ಮೈತ್ರಿ ಧರ್ಮ ಪಾಲಿಸಿ, ನಿಖಿಲ್ ಗೆಲ್ಲಿಸಿ: ಸಾ.ರಾ.ಮಹೇಶ್
Team Udayavani, Mar 17, 2019, 7:44 AM IST
ಮೈಸೂರು: ಮೈತ್ರಿ ಧರ್ಮ ಪಾಲಿಸಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಟ್ಟರೆ, ನಾವು ಮೈಸೂರು -ಕೊಡಗು ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕೈ ಹಿಡಿಯಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಮ್ಮನ್ನು ನೀವು ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ. ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ -ನಮ್ಮ ನಡುವೆ ಅಂತರ ಇದ್ದೇ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ.
ಮಂಡ್ಯದಲ್ಲಿ ನಮ್ಮನ್ನು ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನು ಐದು ಬಾರಿ ತಬ್ಬಿಕೊಳ್ಳುತ್ತೇವೆ. ನಿಮಗೆ ಇದು ನೆನಪಿನಲ್ಲಿ ಇರಲಿ. ಈ ಲೋಕಸಭೆ ಚುನಾವಣೆಯಿಂದಲೇ ಇದು ಪ್ರಾರಂಭವಾಗಬೇಕು. ನಾವು ಜಿಲ್ಲೆಯಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೇ ಸೇವೆ ಮಾಡಿದ್ದೇವೆ. ಆದ್ದರಿಂದ ಮೈತ್ರಿ ಧರ್ಮ ಪಾಲಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಡಿ ಎಂದರು.
ಪಕ್ಷದ ಕಾರ್ಯಕರ್ತರ ಒಪ್ಪಿಗೆ ಪಡೆದೇ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ನಿರ್ಧಾರ ಮಾಡಲಾಗಿದೆ. ಆದರೆ, ಅಂಬರೀಶ್ ಅವರೇ ರಾಜಕಾರಣ ಬೇಡ ಎಂದ ಮೇಲೆ ನಿಖಿಲ್ ಅವರ ವಿರುದ್ಧ ನೀವೇಕೆ ಸ್ಪರ್ಧೆ ಮಾಡುತ್ತಿದ್ದೀರಾ ಎಂಬುದನ್ನು ಯೋಚಿಸಿ ಎಂದು ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ