ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯ ಮೊದಲ ಸಭೆಯಲ್ಲೇ ಮುಖಭಂಗ


Team Udayavani, Mar 9, 2019, 7:31 AM IST

m2-jds.jpg

ಮೈಸೂರು: ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಸಲುವಾಗಿ ಜೆಡಿಎಸ್‌ ಜೊತೆಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದರೂ ತಳಮಟ್ಟದಲ್ಲಿ ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರು ಒಂದಾಗಿಲ್ಲ ಎಂಬುದು ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಅಕ್ಷರಶಃ ಜಗಜ್ಜಾಹೀರಾಯಿತು.

ಫೆ.23ರಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಜೊತೆಗಿದ್ದ ಬಿಜೆಪಿಯನ್ನು ಹೊರಗಿಟ್ಟು ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದ ಜೆಡಿಎಸ್‌, ಮೊದಲ ಸಭೆಯಲ್ಲೇ ಅದರಲ್ಲೂ ಆಯವ್ಯಯ ಮಂಡನೆಗಾಗಿ ಕರೆಯಲಾಗಿದ್ದ ವಿಶೇಷ ಸಭೆಯಲ್ಲೇ ಕೋರಂ ಇಲ್ಲದೆ ಮುಖಭಂಗ ಅನುಭವಿಸಬೇಕಾಯಿತು.

ಬೆಳಗ್ಗೆ 11ಗಂಟೆಗೆ ಬಜೆಟ್‌ ಸಭೆ ಕರೆಯಲಾಗಿತ್ತಾದರೂ 11.20 ಆದರೂ ಸಭೆ ಆರಂಭವಾಗುವ ಲಕ್ಷಣಗಳಿರಲಿಲ್ಲ. ಆ ಮಧ್ಯೆ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ ಅವರು ಬಜೆಟ್‌ ಪ್ರತಿ ಇದ್ದ ಸೂಟ್‌ಕೇಸ್‌ ಹಿಡಿದು ಸಭಾಂಗಣಕ್ಕೆ ಬಂದರಾದರೂ ಸಭೆ ನಡೆಸಲು ಕೋರಂ ಇಲ್ಲದ್ದರಿಂದ ಹತ್ತು ನಿಮಿಷ ಕಾದರೂ ನಿಗದಿತ ಸಂಖ್ಯೆ ಸೇರಲಿಲ್ಲ.

ಇದರಿಂದಾಗಿ ಸಭೆಯನ್ನೇ ಅರ್ಧಗಂಟೆ ಮುಂದೂಡಿ ಸದಸ್ಯರ ಮೊಬೈಲ್‌ಗ‌ಳಿಗೆ ಕರೆ ಮಾಡಿ ಕರೆಸುವ ಪ್ರಯತ್ನ ಮಾಡಲಾಯಿತು. ಅಷ್ಟೆಲ್ಲ ಹರ ಸಾಹಸಗಳ ನಂತರವೂ ಬಂದವರು 32 ಸದಸ್ಯರು ಮಾತ್ರ. ಕೋರಂಗೆ 38 ಸದಸ್ಯರ ಅಗತ್ಯವಿತ್ತು. ಹೀಗಾಗಿ ಅಧ್ಯಕ್ಷರು ಮಾ.11ಕ್ಕೆ ಸಭೆಯನ್ನು ಮುಂದೂಡಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ವೆಂಕಟಸ್ವಾಮಿ, ಯಾವುದೇ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಸಭೆ ಮುಂದೂಡಿದರೆ, ನೀತಿ ಸಂಹಿತೆ ಜಾರಿಯಾದರೆ ಬಜೆಟ್‌ ಮಂಡಿಸಲಾಗಲ್ಲ. ನಿಮ್ಮ ಸದಸ್ಯರನ್ನು ಹೇಗಾದರೂ ಕರೆಸಿ ಸಭೆ ಮಾಡಿ, ಬಜೆಟ್‌ ಮಂಡಿಸಿ ಎಂದು ಸಲಹೆ ನೀಡಿದರು.

ಆದರೆ, ಇದಕ್ಕೆ ಒಪ್ಪದ ಜೆಡಿಎಸ್‌ನ ಬೀರಿಹುಂಡಿ ಬಸವಣ್ಣ, ನಮ್ಮ ಪಕ್ಷದ ಅನೇಕ ಸದಸ್ಯರು ಇಂದು ಬೆಂಗಳೂರಿಗೆ ಹೋಗಿದ್ದಾರೆ. ಹೀಗಾಗಿ ಸಭೆಗೆ ಬರಲಾಗಲ್ಲ. ಅಧ್ಯಕ್ಷರು ಮಾ.11ಕ್ಕೆ ಸಭೆ ಮುಂದೂಡಿ ಆದೇಶ ಮಾಡಿರುವುದರಿಂದ ಅದನ್ನು ಪ್ರಶ್ನಿಸುವಂತಿಲ್ಲ ಎಂದರು.

ಇದಕ್ಕೊಪ್ಪದ ವೆಂಕಟಸ್ವಾಮಿ, ಹೇಗಾದರೂ ಸದಸ್ಯರನ್ನು ಒಟ್ಟುಗೂಡಿಸಿ ಬಜೆಟ್‌ ಮಂಡಿಸುವಂತೆ ಅಧ್ಯಕ್ಷರಿಗೆ ಸಲಹೆ ನೀಡಿದರು. ಇದರಿಂದಾಗಿ ಮಧ್ಯಾಹ್ನ 2ಗಂಟೆಗೆ ಸಭೆ ಮುಂದೂಡಿದರು. ಮತ್ತೆ ಮಧ್ಯಾಹ್ನ 2.25ಕ್ಕೆ ಸಭೆ ಸೇರಿದಾಗಲೂ 30ಕ್ಕಿಂತ ಹೆಚ್ಚಿನ ಸದಸ್ಯರೇನು ಸಭೆಯಲ್ಲಿ ಇರಲಿಲ್ಲ. ಆದರೆ, ಬೆಳಗ್ಗೆ ಬಂದಿದ್ದ ಅನೇಕ ಸದಸ್ಯರು ಹಾಜರಿ ಹಾಕಿ ಹೋಗಿದ್ದರಿಂದ ಅವರನ್ನೂ ಹಾಜರಿ ಎಂದು ಪರಿಗಣಿಸಿ ಕೋರಂ ಸರಿಪಡಿಸಿ ಬಜೆಟ್‌ ಮಂಡಿಸಲಾಯಿತು.

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಜಿಪಂ ಅಧಿಕಾರ ಹಿಡಿದ 12 ದಿನಗಳ ನಂತರ ನಡೆದ ಮೊದಲ ಸಭೆ, ಅದರಲ್ಲೂ ಬಜೆಟ್‌ ಮಂಡನೆ ಸಭೆಗೇ ಕೋರಂ ಕೊರತೆ ಎದುರಾಗಿದ್ದು ಮುಖಭಂಗಕ್ಕೆ ಕಾರಣವಾಯಿತು. ಸಭೆಯಲ್ಲಿ ಹಾಜರಿದ್ದ ಕಾಂಗ್ರೆಸ್‌- ಜೆಡಿಎಸ್‌ ಸದಸ್ಯರಲ್ಲಿ ಮೈತ್ರಿಯ ಖುಷಿ ಕಾಣದೆ ಬಿಗುವಿನಲ್ಲೇ ಕುಳಿತಿದ್ದರು.

ಮಹಿಳಾ ದಿನ ಆಚರಣೆ ಸಂಭ್ರಮ: ಬಜೆಟ್‌ ಮಂಡನೆಗಾಗಿ ಕರೆಯಲಾಗಿದ್ದ ಸಭೆಗೆ ಕೋರಂ ಎದುರಾದ ಹಿನ್ನೆಲೆಯಲ್ಲಿ ಜಿಪಂನ ಮಹಿಳಾ ಸದಸ್ಯರೆಲ್ಲಾ ಸೇರಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಬಂಧ ಕೇಕ್‌ ಕತ್ತರಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.