14 ಗ್ರಾಮಗಳಲ್ಲಿ ನೀರು ಪೂರೈಕೆ ಪುನಶ್ಚೇತನ ಕಾಮಗಾರಿ ಚಾಲನೆ


Team Udayavani, Feb 23, 2019, 7:29 AM IST

m5-14grama.jpg

ಹುಣಸೂರು: ತಾಲೂಕಿನ ಬನ್ನಿಕುಪ್ಪೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ 14 ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆೆಯ ಪುನಶ್ಚೇತನ ಕಾಮಗಾರಿ ಸೇರಿದಂತೆ 42 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ, ಜಿಪಂ ಸದಸ್ಯೆ ಡಾ.ಪುಷ್ಪಾ ಅಮರ್‌ನಾಥ್‌ ಚಾಲನೆ ನೀಡಿದರು.

ತಾಲೂಕಿನ ಬೀಜಗನಹಳ್ಳಿ ಬಳಿಯ ಮಂಟಿಕೊಪ್ಪಲಿನಲ್ಲಿ 5.2 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಜಿಪಂ ಕ್ಷೇತ್ರಕ್ಕೆ ಬಂದಿರುವ 42 ಲಕ್ಷ ರೂ. ಅನುದಾನದಲ್ಲಿ ಅಗತ್ಯವಿರುವೆಡೆ ಹೊಸ ಕೊಳವೆಬಾವಿ ಕೊರೆಸುವುದು, ಅಂತರ್ಜಲ ವೃದ್ಧಿಸಲು ರೀಡ್ರಿಗ್‌, ಹೆಚ್ಚುವರಿ ಪೈಪ್‌ಲೈನ್‌ ಅಳವಡಿಕೆ, ಬದಲಾಯಿಸುವಿಕೆ, ಮೋಟಾರ್‌-ಸ್ಟಾರ್ಟರ್‌ ದುರಸ್ತಿ ಸೇರಿದಂತೆ ಹಲವೆಡೆ ಚರಂಡಿ-ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಈಗಾಗಲೇ ಹಲವೆಡೆ ನೀರಿನ ಸಮಸ್ಯೆ ಎದುರಾಗಿದ್ದು,  ತಕ್ಷಣವೇ ಕಾಮಗಾರಿಗಳನ್ನು ಆರಂಭಿಸಿ, ವಾರದೊಳಗೆ ಪೂರ್ಣಗೊಳಿಸಿ ತಮಗೆ ಮಾಹಿತಿ ನೀಡಬೇಕೆಂದು ಎಂಜಿನಿಯರ್‌ ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದ ಅವರು, ಗ್ರಾಮಸ್ಥರು ಸಹ ಕಾಮಗಾರಿಗಳು ಉತ್ತಮವಾಗಿ ನಡೆಯುವಂತೆ ಮೇಲುಸ್ತುವಾರಿ ವಹಿಸಬೇಕು. ನೀರನ್ನು ಮಿತವಾಗಿ ಬಳಸಬೇಕು ಎಂದು ಮನವಿ ಮಾಡಿದರು.

ಮಂಟಿಕೊಪ್ಪಲು ಬಳಿಯ ಕೆರೆ ಏರಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು,  ದುರಸ್ತಿ ಮಾಡಿಸಿಕೊಡುವಂತೆ ಗ್ರಾಮಸ್ಥರ ಕೋರಿಕೆಗೆ ಸ್ಪಂದಿಸಿದ ಅವರು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಕಾಮಗಾರಿಯನ್ನು ತಾವೇ ಮುಂದೆ ನಿಂತು ಪೂರ್ಣಗೊಳಿಸುವುದಾಗಿ ತಾಪಂ ಸದಸ್ಯ ರವಿ ಪ್ರಸನ್ನ ವಾಗ್ಧಾನ ಮಾಡಿದರು.

ಬರಪಟ್ಟಿಗೆ ಹುಣಸೂರು ಸೇರಿಸಿ: ತಾಲೂಕಿನ ಬಹುತೇಕ ಕಡೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕೃಷಿ ಕಾರ್ಮಿಕರು ಕೆಲಸಕ್ಕೆ ಪರದಾಡುವಂತಾಗಿದೆ. ಹೀಗಾಗಿ ಹುಣಸೂರು ತಾಲೂಕನ್ನು ತಕ್ಷಣವೇ ಬರ ಪೀಡಿತ ಪ್ರದೇಶವೆಂದು ಘೋಷಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮತ್ತು ಸರಕಾರದಿಂದ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿಸಬೇಕೆಂದು ಶಾಸಕ ವಿಶ್ವನಾಥ್‌ ಅವರಲ್ಲಿ ಪುಷ್ಪಾ ಅಮರನಾಥ್‌ ಮನವಿ ಮಾಡಿದರಲ್ಲದೆ, ತಾವು ಕೂಡ ಜಿಪಂ ಸಭೆಯಲ್ಲಿ ಒತ್ತಾಯಿಸುವುದಾಗಿ ತಿಳಿಸಿದರು. 

ಎಲ್ಲೆಲ್ಲಿ ಚಾಲನೆ?: ಬನ್ನಿಕುಪ್ಪೆ, ದೊಡ್ಡೇಗೌಡನಕೊಪ್ಪಲು, ಮೂಡಲಕೊಪ್ಪಲು, ಕುಪ್ಪೆ-ಕೊಳಗಟ್ಟ, ಶ್ರವಣನಹಳ್ಳಿ, ಕಾಳೇಗೌಡನಕೊಪ್ಪಲು-ಜಡಗನಕೊಪ್ಪಲು, ಕೆಬ್ಬೇಕೊಪ್ಪಲು-ಮರದೂರು, ರಾಮಪಟ್ಟಣ, ಸಿದ್ದನಕೊಪ್ಪಲು, ಚಿಕ್ಕಹುಣಸೂರು, ಹಂಚ್ಯ-ಆಜಾದ್‌ನಗರ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ಮಂಟಿಕೊಪ್ಪಲು ಮಹದೇವ್‌, ಗ್ರಾಪಂ ಸದಸ್ಯರಾದ ಶಾಂತಮ್ಮ, ಸ್ವಾಮಿ, ರವಿರೆಡ್ಡಿ, ಮಹೇಶ್‌, ರವಿ, ಜಿಲ್ಲಾ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಕುಮಾರ್‌ ಮತ್ತಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.