ಮತ್ತೊಮ್ಮೆ ಮೋದಿಗೆ ಬಿಜೆಪಿ ಗೆಲ್ಲಿಸಿ


Team Udayavani, Mar 19, 2019, 7:15 AM IST

m2-mathomme.jpg

ತಿ.ನರಸೀಪುರ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ 5 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ, ಕಳಂಕರಹಿತ ಆಡಳಿತ ನೀಡಿ ಜನಮೆಚ್ಚುಗೆಗೆ ಪಾತ್ರವಾಗಿರುವುದರಿಂದ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಪ್ರಮುಖ್‌ ಡಾ.ವಾಮನಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ವಿವೇಕಾನಂದ ನಗರದ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ನಡೆದ ವರುಣಾ ವಿಧಾನಸಭಾ ಕ್ಷೇತ್ರದ ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಿ ವಿಭಿನ್ನವಾಗಿ ಆಡಳಿತವನ್ನು ನಡೆಸಿ ನೂರಕ್ಕೆ ನೂರರಷ್ಟು ಸಫ‌ಲರಾಗಿರುವುದರಿಂದ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸಲಿದ್ದಾರೆ ಎಂದರು.

ಸಾಮಾನ್ಯ ಜನರಿಗೂ ಬ್ಯಾಂಕ್‌ ಖಾತೆ ಹೊಂದುವ ಜನಧನ ಖಾತೆಯಿಂದ 93 ಸಾವಿರ ಕೋಟಿ ರೂ. ಉಳಿತಾಯವಾಗಿದೆ. ಸ್ವತ್ಛ ಭಾರತ ಅಭಿಯಾನದ ಮೂಲಕ ದೇಶದ ಸ್ವರೂಪವನ್ನು ಬದಲಿಸಿ, ಹೆದ್ದಾರಿ ಮಾರ್ಗಗಳನ್ನು ವಿಸ್ತರಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುದ್ದೆಯಲ್ಲಿ ಎಚ್‌.ಡಿ.ದೇವೇಗೌಡ ಸೇರಿದಂತೆ ಮಮತಾ ಬ್ಯಾನರ್ಜಿ, ಮಾಯಾವತಿ ಮತ್ತಿತರರನ್ನು ಕಲ್ಪನೆ ಮಾಡಿಕೊಳ್ಳುವುದು ಕಷ್ಟಸಾಧ್ಯವಾಗಿದ್ದರಿಂದ ಮಹಾಘಟ್‌ಬಂಧನ್‌ಕ್ಕೆ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಿನ್ನಡೆಯಾಗಲಿದೆ ಎಂದು ತಿಳಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎ.ಎನ್‌.ಶಿವಯ್ಯ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಪ್ರಬುದ್ಧರು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬಿಜೆಪಿ ಸರ್ಕಾರದ ಯೋಜನೆಗಳು ಮತ್ತು ಪಕ್ಷ ಸಂಘಟನೆ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. 

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ, ಜಿಪಂ ಮಾಜಿ ಅಧ್ಯಕ್ಷರಾದ ಕಾ.ಪು.ಸಿದ್ಧವೀರಪ್ಪ, ಕೆ.ಪಿ.ಪುಟ್ಟಬುದ್ಧಿ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಪರ ಆಯುಕ್ತ ಸಿದ್ಧಪ್ಪ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಜಿ.ರವಿಶಂಕರ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ಉಪಾಧ್ಯಕ್ಷ ಕಲ್ಮಳ್ಳಿ ಜಯಕುಮಾರ್‌,

ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ, ವಕೀಲ ಪರಮೇಶ್‌, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಾದಪ್ಪ, ಆನಂದ, ಯುವ ಮೋರ್ಚಾ ಅಧ್ಯಕ್ಷ ಎಂ.ಮಹದೇವಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಪಿ.ಶ್ರೀಧರ, ನಂದೀಶ, ಎಂ.ಮೋಹನ, ಮುಖಂಡರಾದ ಬಿ.ಮಹೇಶ, ಆರ್‌.ಮಣಿಕಂಠರಾಜ್‌ಗೌಡ, ಸುರೇಶ್‌ ಇತರರಿದ್ದರು.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.