ಮತದಾರರ ನೆರವಿಗೆ ಸಹಾಯವಾಣಿ ಸಂಖ್ಯೆ 1950
Team Udayavani, Mar 23, 2019, 7:37 AM IST
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ದೇಶದ ಮತದಾರರಿಗೆ ಎದುರಾಗುವ ವಿವಿಧ ಗೊಂದಲಗಳನ್ನು ಪರಿಹರಿಸಿಕೊಳ್ಳಲು 1950 ಉಚಿತ ಸಹಾಯವಾಣಿಯನ್ನು ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಈ ಒಂದೇ ಸಂಖ್ಯೆಯು ಕಾರ್ಯ ನಿರ್ವಹಿಸಲಿದೆ.
ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಹೊಸ ನೋಂದಣಿ, ಹಳೇಯ ಪಟ್ಟಿಯಲ್ಲಿ ತಿದ್ದುಪಡಿ ಹಾಗೂ ತಮ್ಮ ಮತಗಟ್ಟೆಯ ಬಗ್ಗೆ ಮಾಹಿತಿಯನ್ನು ಪಡೆಯಲು ಈ ಸಂಖ್ಯೆಗೆ ಕರೆ ಮಾಡಬಹುದು. ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಇದರ ಕಂಟ್ರೋಲ್ ರೂಂಅನ್ನು ತೆರೆಯಲಾಗಿದೆ. ಯಾವ ಜಿಲ್ಲೆಯಲ್ಲಿ ಕರೆ ಮಾಡುತ್ತೆವೆಯೋ ಆ ಜಿಲ್ಲಾ ಕೇಂದ್ರ ಕಂಟ್ರೋಲ್ರೂಂಗೆ ಕರೆ ಹೋಗುತ್ತದೆ.
ನಿಮ್ಮ ಮತದಾರರ ಪಟ್ಟಿಯಲ್ಲಿನ ಸಂದೇಹಗಳ ಬಗ್ಗೆ ಈ ಮೂಲಕ ಮಾಹಿತಿ ಪಡೆದು, ಸರಿಪಡಿಸಿಕೊಳ್ಳಬಹುದು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಹೇಳಿದರೆ ನಿಮ್ಮ ಮತದಾರರ ಪಟ್ಟಿಯಲ್ಲಿರುವ ಗೊಂದಲದ ಬಗ್ಗೆ ನೀವು ಕುಳಿತಲ್ಲಿಯೇ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಚುನಾವಣಾ ಆಯೋಗವು ಸಿದ್ಧಪಡಿಸಿರುವ ಈ ಸಹಾಯವಾಣಿಯ ಮೂಲಕ ನಿಮ್ಮ ಮತಗಟ್ಟೆ ಸಂಖ್ಯೆ ಹಾಗೂ ಮತದಾನ ಮಾಡಬೇಕಾದ ಸ್ಥಳದ ಬಗ್ಗೆಯೂ ನಿಖರವಾದ ಮಾಹಿತಿಯನ್ನು ಪಡೆಯಬಹುದು.
ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಎಚ್.ಡಿ.ಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ನಾಗನಹಳ್ಳಿ, ಸವ್ವೆ, ಹೆಬ್ಬಲಗುಪ್ಪೆ, ಮಾದಾಪುರ ಹಾಗೂ ಎಚ್.ಡಿ.ಕೋಟೆ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮೂಡಿಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭ ತಾಪಂ ಕಾರ್ಯನಿರ್ವಾಹಕ ಡಾ.ಕೆ.ಎ.ದರ್ಶನ್ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಹಾಕುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಾರ್ವಜಿನಿಕರ ಮತಯಂತ್ರ ಬಳಕೆ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಜೆರಾಲ್ಡ್ ರಾಜೇಶ್, ತಾಲೂಕು ಯೋಜನಾಧಿಕಾರಿ ರವೀಂದ್ರಕುಮಾರ್ ಧನಂಜಯ್, ಗುರು, ಎಸ್.ಪಿ.ಮಂಜು, ಪುಟ್ಟಸ್ವಾಮಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ