ಎನ್ಸೆಸ್ಸೆಸ್‌ ಶಿಬಿರದಲ್ಲಿ ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕಾಗಿ ಜಾಗೃತಿ


Team Udayavani, Mar 17, 2019, 7:44 AM IST

m5-nss.jpg

ಹುಣಸೂರು: ನಗರದ ಸಂತಜೋಸಫರ ಪದವಿ ಕಾಲೇಜು ವತಿಯಿಂದ ತಾಲೂಕಿನ ಕಸಬಾ ಹೋಬಳಿಯ ಉಯಿಗೌಡನಹಳ್ಳಿಯಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್‌ ಶಿಬಿರದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಪ್ಲಾಸ್ಟಿಕ್‌ನಿಂದಾಗುವ ಅನಾಹುತ, ಅಗ್ನಿ ಅವಘಡಗಳನ್ನು ತಡೆಯುವ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಗ್ರಾಮಸ್ಥರಲ್ಲಿ ಮನವರಿಕೆ ಮಾಡಿಕೊಟ್ಟರಲ್ಲದೇ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.

ಶಿಬಿರಾರ್ಥಿಗಳು ಇಡೀ ಗ್ರಾಮದಲ್ಲಿ ಶ್ರಮದಾನದ ಮೂಲಕ ಪ್ಲಾಸ್ಟಿಕ್‌ ಸಂಗ್ರಹಿಸಿದ್ದಲ್ಲದೇ ಅದರಿಂದಾಗುವ ಅನಾಹುತದ ಬಗ್ಗೆ ಮಾಹಿತಿ ನೀಡಿದರು. ಇಡೀ ರಸ್ತೆ, ಶಾಲಾ-ಅಂಗನವಾಡಿ ಆವರಣವನ್ನು ಸ್ವಚ್ಛಗೊಳಿಸಿ, ಗ್ರಾಮವನ್ನು ಅಂದಗೊಳಿಸಿದರು.

ಹುಣಸೂರುನ ದಂತ ವೈದ್ಯ ಡಾ.ಮರೀಗೌಡ, ಶಾಲಾ ಮಕ್ಕಳು, ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರಿಗೆ ದಂತ ತಪಾಸಣೆ ನಡೆಸಿ ದಂತ ರಕ್ಷಣೆ ಕುರಿತು ಸಲಹೆ ನೀಡಿದರು. ಪಶುವೈದ್ಯ ಇಲಾಖೆ ಸಹಕಾರದೊಂದಿಗೆ ನೂರಕ್ಕೂ ಹೆಚ್ಚು ಜಾನುವಾರುಗಳ ತಪಾಸಣೆ ನಡೆಸಲಾಯಿತು.

ಪಶುವೈದ್ಯ ಡಾ.ಮಹದೇವಪ್ಪ, ಕಾಲಕಾಲಕ್ಕೆ ಹಾಕಿಸಬೇಕಾದ ಲಸಿಕೆಗಳ ಬಗ್ಗೆ ಮಾಹಿತಿ ನೀಡಿದರು. ಹುಣಸೂರಿನ ಅಗ್ನಿಶಾಮಕ ಠಾಣಾಧಿಕಾರಿ ಸತ್ಯನಾರಾಯಣ್‌ ಹಾಗೂ ಸಿಬ್ಬಂದಿ ಪ್ರಾತ್ಯಕ್ಷತೆ ಮೂಲಕ ಅಗ್ನಿ ಅವಘಡ ಸಂಭವಿಸಿದಾಗ ಗ್ರಾಮಸ್ಥರು ವಹಿಸಬೇಕಾದ ಮುನ್ನೆಚ್ಚರಿಕೆ ಹಾಗೂ ನಂದಿಸುವ ವಿಧಾನವನ್ನು ತಿಳಿಸಿಕೊಟ್ಟರು.

ಉಪನ್ಯಾಸ: ಗ್ರಾಮದಲ್ಲಿ ವಾರಕಾಲ ನಡೆದ ಶಿಬಿರದಲ್ಲಿ ನಿತ್ಯ ನಡೆದ ಉಪನ್ಯಾಸ ಮಾಲಿಕೆಯಲ್ಲಿ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಕುರಿತು ಇನ್ನರ್‌ವೀಲ್‌ ಸದಸ್ಯೆ ಜಯಲಕ್ಷ್ಮೀ, ಪರಿಸರ ಸಂರಕ್ಷಣೆ ಮತ್ತು ಜನಜಾಗೃತಿ ಕುರಿತು ವಿಶ್ರಾಂತ ಪ್ರಾಚಾರ್ಯ ಪ್ರೊ.ಸಿದ್ದೇಗೌಡ ಹಾಗೂ ಡೀಡ್‌ ಶ್ರೀಕಾಂತ್‌,

-ಸ್ವಚ್ಛಗ್ರಾಮ-ಸ್ವಸ್ಥಗ್ರಾಮ ಕುರಿತು ಸ್ವಚ್ಛ ಭಾರತ ಅಭಿಯಾನದ ಸಂಚಾಲಕ ಜಗದೀಶ್‌ ಹಾಗೂ ಸಿಸ್ಟರ್‌ ಅನಿತಾ, ಸಾಮಾನ್ಯ ಕಾನೂನಿನ ಬಗ್ಗೆ ವಕೀಲೆ ಪವಿತ್ರ, ಯುವಕರ ನಡೆ ಸದೃಢ‌ ಸಮಾಜದೆಡೆಗೆ  ಕುರಿತು ಶಿವಮೆಡಿಕಲ್ಸ್‌ನ ಭಾಗ್ಯಕುಮಾರ್‌ ಹಾಗೂ ಸಿಸ್ಟರ್‌ ಲೀನಾಮಸ್ಕರೇನಸ್‌ ಮಾಹಿತಿ ನೀಡಿದರು.

ಸ್ಪರ್ಧೆ: ನಿತ್ಯ ರಾತ್ರಿ ವೇಳೆ ಶಿಬಿರಾರ್ಥಿಗಳು ಜಾಗೃತಿ ಮೂಡಿಸುವ ನಾಟಕ, ಮೈಮ್‌ ಪ್ರದರ್ಶನ ಹಾಗೂ ನೃತ್ಯ, ಗುಂಪುಗಾಯನ ನಡೆಸಿಕೊಟ್ಟರು. ಇದೇ ವೇಳೆ ಗ್ರಾಮದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗೂ ಯುವಕರಿಗೆ ವಾಲಿಬಾಲ್‌ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.

ಶಿಬಿರವನ್ನು ವೀರಶೈವ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್‌ ಉದ್ಘಾಟಿಸಿದರು. ಪ್ರಾಚಾರ್ಯರಾದ ಸಿಸ್ಟರ್‌ ದೀಪ್ತಿ, ಶಿಬಿರದ ಸಂಚಾಲಕ ಕೆ.ಎಚ್‌.ಜಗದೀಶ್‌, ಸಹ ಶಿಬಿರಾಧಿಕಾರಿ ಮಹದೇವ್‌, ಗ್ರಾಪಂ ಸದಸ್ಯರಾದ ಅಜಿತ್‌ಕುಮಾರ್‌, ಉಮೇಶ್‌, ನಾಗರತ್ನ, ಡೇರಿ ಅಧ್ಯಕ್ಷ ಉಮೇಶ್‌, ಯ.ಸೋಮಶೇಖರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.