ಮಾಯಾ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು
Team Udayavani, Jan 10, 2017, 3:45 AM IST
ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಜಾತಿ ರಾಜಕಾರಣ ಮಾಡುತ್ತಿದ್ದು, ಅವರ ಪಕ್ಷವನ್ನು ಚುನಾವಣೆಯಿಂದ ದೂರ ಇಡುವಂತೆ ಒತ್ತಾಯಿಸಿ ಸ್ಥಳೀಯ ಬಿಜೆಪಿ ಮುಖಂಡ ನೀರಜ್ ಶಂಕರ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಾಯಾವತಿ ಅವರು ಜಾತಿ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಿ, ಮತದಾರರನ್ನು ಸೆಳೆಯುತ್ತಿದ್ದಾರೆ. ಇದರಿಂದ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ. ಕೂಡಲೇ ಮಾಯಾವತಿ ವಿರುದ್ಧ ಎಫ್ಐಆರ್ ಕೇಸ್ ದಾಖಲಿ ಸಬೇಕು. ಬಿಎಸ್ಪಿ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದು ಸಕ್ಸೇನಾ ತಮ್ಮ ದೂರಿನಲ್ಲಿ ಮನವಿ ಮಾಡಿದ್ದಾರೆ.
ಧರ್ಮ, ಜಾತಿ, ಮತದ ಹೆಸರಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷಗಳು ಮತ ಕೇಳುವಂತಿಲ್ಲ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಹೀಗೆ ಮತ ಕೇಳುವ ಅಭ್ಯರ್ಥಿ ಅಥವಾ ವಿಜೇತನನ್ನು ಅನರ್ಹಗೊಳಿಸಬಹುದು ಎಂದು ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿತ್ತು.