು ಹೇಗೆ ಎಂಬುದನ್ನಷ್ಟೇ ಹೇಳಿ ಕೊಡುತ್ತೇವೆ. ಅದನ್ನು ಮುಂದುವರಿಸಿಕೊಂಡು ಹೋಗುವುದು ವ್ಯಕ್ತಿಯ ಜೀವ ಶೈಲಿಯ ಮೇಲೆ ಅವಲಂಭಿಸಿರುತ್ತದೆ ಎಂದು ವಿವರ ನೀಡಿದರು.

ಕಾಲೇಜು ವಿದ್ಯಾರ್ಥಿಗಳು,  ಶಿಕ್ಷಕ ಪ್ರಾಧ್ಯಾಪಕರು, ಮಕ್ಕಳು, ಗೃಹಿಣಿಯರು, ಪೊಲೀಸ್‌ ಹಾಗೂ ಸಂಚಾರ ಪೊಲೀಸರು, ರೈತರು, ಸ್ವಾಮೀಜಿಗಳು ಉಚಿತ ಧ್ಯಾನದ ಪ್ರಯೋಜನ ಪಡೆದರು. ಹತ್ತು ನಿಮಿಷ ಧ್ಯಾನಾಭ್ಯಾಸ ಮಾಡಿದ ನಂತರ ಎರಡನೇ ಭಾರಿ ಮಾಡಬೇಕು ಎಂದೆನಿಸಿದರು ಪುನಃ ಧ್ಯಾನಾಭ್ಯಾಸಕ್ಕೆ ಅವಕಾಶ ಇದೆ. ಬಾಹ್ಯ ಪ್ರಪಂಚದಲ್ಲಿ ಎಷ್ಟೇ ಗದ್ದಲವಿದ್ದರೂ ಮನಸು ನಿಯಂತ್ರಿಸಿಕೊಳ್ಳಲು ಸಾಧ್ಯವಾದರೆ, ಅದೇ ಧ್ಯಾನದ ಶಕ್ತಿ. ನಮ್ಮೆಲ್ಲ ಕಷ್ಟಕ್ಕೂ ತಾಳ್ಮೆಯಿಂದ ಪರಿಹಾರ ಕಂಡುಕೊಳ್ಳಬಲ್ಲ ಮನೋಬಲ ಹೆಚ್ಚುತ್ತದೆ ಎಂದು ಆಯೋಜಕರು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.